Open AI: ಸಿಇಒ ಆಗಿ ಆಲ್ಟ್ಮನ್‌ ವಾಪಸ್‌!


Team Udayavani, Nov 23, 2023, 12:15 AM IST

altman

ಸ್ಯಾನ್‌ ಫ್ರಾನ್ಸಿಸ್ಕೋ: ಇತ್ತೀಚೆಗೆ ಕೃತಕ ಬುದ್ಧಿಮತ್ತೆ (ಎ.ಐ.) ಕಂಪೆನಿ ಓಪನ್‌ ಎಐನಲ್ಲಿ ಮತ್ತೂಮ್ಮೆ ನಾಟಕೀಯ ಬೆಳವಣಿಗೆಗಳು ನಡೆದಿವೆ. ಕೆಲವೇ ದಿನಗಳ ಹಿಂದೆ ಆ ಸಂಸ್ಥೆಯ ಹುಟ್ಟಿಗೆ ಕಾರಣರಾಗಿದ್ದ ಸ್ಯಾಮ್‌ ಆಲ್ಟ್ಮನ್‌ರನ್ನು ಹೊರಹಾಕಲಾಗಿತ್ತು. ಇದೀಗ ಮೈಕ್ರೋಸಾಫ್ಟ್ ಸಿಇಒ ಸತ್ಯ ನಾದೆಳ್ಲ ಮಧ್ಯಸ್ಥಿಕೆಯೊಂದಿಗೆ, ಸಿಇಒ (ಮುಖ್ಯ ಕಾರ್ಯನಿರ್ವಹಣಾ­ಧಿಕಾರಿ) ಆಗಿ ಆಲ್ಟ್ ಮನ್‌ ಕಂಪೆನಿಗೆ ಮರಳಿದ್ದಾರೆ! ಮುಂದಿನ ಐದು ದಿನಗಳಲ್ಲಿ ಈ ಪ್ರಕ್ರಿಯೆಗಳು ಪೂರ್ಣಗೊಳ್ಳುವ ನಿರೀಕ್ಷೆ ಇದೆ.

ಇದರ ಜತೆಗೆ ಓಪನ್‌ ಎಐಗೆ ಹೊಸ ಆಡಳಿತ ಮಂಡಳಿಯನ್ನೂ ರಚಿಸಲಾಗಿದೆ. ಸೇಲ್ಸ್‌ಫೋರ್ಸ್‌ ಎಂಬ ಸಾಫ್ಟ್ವೇರ್‌ ಕಂಪೆನಿಯ ಮಾಜಿ ಸಹ ಸಿಇಒ ಬ್ರೆಟ್‌ ಟೇಲರ್‌ ಅದರ ನೇತೃತ್ವ ವಹಿಸಲಿದ್ದಾರೆ. ಹೊಸತರಲ್ಲಿ ಆಲ್ಟ್ ಮನ್‌ ಅವರನ್ನು ವಜಾಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಆ್ಯಡಮ್‌ ಡಿ ಆ್ಯಂಗ್ಲೋ, ಅಮೆರಿಕದ ಹಣಕಾಸು ಖಾತೆ ಮಾಜಿ ಸಚಿವ ಲಾರಿ ಸಮನ್ಸ್‌ ಸೇರಿದಂತೆ ಹಲವರು ಇರಲಿದ್ದಾರೆ.

