Andhra Pradesh: ಬಂಧನ ವಿರೋಧಿಸಿ ಸೀಟಿ ಊದಿದ ಶಾಸಕ ನಂದಮೂರಿ ಬಾಲಕೃಷ್ಣ
Team Udayavani, Sep 23, 2023, 12:36 AM IST
ಅಮರಾವತಿ/ವಿಜಯವಾಡ: ಕೌಶಲಾ ಭಿವೃದ್ಧಿ ಮಂಡಳಿ ಹಗರಣದಲ್ಲಿ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಂಧನ ಖಂಡಿಸಿ ಆಂಧ್ರಪ್ರದೇಶ ವಿಧಾನಸಭೆಯಲ್ಲಿ ಟಿಡಿಪಿ ಶಾಸಕ ನಂದಮೂರಿ ಬಾಲಕೃಷ್ಣ ಸೀಟಿ ಊದಿ ಗದ್ದಲ ಎಬ್ಬಿಸಿದ್ದಾರೆ. ಇದರ ಜತೆಗೆ ಅವರ ಪಕ್ಷದ ನಾಯಕರು ಕಲಾಪ ನಡೆಯಲು ಅವಕಾಶ ಕೊಡದೆ ಗಲಾಟೆ ಮಾಡಿದ್ದಾರೆ. ಹೀಗಾಗಿ ಅವರನ್ನೆಲ್ಲ ಗುರುವಾರ ಒಂದು ದಿನದ ಅವಧಿಗೆ ಕಲಾಪದಿಂದ ಅಮಾನತು ಮಾಡಲಾಗಿದೆ. ಶಿಕ್ಷೆಗೆ ಗುರಿಯಾದ ಶಾಸಕರ ಪೈಕಿ ಇಬ್ಬರು ವೈಎಸ್ಆರ್ಸಿಪಿಯ ಭಿನ್ನಮತೀಯ ಶಾಸಕರೂ ಸೇರಿದ್ದಾರೆ.
ಶಾಸಕ ನಂದಮೂರಿ ಬಾಲಕೃಷ್ಣ ಶುಕ್ರವಾರ ಕೂಡ ಸದನಕ್ಕೆ ಆಗಮಿಸಿ ಸೀಟಿ ಊದಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಗದ್ದಲ ಎಬ್ಬಿಸಿದ್ದಕ್ಕೆ ಇಬ್ಬರನ್ನು ಅಮಾನತು ಮಾಡಲಾಗಿದೆ.
ಕಸ್ಟಡಿ ವಿಸ್ತರಣೆ: ಮತ್ತೂಂದೆಡೆ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಿಐಡಿಯಿಂದ ಬಂಧಿತರಾಗಿ ರುವ ಮಾಜಿ ಸಿಎಂ ಚಂದ್ರ ಬಾಬು ನಾಯ್ಡು ಅವರ ಕಸ್ಟಡಿಯನ್ನು ಇನ್ನೂ 2 ದಿನ ವಿಸ್ತರಿಸಲಾಗಿದೆ. ಇದೇ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ವಜಾ ಮಾಡಬೇಕು ಎಂದು ಕೋರಿದ್ದ ಅರ್ಜಿಯನ್ನು ಆಂಧ್ರಪ್ರದೇಶ ಹೈಕೋರ್ಟ್ ವಜಾ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್