ಅಮೂಲ್ಯ ನಡೆಗೆ ಬಹುಮಾನ್ಯರ ಖಂಡನೆ


Team Udayavani, Feb 22, 2020, 3:09 AM IST

amooya-bade

ಪೌರತ್ವ ಕಾಯ್ದೆ ವಿರೋಧಿಸಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನಾ ನಡೆಗೆ ರಾಜ್ಯಾದ್ಯಂತ ಖಂಡನೆ ವ್ಯಕ್ತವಾಗುತ್ತಿದೆ. ಯುವತಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಜ್ಯದ ಹಲವೆಡೆ ಹಿಂದೂಪರ, ಕನ್ನಡಪರ ಸಂಘಟನೆಗಳು ಶುಕ್ರವಾರ ಪ್ರತಿಭಟನೆ ನಡೆಸಿದವು. ಇದೇ ವೇಳೆ, ರಾಜಕೀಯ ಪಕ್ಷಗಳ ನಾಯಕರು, ವಿವಿಧ ಕ್ಷೇತ್ರಗಳ ಗಣ್ಯರು ಸೇರಿ ಬಹುಮಾನ್ಯ ಮುಖಂಡರೆಲ್ಲಾ ಆಕೆಯ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಮೂಲ್ಯಳ ದೇಶದ್ರೋಹಿ ಹೇಳಿಕೆ ವಿರುದ್ಧ ವ್ಯಕ್ತವಾಗಿರುವ ಆಕ್ರೋಶದ ಕಿಡಿಗಳಿವು.

ಅಮೂಲ್ಯ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ
ಬೆಂಗಳೂರು: ಪೌರತ್ವ ಕಾಯ್ದೆ ವಿರೋಧಿಸಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಯುವತಿ ಅಮೂಲ್ಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಜ್ಯಾದ್ಯಂತ ಹಿಂದೂಪರ, ಕನ್ನಡಪರ ಸಂಘಟನೆಗಳು ಶುಕ್ರವಾರ ಪ್ರತಿಭಟನೆ ನಡೆಸಿದವು. ಮಡಿಕೇರಿಯಲ್ಲಿ ಜನರಲ್‌ ತಿಮ್ಮಯ್ಯ ವೃತ್ತದ ಬಳಿ ಜಮಾಯಿಸಿದ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು, ಅಮೂಲ್ಯ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಅರಸಿಕೆರೆ, ಬೇಲೂರು, ಹಾಸನ ಸೇರಿ ಹಾಸನ ಜಿಲ್ಲೆಯ ವಿವಿಧೆಡೆ, ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್‌ ಕುಮಾರ್‌ ಶೆಟ್ಟಿ ಬಣ), ಎಐಡಿಎಸ್‌ಒ (ಅಖೀಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ)ಯ ಕಾರ್ಯಕರ್ತರು, ಪಾಕಿಸ್ತಾನ ಪರ ಘೋಷಣೆ ಕೂಗಿ ದೇಶದ್ರೋಹಿ ಧೋರಣೆ ತೋರಿರುವ ಅಮೂಲ್ಯರನ್ನು ಕೂಡಲೇ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.

