ಕೊರೊನಾ, ಹಳದಿ ನೊಣಕ್ಕೆ ನಲುಗಿದ ಅಲ್ಫೋನ್ಸೋ: ಧೈರ್ಯ ಕಳೆದುಕೊಂಡ ದಲ್ಲಾಳಿಗಳು


Team Udayavani, Jan 17, 2021, 1:55 PM IST

ಕೊರೊನಾ, ಹಳದಿ ನೊಣಕ್ಕೆ ನಲುಗಿದ ಅಲ್ಫೋನ್ಸೋ: ಧೈರ್ಯ ಕಳೆದುಕೊಂಡ ದಲ್ಲಾಳಿಗಳು

ಧಾರವಾಡ: ಸೀಮೆಗೆಲ್ಲ ಹರಡಿದ ಮಾವಿನ ಹೂ ಬಾಣದ ಕಂಪು, ಎಲೆಗಳು ಕಾಣದಷ್ಟು ಚಿಗಿರೊಡೆದ ಮಾವಿನ ಹೂವು ಮತ್ತು ಹೀಚು, ಸಂಕ್ರಾಂತಿ ಸಂಭ್ರಮಕ್ಕೆ ಭೂತಾಯಿ ಸೊಬಗು ಹೆಚ್ಚಿಸಿ ನಿಂತ ಮಾವಿನ ತೋಟಗಳು, 1.5 ಲಕ್ಷ ಟನ್‌ ಮಾವು ಉತ್ಪಾದನೆ
ನಿರೀಕ್ಷೆ. ಆದರೆ ಕೊರೊನಾ ಮಹಾಮಾರಿ ಮಾಡಿದ ಆಘಾತ ಮತ್ತು ಹಳದಿ ನೋಣದ ಕಾಟಕ್ಕೆ ಹೆದರಿದ ಮಾವು ದಲ್ಲಾಳಿಗಳು.

ಹೌದು, ರಾಜ್ಯದಲ್ಲಿಯೇ ಅತೀ ಹೆಚ್ಚು ಅಲ್ಫೋನ್ಸೋ ಮಾವು ಬೆಳೆಯುವ ಜಿಲ್ಲೆ ಎಂದೇ ಖ್ಯಾತಿ ಪಡೆದಿರುವ ಧಾರವಾಡ ಜಿಲ್ಲೆಯಲ್ಲಿ ಈ ವರ್ಷ ಮಾವು ಬೆಳೆ ಹುಲುಸಾಗಿ ಹೂವು ಹೀಚು ಬಿಡುತ್ತಿದ್ದು, ಬೆಳೆಗಾರರು ಸಂತಸದಲ್ಲಿದ್ದಾರೆ. ಸಂಕ್ರಾಂತಿ ಸಮಯಕ್ಕಾಗಲೇ ಎಲ್ಲಾ ತೋಟಗಳು ಹೂ ಬಿಟ್ಟಿದ್ದು, ಈ ವರ್ಷ ಪ್ರೋಲಾಂಗ್‌ ಪ್ರೊಸೆಸ್‌ ಅಂದರೆ ಸುದೀರ್ಘ‌ ಸುಗ್ಗಿಯ ಕಾಟ
ಮಾವಿನ ತೋಪುಗಳಿಗೆ ಇಲ್ಲವಾಗಿದೆ. ಹಿಂದಾಗಿ ಹೂ ಬಿಡುವ ತೋಟಗಳು ಸಹ ಈ ವರ್ಷ ಈಗಲೇ ಹೂ ಹಿಡಿದಿದ್ದು, ಮಾರ್ಚ್‌ ಮತ್ತು ಎಪ್ರಿಲ್‌ ತಿಂಗಳಲ್ಲಿಯೇ ಉತ್ತಮ ಫಸಲಿನೊಂದಿಗೆ ರೈತರ ಕೈಗೆ ಲಭಿಸುವ ವಿಶ್ವಾಸ ಮೂಡಿದೆ.

