UNO: ಜಗತ್ತಿನಲ್ಲಿ ಈಗಲೂ ದ್ವಂದ್ವ ನಿಲುವು: ಜೈಶಂಕರ್
ವಿಶ್ವಸಂಸ್ಥೆಯ ಭದ್ರತಾ ಮಂಡಳಿ ವ್ಯವಸ್ಥೆ ಬಗ್ಗೆ ಸಚಿವ ಜೈಶಂಕರ್ ಟೀಕೆ
Team Udayavani, Sep 24, 2023, 10:19 PM IST
ನ್ಯೂಯಾರ್ಕ್: ಜಗತ್ತಿನಲ್ಲಿ ಈಗಲೂ ಹಲವು ರಾಷ್ಟ್ರಗಳು ದ್ವಂದ್ವ ನಿಲುವುಗಳನ್ನು ಹೊಂದಿವೆ. ಉನ್ನತ ಹಾಗೂ ಪ್ರಭಾವಯುತ ಸ್ಥಾನಗಳಲ್ಲಿ ಇದ್ದರೂ ವ್ಯವಸ್ಥೆಯಲ್ಲಿ ಬದಲಾವಣೆ ತರಲು, ಅದಕ್ಕೆ ಒಗ್ಗಲು ಸಿದ್ಧರಿಲ್ಲ. ಬದಲಾವಣೆ ಸಾಧ್ಯವಾಗದಂತೆ ಅವುಗಳು ಪ್ರಭಾವ ಬೀರುತ್ತಿವೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಆರೋಪಿಸಿದ್ದಾರೆ.
ನ್ಯೂಯಾರ್ಕ್ನಲ್ಲಿ ಆಬ್ಸರ್ವರ್ ರಿಸರ್ಚ್ ಫೌಂಡೇಷನ್, ವಿಶ್ವಸಂಸ್ಥೆಯಲ್ಲಿನ ಭಾರತದ ಶಾಶ್ವತ ಪ್ರತಿನಿಧಿ ಕಚೇರಿ ಜತೆಗೂಡಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರ್ಥಿಕವಾಗಿ ಹಾಗೂ ಐತಿಹಾಸಿಕವಾಗಿ ಪ್ರಬಲ ಸ್ಥಾನಗಳನ್ನು ಹೊಂದಿರುವವರು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿದ್ದಾರೆ.
ಅವರು ಜಗತ್ತಿನ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಪ್ರತಿರೋಧ ವ್ಯಕ್ತಪಡಿಸುತ್ತಿದ್ದಾರೆ. ಬದಲಾವಣೆ ಆಗಬೇಕು ಎಂಬ ರಾಜಕೀಯ ಒತ್ತಾಸೆಗಿಂತ ಆ ರೀತಿ ಆಗಲೇಬಾರದು ಎಂಬ ಒತ್ತಡಗಳೂ ಹೆಚ್ಚಿವೆ ಎಂದು ಸಚಿವರು ಹೇಳಿದ್ದಾರೆ. ಕೊರೊನಾ ಕಾಲದಲ್ಲಿ ಜಗತ್ತಿನಲ್ಲಿ ದಕ್ಷಿಣದ ರಾಷ್ಟ್ರಗಳಿಗೆ ಈ ಮನೋಭಾವ ಹೆಚ್ಚು ಅನುಭವಕ್ಕೆ ಬಂದಿದೆ ಎಂದರು.
ಜಗತ್ತಿನ ವ್ಯವಸ್ಥೆಯಲ್ಲಿ ಬದಲಾವಣೆಯಾಗಬೇಕು ಎಂದು ಮುಖ ಸ್ತುತಿಗಾಗಿ ಹೇಳಿಕೊಳ್ಳುತ್ತಾರೆ. ಯಥಾಸ್ಥಿತಿಯಲ್ಲಿ ಅವರಿಗೆ ಅಂಥ ಇಚ್ಛಾಶಕ್ತಿಯೇ ಇಲ್ಲ. ಜಗತ್ತು ಈಗಲೂ ದ್ವಂದ್ವ ನೀತಿಯನ್ನೇ ಹೊಂದಿದೆ ಎಂದಿದ್ದಾರೆ ಜೈಶಂಕರ್. ನವದೆಹಲಿಯಲ್ಲಿ ಸೆ.9, 10ರಂದು ಮುಕ್ತಾಯವಾದ ಜಿ20 ರಾಷ್ಟ್ರಗಳ ಸಮ್ಮೇಳನದಲ್ಲಿ ಸಾಂಸ್ಕೃತಿಕವಾಗಿ ಸಮನ್ವಯ ಸಾಧಿಸಲಾಗಿತ್ತು ಎಂಬುದಕ್ಕೆ ಸಿರಿಧಾನ್ಯಗಳನ್ನು ಯಶಸ್ವಿಯಾಗಿ ಆಹಾರ ಪದ್ಧತಿಯಲ್ಲಿ ಅಳವಡಿಸಲಾಗಿರುವುದೇ ಸಾಕ್ಷಿ ಎಂದೂ ಅವರು ಹೇಳಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
MUST WATCH
ಹೊಸ ಸೇರ್ಪಡೆ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ
Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ
T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್