ಪಶು ಇಲಾಖೆ ಆ್ಯಂಬುಲೆನ್ಸ್‌ ಚಾಲಕನ ಮೇಲೆ ಹಲ್ಲೆ; ಬೆಂಗಳೂರಿನ ಕಾರು ಚಾಲಕನಿಂದ ಕೃತ್ಯ


Team Udayavani, Mar 13, 2024, 1:14 AM IST

ಪಶು ಇಲಾಖೆ ಆ್ಯಂಬುಲೆನ್ಸ್‌ ಚಾಲಕನ ಮೇಲೆ ಹಲ್ಲೆ; ಬೆಂಗಳೂರಿನ ಕಾರು ಚಾಲಕನಿಂದ ಕೃತ್ಯ

ಬೆಳ್ತಂಗಡಿ: ರಸ್ತೆಯಲ್ಲಿ ಸೈಡ್‌ ಕೊಡುವ ವಿಚಾರಕ್ಕೆ ಬೆಂಗಳೂರು ಮೂಲದ ಕಾರು ಚಾಲಕನೋರ್ವ ಪಶು ಇಲಾಖೆಯ ಆ್ಯಂಬುಲೆನ್ಸ್‌ ಅನ್ನು ತಡೆದು ಚಾಲಕನ ಮೇಲೆ ಹಿಗ್ಗಾ ಮುಗ್ಗ ಥಳಿಸಿದ ಘಟನೆ ಲಾೖಲ ಜಂಕ್ಷನ್‌ ಬಳಿ ಮಂಗಳವಾರ ಮಧ್ಯಾಹ್ನ ನಡೆದಿದೆ.

ಹಲ್ಲೆಗೆ ಒಳಗಾಗಿರುವ ಆ್ಯಂಬುಲೆನ್ಸ್‌ ಚಾಲಕ ಕಡಬದ ತಾಲೂಕು ವಿದ್ಯಾನಗರ ನಿವಾಸಿ ಸುಬ್ರಹ್ಮಣ್ಯ ಗ್ರಾಮದ ರಕ್ಷಿತ್‌ (27) ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರು, ಮಲ್ಲೇಶ್ವರದ ನಿವಾಸಿ ಶರತ್‌ ರಾಮಚಂದ್ರ (35) ಹಲ್ಲೆ ನಡೆಸಿದ ಆರೋಪಿ.

ಕೊಕ್ಕಡದ 1962 ಪಶುಸಂಗೋಪನ ಇಲಾಖೆಯ ಆ್ಯಂಬುಲೆನ್ಸ್‌ನಲ್ಲಿ ಗುತ್ತಿಗೆ ಆಧಾರದಲ್ಲಿ ಚಾಲಕನಾಗಿ ಸೇವೆ ಸಲ್ಲಿಸುತ್ತಿದ್ದ ರಕ್ಷಿತ್‌ಗೆ ಬೆಳ್ತಂಗಡಿಯ ನೆರಿಯದಲ್ಲಿ ಅಗತ್ಯ ಸೇವೆ ಒದಗಿಸುವಂತೆ ಇಲಾಖೆಯ ಆ್ಯಪ್‌ ಮೂಲಕ ಸಂದೇಶ ಬಂದಿತ್ತು. ಅದರಂತೆ ಅಲ್ಲಿಗೆ ತೆರಳುತ್ತಿದ್ದರು. ಆಗ ಲಾೖಲದಲ್ಲಿ ದಾರಿಕೊಡುವ ವಿಚಾರದಲ್ಲಿ ಗಲಾಟೆ ಮಾಡಿ ಕಾರು ಚಾಲಕ ಆ್ಯಂಬುಲೆನ್ಸ್‌ ಅನ್ನು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ನಡೆಸಿದನು.

ಹೆದ್ದಾರಿ ಮಧ್ಯೆ ಈ ಘಟನೆ ನಡೆದಿದ್ದು ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿತ್ತು. ಪತಿ ಹಲ್ಲೆ ನಡೆಸುವ ವೇಳೆ ಜತೆಗಿದ್ದ ಪತ್ನಿ ಹಲ್ಲೆಗೆ ಪ್ರಚೋದಿಸಿರುವ ದೃಶ್ಯಗಳು ಮೊಬೈಲ್‌ ಕೆಮರಾದಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆಯನ್ನು ಗಮನಿಸಿದ ಸ್ಥಳೀಯರು ತತ್‌ಕ್ಷಣವೇ ಸ್ಥಳಕ್ಕೆ ಧಾವಿಸಿ ಹಲ್ಲೆ ಮಾಡುತ್ತಿದ್ದ ವ್ಯಕ್ತಿಯನ್ನು ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.

ರಕ್ಷಿತ್‌ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳವಾರ ಬೆಳ್ತಂಗಡಿಯ 1962 ಆ್ಯಂಬುಲೆನ್ಸ್‌ ನವರಿಗೆ ರಜೆ ಇದ್ದು ಈ ದಿನ ಅಗತ್ಯ ಸೇವೆ ನೀಡುವ ಜವಾಬ್ದಾರಿ ಕಡಬದ ಆ್ಯಂಬುಲೆನ್ಸ್‌ನವರಿಗೆ ವಹಿಸಲಾಗಿತ್ತು. ನೆರಿಯಕ್ಕೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.

ಚಾಲಕನಿಗೆ ಹಲ್ಲೆ ನಡೆಸಿರುವುದಲ್ಲದೆ 3 ಸಾವಿರ ರೂ.ನಷ್ಟು ಹಾನಿ ಮಾಡಿ ರುವುದಾಗಿ ಬೆಳ್ತಂಗಡಿ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶರತ್‌ ಪತ್ನಿಯೂ ಆ್ಯಂಬುಲೆನ್ಸ್‌ ಚಾಲಕ ತನ್ನ ಮೈಮೇಲೆ ಹಲ್ಲೆಗೆ ಯತ್ನಿಸಿದ್ದಾನೆ ಎಂದು ದೂರು ನೀಡಲು ಮುಂದಾಗಿರುವ ಘಟನೆಯೂ ಠಾಣೆಯಲ್ಲಿ ನಡೆದಿದೆ.

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.