ಆದರೆ ಕಳೆದ ವರ್ಷ ಮಾವಿನ ಹಣ್ಣುಗಳನ್ನು ಕೊಳೆಯುವಂತೆ ಮಾಡಿದ ಹಳದಿ ನೊಣ ಮತ್ತು ಕೊರೊನಾ ಮಹಾಮಾರಿ ಲಾಕ್‌ಡೌನ್‌ನಿಂದಾಗಿ ಮಾವು ದಲ್ಲಾಳಿಗಳು ಸಂಪೂರ್ಣ ಸುಸ್ತಾಗಿ ಹೋಗಿದ್ದು, ಈ ವರ್ಷ ಮುಂಗಡವಾಗಿ ಹಣ ಬಿಚ್ಚಿ ಧೈರ್ಯದಿಂದ ಮಾವಿನ ತೋಪುಗಳನ್ನು ಗುತ್ತಿಗೆಗೆ ಕೊಳ್ಳಲು ಮಾತ್ರ ಹಿಂದೇಟು ಹಾಕುತ್ತಿದ್ದಾರೆ.

ಇದನ್ನೂ ಓದಿ:ಕಾಡಿನಿಂದ ಹಿಡಿದ ಮೊಲವನ್ನು ಮತ್ತೆ ಕಾಡಿಗೆ ಬಿಟ್ಟು ಸಂಕ್ರಾಂತಿ ಹಬ್ಬ ಆಚರಿಸಿದ ಗ್ರಾಮಸ್ಥರು

ಧೈರ್ಯ ಮಾಡದ ಗುತ್ತಿಗೆದಾರರು: ಈ ಭಾಗದ ಮಾವಿನ ತೋಪುಗಳನ್ನು ಗೋವಾ, ಮುಂಬೈ, ಅಹ್ಮದಾಬಾದ್‌ ಗಳಿಂದ ಬಂದ ಮಾವು ವ್ಯಾಪಾರಿ ಗುತ್ತಿಗೆದಾರರು ಪ್ರತಿವರ್ಷ ಕೊಳ್ಳುತ್ತಾರೆ. ಸಂಕ್ರಾಂತಿ ಸಮಯಕ್ಕೆ ಗಿಡಗಳು ಹಿಡಿದ ಹೂವು ಮತ್ತು ಹೀಚಿನ ಮೇಲೆ ತೋಟಕ್ಕೆ ಬೆಲೆಕಟ್ಟುವ ವ್ಯಾಪಾರಿಗಳು ಅರ್ಧದಷ್ಟು ಮಾತ್ರ ಹಣ ಕೊಟ್ಟು, ಇನ್ನುಳಿದದ್ದನ್ನು ಮಾವಿನ ಫಸಲನ್ನು ಕೀಳುವಾಗ ಬೆಳೆಗಾರರಿಗೆ ಕೊಡುತ್ತಾರೆ. ಆದರೆ ಕೊರೊನಾ ಮಹಾಮಾರಿ ಮಾಡಿದ ಆಘಾತದಿಂದಾಗಿ ಈ ವರ್ಷ ಹೆಚ್ಚು ತೋಟಗಳಿಗೆ ಮುಂಗಡ ಹಣ ಕೊಡುವ ದಲ್ಲಾಳಿಗೇ ಬರುತ್ತಿಲ್ಲ. ಬಂದರೂ, ಮುಂದೆ ಮಾರುಕಟ್ಟೆ ನೋಡಿಕೊಂಡು ಎಲ್ಲರೂ ಸರಿ ಇದ್ದರೆ ಮಾತ್ರವೇ ಹೆಚ್ಚಿನ ಹಣ ನೀಡುತ್ತೇವೆ ಎನ್ನುವ ಷರತ್ತುಗಳನ್ನು ಹಾಕಿ ತೋಟಗಳಿಗೆ ಮುಂಗಡ ಹಣ ಕೊಡುತ್ತಿದ್ದಾರೆ. ಪ್ರತಿವರ್ಷ ಇಷ್ಟೊತ್ತಿಗಾಗಲೇ ಶೇ.70 ರಷ್ಟು ತೋಟಗಳನ್ನು ದಲ್ಲಾಳಿಗಳು ಬುಕ್‌ ಮಾಡಿ ಬಿಡುತ್ತಿದ್ದರು. ಆದರೆ ಈ ವರ್ಷ ಮಾವಿಗೆ ಹಣ ಹಾಕಲು ದಲ್ಲಾಳಿಗಳು ಹಿಂದೇಟು ಹಾಕುತ್ತಿದ್ದಾರೆ.