ಆಲ್ಟ್ಮನ್‌ ಹೇಳಿದ್ದೇನು?: ಈ ಬೆಳವಣಿಗೆಯ ಅನಂತರ ಸ್ಯಾಮ್‌ ಆಲ್ಟ್ಮನ್‌ ಟ್ವೀಟ್‌ ಮಾಡಿದ್ದು “ನಾನು ಓಪನ್‌ ಎಐ ಕಂಪೆನಿಯನ್ನು ಪ್ರೀತಿಸುತ್ತೇನೆ. ಕಳೆದ ಕೆಲವು ದಿನಗಳಿಂದ ಸಂಸ್ಥೆಗಾಗಿ ಮತ್ತು ಹಾಲಿ ತಂಡಕ್ಕಾಗಿ ಕೆಲಸ ಮಾಡುತ್ತಿದ್ದೆ. ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಿಕೊಂಡು ಮುಂದಕ್ಕೆ ಸಾಗೋಣ’ ಎಂದು ಬರೆದುಕೊಂಡಿದ್ದಾರೆ. ಇದರ ಜತೆಗೆ ಗ್ರೆಗ್‌ ಬ್ರೋಕ್‌ಮನ್‌ ಅವರು ಕೂಡ ಕಂಪೆನಿಗೆ ಮರಳಿದ್ದಾರೆ. ಈ ನಿಟ್ಟಿನಲ್ಲಿ ಅವರು ತಮ್ಮ ಸಹೋದ್ಯೋಗಿಗಳ ಜತೆಗೆ ಸೆಲ್ಫಿ ತೆಗೆದುಕೊಂಡು “ನಾವು ಮತ್ತೆ ಬಂದಿದ್ದೇವೆ’ ಎಂದು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ

ಹಿಂದೆ ಆಗಿದ್ದೇನು?: ನ.19ರಂದು ನಡೆದಿದ್ದ ನಾಟಕೀಯ ಬೆಳವಣಿಗೆಯಲ್ಲಿ ಸ್ಯಾಮ್‌ ಆಲ್ಟ್ಮನ್‌ ಮತ್ತು ಅಧ್ಯಕ್ಷ ಗ್ರೆಗ್‌ ಬ್ರೋಕ್‌ಮನ್‌ ಅವರನ್ನು ವಜಾ ಮಾಡಲಾಗಿತ್ತು. ಇದಾದ ಬಳಿಕ ಓಪನ್‌ ಎಐನ 750ಕ್ಕೂ ಅಧಿಕ ಮಂದಿ ಹುದ್ದೆಗೆ ರಾಜೀನಾಮೆ ನೀಡುವ ಬೆದರಿಕೆ ಒಡ್ಡಿದ್ದರು. ಮೈಕ್ರೋಸಾಫ್ಟ್ ಸಿಇಒ ಸತ್ಯ ನಾದೆಳ್ಲ ಸೇರಿದಂತೆ ತಾಂತ್ರಿಕ ಕ್ಷೇತ್ರದ ಮಾತುಕತೆಯ ಬಳಿಕ ವಿವಾದ ಸುಖಾಂತ್ಯಗೊಳ್ಳುವತ್ತ ಸಾಗಿದೆ. ಓಪನ್‌ ಎಐನಲ್ಲಿ ಮೈಕ್ರೋಸಾಫ್ಟ್ ಕೂಡ ಬಂಡವಾಳ ಹೂಡಿಕೆ ಮಾಡಿತ್ತು. ಹೀಗಾಗಿ ನಾದೆಳ್ಲ ಸ್ಯಾಮ್‌ ಆಲ್ಟ್ಮನ್‌ರನ್ನು ಹುದ್ದೆಯಲ್ಲಿ ಉಳಿಸಿಕೊಳ್ಳಲು ಪ್ರಯತ್ನಿಸಿದ್ದರು. ಮಂಗಳವಾರ ನಡೆದಿದ್ದ ಮತ್ತೂಂದು ಬೆಳವಣಿಗೆಯಲ್ಲಿ ಮೈಕ್ರೋಸಾಫ್ಟ್ನ ಹೊಸ ಕೃತಕ ಬುದ್ಧಿಮತ್ತೆ ಸಂಶೋಧನ ತಂಡಕ್ಕೆ ಸ್ಯಾಮ್‌ ಆಲ್ಟ್ ಮನ್‌ರನ್ನೇ ಸಿಇಒ ಆಗಿ ನೇಮಿಸಿರುವ ಬಗ್ಗೆ ನಾದೆಳ್ಲ ಪ್ರಕಟಿಸಿದ್ದರು.

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.