Punjalkatte: ಅಂಗನವಾಡಿ ಕೇಂದ್ರದ ಸಹಾಯಕಿ ಸಾವು
Team Udayavani, Aug 11, 2023, 12:40 AM IST
ಪುಂಜಾಲಕಟ್ಟೆ: ಅಂಗನವಾಡಿ ಕೇಂದ್ರದ ಸಹಾಯಕಿ ಅಂಗನವಾಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೇಳೆಯಲ್ಲೇ ಅಸೌಖ್ಯದಿಂದ ಸಾವಿಗೀಡಾದ ಘಟನೆ ಆ. 6ರಂದು ಸಂಭವಿಸಿದೆ.
ಬಡಗ ಕಜೆಕಾರು ಗ್ರಾಮದ ಕೆದಿಮೇಲು ಅಂಗನವಾಡಿ ಕೇಂದ್ರದ ಸಹಾಯಕಿ, ಕನೆಜಾಲು ನಿವಾಸಿ ವಸಂತಿ ಕೆದಿಮೇಲು (43) ಅವರು ಮೃತಪಟ್ಟವರು. ಮೃತರು ಪತಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅವರ ಪತಿ ಮಂಗಳೂರಿನಲ್ಲಿ ಹೊಟೇಲ್ ಕಾರ್ಮಿಕರಾಗಿದ್ದಾರೆ.