ಕಳೆದ ವರ್ಷಗಳಿಗೆ ಹೊಲಿಸಿದರೆ ಈ ವರ್ಷ ಚೆನ್ನಾಗಿ ಬೆಳೆ ಬರುವ ನಿರೀಕ್ಷೆ ಈಗಲೂ ಇದೆ. ಆದರೆ ಜಿಗಿರೋಗ ಮತ್ತು ಇಬ್ಬನಿ ಕಾಟ ಹೆಚ್ಚಾಗಿರುವುದು ರೈತರಲ್ಲೂ ಆತಂಕ ಮೂಡಿಸಿದೆ.ಮೂಡಣ ಗಾಳಿ ಚೆನ್ನಾಗಿ ಬೀಸಿದರೆ, ಯಾವುದೇ ದೊಡ್ಡ ಗಾಳಿ ಮಳೆ ಫೆಬ್ರವರಿ ಅಥವಾ ಮಾರ್ಚ್‌ನಲ್ಲಿ ಕಾಣಿಸಿಕೊಳ್ಳದೆ ಹೋದರೆ ಸಾಕು ಎನ್ನುತ್ತಿದ್ದಾರೆ ತೋಟಗಾರಿಕೆ ಇಲಾಖೆ ಮಾವು ತಜ್ಞರು.

ಹೊರ ರಾಜ್ಯ, ದೇಶಕ್ಕೂ ಸೈ: ಉತ್ತರ ಕರ್ನಾಟಕ ಸೇರಿದಂತೆ, ಗೋವಾ, ಮಹಾರಾಷ್ಟ್ರ, ಗುಜರಾತ್‌, ಆಂಧ್ರಪ್ರದೇಶಗಳಲ್ಲಿ ಸಾಕಷ್ಟು ಬೇಡಿಕೆ ಹೊಂದಿರುವ ಅಲ್ಫೋನ್ಸೋ ಮಾವಿನ ಹಣ್ಣಿನ ಖಣಜಗಳೇ ಧಾರವಾಡ ಮತ್ತು ಬೆಳಗಾವಿ ಜಿಲ್ಲೆ. ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಒಂದು ಜಿಲ್ಲೆ ಒಂದು ಉತ್ಪನ್ನದಡಿ ಧಾರವಾಡ ಜಿಲ್ಲೆಯ ಅಲ್ಫೋನ್ಸೋ ಮಾವು ಸ್ಥಾನ
ಪಡೆದುಕೊಂಡಿದೆ. ಸರ್ಕಾರ ಇದರ ಮೌಲ್ಯವರ್ಧನೆಗೆ ಶ್ರಮಿಸುತ್ತಿದೆಯಾದರೂ ಇನ್ನೂ ಅಚ್ಚುಕಟ್ಟು ವ್ಯವಸ್ಥೆ ಜಾರಿಯಾಗಿಲ್ಲ. ಮಾವು ಬೆಳೆಗಾರರು ಅಲ್ಫೋನ್ಸೋ ಮಾವು ರಫ್ತಿಗೆ ಬೇಕಾಗುವ ತಂತ್ರಜ್ಞಾನ, ಪ್ಯಾಕಿಂಗ್‌, ಸಂಸ್ಕರಣೆಗೆ ಆದ್ಯತೆ ಸಿಗಬೇಕು ಎನ್ನುತ್ತಲೇ ಇದ್ದಾರೆ. ಆದರೆ ಅದಕ್ಕೆ ಪೂರಕವಾದ ವಾತಾವರಣ ಸದ್ಯಕ್ಕೆ ಜಿಲ್ಲೆಯಲ್ಲಿ ಕಾಣಿಸುತ್ತಲೇ ಇಲ್ಲ.

ಟಾಪ್ ನ್ಯೂಸ್

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.