ಕೋಲಾರದಲ್ಲಿ ನಗರಠಾಣೆ ಎದುರು ಪ್ರತಿಭಟನೆ ನಡೆಸಿದ ಭಜರಂಗದಳದ ಕಾರ್ಯಕರ್ತರು, ಆರಕ್ಷಕ ಉಪನಿರೀಕ್ಷಕರಿಗೆ ದೂರು ಸಲ್ಲಿಸಿ, ಅಮೂಲ್ಯ ಹಾಗೂ ಅವರಿಗೆ ಪ್ರೇರಣೆ ನೀಡುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿದರು. ಇದೇ ವೇಳೆ, ಬೆಂಗಳೂರು, ಚಿಕ್ಕಬಳ್ಳಾಪುರ, ಕಲಬುರಗಿ, ರಾಮನಗರ, ಹುಬ್ಬಳ್ಳಿ, ಶಿವಮೊಗ್ಗ, ಉಡುಪಿ, ಮಂಡ್ಯ ಸೇರಿ ರಾಜ್ಯದ ಇತರೆಡೆಯೂ ಪ್ರತಿಭಟನೆಗಳು ನಡೆದವು. ಈ ಮಧ್ಯೆ, ಅಮೂಲ್ಯ ಲಿಯೋನಾ ಮತ್ತು ಆರಿದ್ರಾ ಹಾಗೂ ಕಾರ್ಯಕ್ರಮ ಸಂಘಟಕರ ಗಡಿಪಾರಿಗೆ ಒತ್ತಾಯಿಸಿ ಹೂವಿನಹಡಗಲಿಯಲ್ಲಿ ಶನಿವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಪಾಕಿಸ್ತಾನ ಪರ ಘೋಷಣೆ ಕೂಗುವುದು ದೇಶದ್ರೋಹದ ಕೆಲಸ. ಕಾನೂನಿನ ದೃಷ್ಟಿಯಿಂದ ಈ ರೀತಿಯ ಹೇಳಿಕೆ ಕೊಡುವುದು ತಪ್ಪು. ಕೆಲವರು ಯುವ ಜನರಿಗೆ ಈ ರೀತಿ ಪ್ರಚೋದನೆ ನೀಡುತ್ತಿದ್ದಾರೆ. ಈ ರೀತಿ ಪ್ರಚೋದನೆ ನೀಡುವುದೂ ಕೂಡ ದೇಶದ್ರೋಹದ ಕೆಲಸ. ಕಾರ್ಯಕ್ರಮ ಆಯೋಜಕರ ವಿರುದ್ಧ ಕ್ರಮ ಕೈಗೊಳ್ಳುವುದು ಪೊಲೀಸರಿಗೆ ಬಿಟ್ಟ ವಿಚಾರ. ಕಾಶ್ಮೀರದಲ್ಲಿ ಕೂಡ ಯುವಕರನ್ನು ಇದೇ ರೀತಿಯಲ್ಲಿ ಪ್ರಚೋದನೆ ಮಾಡುತ್ತಿದ್ದರು. 370ನೇ ವಿಧಿ ರದ್ದುಪಡಿಸುವ ಮೂಲಕ ಕೇಂದ್ರ ಸರ್ಕಾರ ಅದಕ್ಕೆಲ್ಲ ಬ್ರೇಕ್‌ ಹಾಕುವ ಕೆಲಸ ಮಾಡಿದೆ.
-ಬಿ.ಸಿ.ಪಾಟೀಲ್‌, ಕೃಷಿ ಸಚಿವ

ಪಾಕಿಸ್ತಾನದ ಬಗ್ಗೆ ಪ್ರೀತಿಯಿದ್ದರೆ ಅಲ್ಲಿಗೆ ಹೋಗಲಿ. ಪೌರತ್ವ ತಿದ್ದುಪಡಿ ವಿರುದ್ಧ ಎಂದು ಹೇಳಿಕೊಂಡು ಸಮಾಜವನ್ನು ದಿಕ್ಕು ತಪ್ಪಿಸುವ ಕೃತ್ಯಗಳಿಗೆ ಕೊನೆಯಾಡಲು ಪಾಕ್‌ ಪರ ಘೋಷಣೆ ಕೂಗುವವರನ್ನು ಗಡಿಪಾರು ಮಾಡಬೇಕು. ಇನ್ನು ಮುಂದೆ ಇಂತಹ ದೇಶದ್ರೋಹಿ ಚಟುವಟಿಕೆಗಳನ್ನು ನಡೆಸುವುದಕ್ಕೆ ಸರ್ಕಾರ ಅನುಮತಿ ನೀಡಬಾರದು.
-ಎಸ್‌.ಮುನಿಸ್ವಾಮಿ, ಸಂಸದ

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.