ವ್ಯಸನಮುಕ್ತರನ್ನು ಮತ್ತೆ ಮದ್ಯದತ್ತ ಸೆಳೆಯುವ ಯತ್ನ


Team Udayavani, May 7, 2020, 5:45 AM IST

ವ್ಯಸನಮುಕ್ತರನ್ನು ಮತ್ತೆ ಮದ್ಯದತ್ತ ಸೆಳೆಯುವ ಯತ್ನ

ಸಾಂದರ್ಭಿಕ ಚಿತ್ರ.

ಬೆಳ್ತಂಗಡಿ: ಕೋವಿಡ್ -19 ತಡೆಗೆ 40 ದಿವಸಗಳ ಕಾಲ ರಾಜ್ಯಾದ್ಯಂತ ಮುಚ್ಚಲ್ಪಟ್ಟಿದ್ದ ಮದ್ಯದಂಗಡಿಗಳನ್ನು ಹಠಾತ್ತನೆ ತೆರೆಯುವ ಮೂಲಕ ಸಮಾಜದಲ್ಲಿ ಮತ್ತು ಕುಟುಂಬಗಳಲ್ಲಿ ನೆಲೆಸಿರುವ ಶಾಂತಿ, ನೆಮ್ಮದಿಯನ್ನು ಕಸಿದುಕೊಂಡಂತಾಗಿದೆ ಎಂದು ಅಖೀಲ ಕರ್ನಾಟಕ ಜನಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ವಿ. ರಾಮಸ್ವಾಮಿ ಹೇಳಿದ್ದಾರೆ.

ಮಠಾಧಿಪತಿಗಳು, ಸಮಾಜಪರ ಚಿಂತಕರು ಆಕ್ಷೇಪಿಸಿದರೂ ಸರಕಾರ ಕಿವಿಗೊಡದೆ ತಪ್ಪು ನಿರ್ಧಾರ ಕೈಗೊಂಡಿದೆ. ಲಾಕ್‌ಡೌನ್‌ ಅವಧಿಯವರೆಗೆ ಪ್ರಾರ್ಥನ ಮಂದಿರ, ಮಸೀದಿ, ಚರ್ಚ್‌, ಸಭೆ-ಸಮಾರಂಭಗಳು, ಸಿನೆಮಾ ಮಂದಿರ, ಮಾಲ್‌ಗ‌ಳು ಸಹಿತ ಆವಶ್ಯಕ ವ್ಯವಸ್ಥೆಯನ್ನು ತಡೆಹಿಡಿದು ಆದಾಯದ ದೃಷ್ಟಿಯಿಂದ ಮದ್ಯದಂಗಡಿ ತೆರೆದಿರುವುದು ಖೇದಕರವಾಗಿದೆ.

ಲಾಕ್‌ಡೌನ್‌ ಅವಧಿಯಲ್ಲಿ ವ್ಯಸನಿಗಳ ಚಿಕಿತ್ಸೆ, ಸಲಹೆಗಾಗಿ ವೇದಿಕೆಯ ಮೂಲಕ ಕೈಗೊಳ್ಳಲಾದ ಕ್ರಮಗಳಿಂದಾಗಿ ಸಾವಿರಾರು ಕುಟುಂಬಗಳು ವ್ಯಸನದಿಂದ ಹೊರಬರಲು ಸಾಧ್ಯವಾಗಿದೆ. ಬಹುತೇಕ ಕುಡಿತ ಬಿಟ್ಟವರನ್ನು ಈ ಅವಧಿಯಲ್ಲಿ ಅಖೀಲ ಕರ್ನಾಟಕ ಜನಜಾಗೃತಿ ವೇದಿಕೆ ಸ್ಪಂದಿಸಿ ವ್ಯಸನ ಮುಕ್ತರಾಗಲು ಪ್ರೋತ್ಸಾಹಿಸಿದ ಪರಿಣಾಮ ಬಹಳಷ್ಟು ಜನರು ಮದ್ಯದಂಗಡಿ ತೆರೆದರೂ ಅದರ ಹತ್ತಿರ ಸುಳಿಯದಿರುವುದು ಸಮಾಧಾನ ತಂದಿದೆ. ಮುಂದಕ್ಕೂ ಈ ನಿಟ್ಟಿನಲ್ಲಿ ವೇದಿಕೆಯಿಂದ ಯೋಜನೆಗಳನ್ನು ಹಾಕಿಕೊಂಡು ವ್ಯಸನಮುಕ್ತರ ನೆರವಿಗೆ ಸಹಕರಿ ಸಲಾಗುವುದು ಎಂದು ಅಖೀಲ ಕರ್ನಾಟಕ ಜನಜಾಗೃತಿ ವೇದಿಕೆಯ ಕಾರ್ಯದರ್ಶಿ ವಿವೇಕ್‌ ವಿ. ಪಾಯಸ್‌ ಅವರು ತಿಳಿಸಿದ್ದಾರೆ.

