ಅಂಬಾಗಿಲು-ಪೆರಂಪಳ್ಳಿ ರಸ್ತೆ ಕಾಮಗಾರಿ ಪುನಃ ಆರಂಭ
Team Udayavani, Feb 22, 2022, 12:22 PM IST
ಉಡುಪಿ : ಕೆಲವು ದಿನಗಳಿಂದ ಸ್ಥಗಿತಗೊಂಡಿದ್ದ ಅಂಬಾಗಿಲು-ಪೆರಂಪಳ್ಳಿ ಮೂಲಕ ಮಣಿಪಾಲ ಸಂಪರ್ಕಿಸುವ ಚತುಷ್ಪಥ ರಸ್ತೆ ಕಾಮಗಾರಿ ಪುನಃ ಆರಂಭಗೊಂಡಿದೆ.
ಕಾಮಗಾರಿ ಸ್ಥಗಿತವಾಗಿದ್ದ ಬಗ್ಗೆ ಉದಯವಾಣಿ ಫೆ. 14ರಂದು “ಅರ್ಧಕ್ಕೆ ನಿಂತ ಅಂಬಾಗಿಲು- ಪೆರಂಪಳ್ಳಿ ರಸ್ತೆ ಕಾಮಗಾರಿ!’ ಶೀರ್ಷಿಕೆ ಅಡಿಯಲ್ಲಿ ವಿಸ್ತೃತ ವರದಿ ಪ್ರಕಟಿಸಿತ್ತು.
ಇದಕ್ಕೆ ಸ್ಪಂದಿಸಿದ ಲೋಕೋಪಯೋಗಿ ಇಲಾಖೆ ಗುತ್ತಿಗೆದಾರರ ಮೂಲಕ ಕಾಮಗಾರಿ ಪುನಃ ಆರಂಭಿಸಿದೆ. ಇದೀಗ ರಸ್ತೆಗೆ ಅಂಬಾಗಿಲಿನಿಂದ ಬಲಬದಿಯಲ್ಲಿ ಯಂತ್ರಗಳ ಮೂಲಕ ಜಲ್ಲಿಕಲ್ಲನ್ನು ಹೊದೆಸಿ, ಸಮತಟ್ಟು ಮಾಡುವ ಕೆಲಸ ನಡೆಯುತ್ತಿದೆ. 23 ಕೋ. ರೂ. ವೆಚ್ಚದಲ್ಲಿ ಚತುಷ್ಪಥ ಕಾಮಗಾರಿ ರಸ್ತೆ ನಿರ್ಮಾಣ ಯೋಜನೆ ರೂಪಿಸಲಾಗಿದ್ದು, ಒಟ್ಟು
3.9 ಕಿ.ಮೀ. ರಸ್ತೆಯಲ್ಲಿ 1.5 ಕಿ.ಮೀ. ರಸ್ತೆ ಕಾಮಗಾರಿ ಬಾಕಿ ಉಳಿದಿತ್ತು. ಕಾಮಗಾರಿ ಬೇಗ ನಿರ್ವಹಿಸುವಂತೆ. ಇಲಾಖೆ ಹಿರಿಯ ಎಂಜಿನಿಯರ್, ಗುತ್ತಿಗೆದಾರರಿಗೆ ನೋಟಿಸ್ ಜಾರಿ ಮಾಡಿದ್ದರು.
ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡಿದ್ದರಿಂದ ಅಂಬಾಗಿಲಿನಿಂದ ರೈಲ್ವೇ ಮೇಲ್ಸೇತುವೆವರೆಗಿನ ರಸ್ತೆ ತೀರ ಹದಗೆಟ್ಟಿತ್ತು. ವಿಪರೀತ ಧೂಳು, ಕೆಸರು, ಕಲ್ಲುಗಳ ಕಣದಿಂದ ದ್ವಿಚಕ್ರ ವಾಹನ ಸವಾರರು, ಅರ್ಧಂಬರ್ಧ ಕಾಮಗಾರಿಯಿಂದ ರಸ್ತೆ ಬದಿಯ ಅಂಗಡಿ, ಮುಂಗಟ್ಟು, ಹೊಟೇಲ್ ವ್ಯಾಪಾರಿಗಳು, ಸ್ಥಳೀಯರು ಧೂಳಿನಿಂದ ಹೈರಾಣಾಗಿದ್ದರು.
ಮುಂದಿನ 10 ದಿನಗಳಲ್ಲಿ ಪೂರ್ಣ
ಅರ್ಧಕ್ಕೆ ನಿಂತಿದ್ದ ಅಂಬಾಗಿಲಿನಿಂದ ರೈಲ್ವೇ ಮೇಲ್ಸೇತುವೆವರೆಗಿನ 1.5 ಕಿ.ಮೀ. ರಸ್ತೆ ಕಾಮಗಾರಿ ಪುನಃ ಆರಂಭಗೊಂಡಿದೆ. ಮೊದಲ ಹಂತದಲ್ಲಿ ಒಂದು ಬದಿಯ ಕಾಮಗಾರಿ ಮುಂದಿನ 10 ದಿನದಲ್ಲಿ ಪೂರ್ಣಗೊಳಿಸಲಿದ್ದೇವೆ. ಮುಂದೆ ಕೆಲಸ ನಿರಂತರ ನಡೆಯಲಿದ್ದು, ಶೀಘ್ರ ಇನ್ನೊಂದು ಬದಿ ಕಾಮಗಾರಿ ಪ್ರಾರಂಭಿಸಲಿದ್ದೇವೆ.
-ಜಗದೀಶ್ ಭಟ್, ಎಇಇ, ಲೋಕೋಪಯೋಗಿ ಇಲಾಖೆ, ಉಡುಪಿ.
ಇದನ್ನೂ ಓದಿ : ಸ್ಮಾರ್ಟ್ ನಗರದಲ್ಲಿ ಸ್ಮಾರ್ಟ್ “ಸೈಕಲ್ ಟ್ರ್ಯಾಕ್ ‘! ಸೈಕಲ್ ಸ್ನೇಹಿ ಮಂಗಳೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
MUST WATCH
ಹೊಸ ಸೇರ್ಪಡೆ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!