Byndoor 50 ಕಡೆ ಬಸ್‌, ಲಾರಿ ಚಾಸಿಸ್‌ ಬಳಸಿ ಕಾಲುಸಂಕ! ಆರಂಭಿಕ ಹಂತದಲ್ಲಿ 3 ಕಡೆ ನಿರ್ಮಾಣ

ಬೈಂದೂರು ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿನೂತನ ಪ್ರಯತ್ನ

Team Udayavani, May 28, 2024, 6:41 AM IST

Byndoor 50 ಕಡೆ ಬಸ್‌, ಲಾರಿ ಚಾಸಿಸ್‌ ಬಳಸಿ ಕಾಲುಸಂಕ! ಆರಂಭಿಕ ಹಂತದಲ್ಲಿ 3 ಕಡೆ ನಿರ್ಮಾಣ

ಕುಂದಾಪುರ: ಮಳೆಗಾಲ ಬಂತೆಂದರೆ ಬೈಂದೂರು ಕ್ಷೇತ್ರದ ಹಲವೆಡೆ ಸಂಪರ್ಕವೇ ಸವಾಲು. ಇದನ್ನು ಪರಿಹರಿಸುವ ನಿಟ್ಟಿನಲ್ಲಿ ಶಾಸಕ ಗುರುರಾಜ್‌ ಗಂಟಿಹೊಳೆ ಆರಂಭಿಕ ಹೆಜ್ಜೆಯಿಟ್ಟಿದ್ದಾರೆ. ಸಮೃದ್ಧ ಬೈಂದೂರು ಟ್ರಸ್ಟ್‌ ಮತ್ತು ಬೆಂಗಳೂರು ಮೂಲದ ಅರುಣಾಚಲಂ ಟ್ರಸ್ಟ್‌ ಸಹಯೋಗ, ವಿವಿಧ ಸಂಘ – ಸಂಸ್ಥೆಗಳ ನೆರವಿನೊಂದಿಗೆ ಲಾರಿ, ಹಳೆಯ ಲಾರಿ, ಬಸ್‌ ಇನ್ನಿತರ ವಾಹನಗಳ ಚಾಸಿಸ್‌ ಬಳಸಿ ಕಡಿಮೆ ಖರ್ಚಿನಲ್ಲಿ ಕಾಲುಸಂಕಗಳನ್ನು ನಿರ್ಮಿಸುವ ಯೋಜನೆ ಇದಾಗಿದೆ.

50 ಕಡೆಗಳಲ್ಲಿ ಇಂತಹ ಕಾಲುಸಂಕಗಳ ನಿರ್ಮಾಣಕ್ಕೆ ಯೋಜನೆ ರೂಪಿಸಿದ್ದು, ಈ ಮಳೆಗಾಲಕ್ಕೂ ಮೊದಲು ಪ್ರಾಯೋಗಿಕವಾಗಿ 3 ಕಡೆ (ಯಡ ಮೊಗೆಯ ರಾಂಪೈಜೆಡ್ಡು, ವಂಡ್ಸೆಯ ಅಬ್ಬಿ ಹಾಗೂ ತೊಂಬಟ್ಟು -ಕಬ್ಬಿನಾಲೆ ಬಳಿ) ಕಾಮಗಾರಿ ನಡೆಯಲಿದೆ. ಯೋಜನೆಯಡಿ 35ರಿಂದ 72 ಅಡಿ ಉದ್ದದ ಕಾಲುಸಂಕ ನಿರ್ಮಿಸಲಾಗುವುದು.

ಹಳ್ಳಿಗರಿಗೆ ವರದಾನ:ಬೈಂದೂರು ಕ್ಷೇತ್ರದ ಬಹುತೇಕ ಹಳ್ಳಿಗಳಲ್ಲಿ ಅಪಾಯಕಾರಿ ಮರದ ಕಾಲುಸಂಕಗಳಲ್ಲಿ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ತುಂಬಿ ಹರಿಯುವ ನದಿ, ಹಳ್ಳ, ತೊರೆ, ಹೊಳೆ ದಾಟುವ ಪರಿಸ್ಥಿತಿಯಿದೆ. 260ಕ್ಕೂ ಅಧಿಕ ಕಡೆಗಳಲ್ಲಿ ಶಾಶ್ವತ ಕಾಲುಸಂಕದ ಅಗತ್ಯವಿದೆ. ಹಲವು ವರ್ಷಗಳಿಂದ ಜನರು ಬೇಡಿಕೆ ಸಲ್ಲಿಸುತ್ತಿದ್ದರೂ ಈವರೆಗೆ ಆಗಿರುವುದು ಬೆರಳೆಣಿಕೆ ಯಷ್ಟೇ. ಶಾಸಕರ ಹೊಸ ಯೋಜನೆ ಜಾರಿಯಾದರೆ ನದಿ, ತೊರೆ, ಹೊಳೆ ಬದಿಯ ವಾಸಿಗಳಿಗೆ ವರದಾನವಾಗಲಿದೆ.