ವ್ಯಸನಮುಕ್ತರು ಸ್ವ ಉದ್ಯೋಗಿಗಳಾಗಿ ಬದಲಾಗಬೇಕು, ಅವರದ್ದೇ ಆದ ಸ್ವಸಹಾಯ ಸಂಘಗಳನ್ನು ರಚಿಸಿ, ಮೂಲ ಸೌಕರ್ಯಗಳ ಬಗ್ಗೆ ಆಸಕ್ತಿ ತೋರಿಸಿ ಸಾಧಕರಾಗಿ ಬದಲಾವಣೆ ತರುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು, ಈ ನಿಟ್ಟಿನಲ್ಲಿ ವೇದಿಕೆಯು ಸಹ ಕರಿಸಲಿದೆ ಎಂದು ಅಖೀಲ ಕರ್ನಾಟಕ ಜನಜಾಗೃತಿ ವೇದಿಕೆ ಸಂಚಾಲಕ ಡಾ| ಎಲ್‌.ಎಚ್‌. ಮಂಜುನಾಥ್‌ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಲಾಕ್‌ಡೌನ್‌ ಅವಧಿಯಲ್ಲಿ ಕುಡಿತ ಬಿಟ್ಟವರು ಅದೃಷ್ಟವಂತರಾಗಿದ್ದಾರೆ. ಅನಿವಾರ್ಯವಾಗಿ ಯಾವುದೇ ಒತ್ತಡವಿಲ್ಲದೆ ವ್ಯಸನಮುಕ್ತರಾಗಲು, ಸ್ವ ವಿಮರ್ಶೆಯಿಂದ ಸ್ವ ನಿರ್ಧಾರ ಕೈಗೊಳ್ಳಲು ಅವರಿಂದ ಸಾಧ್ಯವಾಗಿದೆ. ಸ್ವಂತ ಪ್ರಯತ್ನಕ್ಕೆ ಸಿಗುವ ಸಂತೋಷದ ಬೆಲೆಯನ್ನು ಅರ್ಥ ಮಾಡಿಕೊಂಡು ಶಾಶ್ವತ ಪಾನಮುಕ್ತಿಗೆ ಪ್ರಯತ್ನಿಸಬೇಕು. ಮದ್ಯದಂಗಡಿ ತೆರೆದ ಸಂದರ್ಭದಲ್ಲೂ ವ್ಯಸನಿಗಳಾಗದೆ ಉಳಿಯುವುದು ಹಾಗೂ ಬೆಳೆಯುವುದು ಶ್ರೇಷ್ಠ ಸಾಧನೆ.
– ಡಾ| ಡಿ. ವೀರೇಂದ್ರ ಹೆಗ್ಗಡೆ, ಧರ್ಮಾಧಿಕಾರಿಗಳು,
ಶ್ರೀ ಕ್ಷೇತ್ರ ಧರ್ಮಸ್ಥಳ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.