ರಾಂಪೈಜೆಡ್ಡಿನಲ್ಲಿ ಮೊದಲ ಕಾಲುಸಂಕ
ಯಡಮೊಗೆಯ  ಹತ್ತಿರದ ರಾಂಪೈಜೆಡ್ಡುವಿನಲ್ಲಿ ಕುಬ್ಜಾ ನದಿಗೆ ಬಸ್ಸಿನ ಚಾಸಿಸ್‌ ಬಳಸಿ ಮೊದಲ ಕಾಲು ಸಂಕ ನಿರ್ಮಾಣವಾಗುತ್ತಿದ್ದು, ಬಹುತೇಕ ಪೂರ್ಣಗೊಂಡಿದೆ. ಇದರೊಂದಿಗೆ 30ಕ್ಕೂ ಮಿಕ್ಕಿ ಮನೆಯವರು ಮಳೆಗಾಲದಲ್ಲಿ ಅನುಭವಿಸುತ್ತಿದ್ದ ಬವಣೆ ಬಗೆಹರಿಯಲಿದೆ.

ಈ ಕಾಲು ಸಂಕದಿಂದಾಗಿ ಯಡಮೊಗೆ – ಹೊಸಂಗಡಿ ಗ್ರಾಮಗಳ ಸಂಪರ್ಕ ಹತ್ತಿರವಾಗಲಿದೆ. ಇದಲ್ಲದೆ ರಾಂಪೈಜೆಡ್ಡು ಜನರು ಪಡಿತರ, ಪಂಚಾಯತ್‌, ಪೇಟೆಗೆ 6 ಕಿ.ಮೀ. ದೂರ ಸಂಚರಿಸುತ್ತಿದ್ದು, ಈಗ ಇದು ಕೇವಲ 1 ಕಿ.ಮೀ. ಅಷ್ಟೇ ದೂರವಾಗಲಿದೆ. ಹೊಸಂಗಡಿಗೆ ಬಸ್ಸಿಗೆ ತೆರಳಲು ಹತ್ತಿರವಾಗಲಿದೆ. ಈ ಕಾಲು ಸಂಕದಲ್ಲಿ ಬೈಕ್‌, ರಿಕ್ಷಾ, ಆಮ್ನಿ ಸಂಚರಿಸಬಹುದು. ಅನಾರೋಗ್ಯ ಪೀಡಿತರನ್ನು ತುರ್ತಾಗಿ ಆಸ್ಪತ್ರೆಗೆ ಕರೆದೊಯ್ಯಲು ಸಹಕಾರಿ. ಮಳೆಗಾಲದಲ್ಲಿ ಶಾಲೆ ಮಕ್ಕಳಿಗೂ ಅನುಕೂಲ ಎಂದು ಸ್ಥಳೀಯರಾದ ರಮೇಶ್‌ ನಾಯ್ಕ ಹೇಳಿದರು.

ಕಾಲುಸಂಕ ಇಲ್ಲದ ಕಡೆ ಮಳೆಗಾಲದಲ್ಲಿ ಜನರಿಗೆ ನೆರವಾಗಲಿ ಅನ್ನುವ ಕಾರಣಕ್ಕೆ ಎರಡು ಟ್ರಸ್ಟ್‌ ಗಳ ವತಿಯಿಂದ ಈ ಕಾರ್ಯ ಕೈಗೊಂಡಿದ್ದೇವೆ. ದಾನಿಗಳು ಕೈಜೋಡಿಸಲು ಮುಂದೆ ಬಂದಿದ್ದಾರೆ. 50 ಕಡೆ ಮಾಡುವ ಯೋಚನೆಯಿದೆ.ಸದ್ಯ 3 ಕಡೆ ನಿರ್ಮಾಣ ವಾಗಲಿದೆ. ಬಳಿಕ ಅದರ ಗುಣಮಟ್ಟ ನೋಡಿಕೊಂಡು ಮುಂದುವರಿ ಯಲಾಗುವುದು. ಇದಕ್ಕೆ ತಲಾ ಅಂದಾಜು 2 ಲಕ್ಷ ರೂ. ವೆಚ್ಚವಾಗಲಿದೆ.
– ಗುರುರಾಜ್‌ ಗಂಟಿಹೊಳೆ,
ಬೈಂದೂರು ಶಾಸಕ

-ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Kundapura ಮೂರು ಕಡಲಾಮೆ ರಕ್ಷಣೆ

Kundapura ಮೂರು ಕಡಲಾಮೆ ರಕ್ಷಣೆ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Uppunda ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Uppunda ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.