ಕುಷ್ಟಗಿ ಜಾತ್ರೆಯಲ್ಲಿ ಪ್ರಾಣಿ ಹಿಂಸೆ ದುರದೃಷ್ಟಕರ: ದಯಾನಂದ ಸ್ವಾಮೀಜಿ


Team Udayavani, Mar 5, 2022, 8:11 PM IST

1-fsa

ಕುಷ್ಟಗಿ: ಕುಷ್ಟಗಿ ತಾಲೂಕಿನ ಡೊಣ್ಣೆಗುಡ್ಡ ದುರ್ಗಾದೇವಿ ಜಾತ್ರೆಯಲ್ಲಿ‌ ಪ್ರಾಣಿ ಬಲಿ‌ ನಿಷೇಧದ ಹಿನ್ನೆಲೆಯಲ್ಲಿ ಭಕ್ತಾದಿಗಳು ದೂರದ ಪ್ರದೇಶದಲ್ಲಿ ಪ್ರಾಣಿ ಹತ್ಯೆ ಮಾಡಿ ಮಾಂಸ ತಂದಿದ್ದಾರೆ. ಇದು ಪ್ರಾಣಿ ಬಲಿ ಆಗದು ಪ್ರಾಣಿ ಹತ್ಯೆ ಆಗಿದ್ದು ಒಟ್ಟಾರೆಯಾಗಿ ಈ ಜಾತ್ರೆಯಲ್ಲಿ ಪ್ರಾಣಿ ಜೀವ ಹಿಂಸೆ ಆಗಿರುವುದು ದುರದೃಷ್ಟಕರ ಎಂದು ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ ಅಧ್ಯಕ್ಷ ದಯಾನಂದ ಸ್ವಾಮೀಜಿ ಹೇಳಿದರು.

ಕುಷ್ಟಗಿ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಸಹಾಯಕ ಆಯುಕ್ತ,ತಹಶೀಲ್ದಾರ ಡಿವೈಎಸ್ಪಿ, ಸಿಪಿಐ, ಪಿಎಸೈ ಮೊದಲಾದವರ ಟೀಮ್ ವರ್ಕನಿಂದ ಪ್ರಾಣಿ ಬಲಿ ಸಂಪೂರ್ಣ ನಿಷೇಧ ಸಾದ್ಯವಾಗದೇ ಇದ್ದರು, ಗಣನೀಯ ಪ್ರಮಾಣದಲ್ಲಿ ಪ್ರಾಣಿ ಬಲಿ ತಡೆದಿದ್ದೇವೆ. ಕಳೆದ ಏಳು ತಲೆಮಾರುಗಳಿಂದ ನಡೆದುಕೊಂಡು ಬಂದಿರುವ ದೇವಿ ಜಾತ್ರೆಯಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಪ್ರಾಣಿ ಬಲಿ ನಡೆಯುತ್ತಿತ್ತು. ನಮ್ಮ ಹೋರಾಟದ ಪ್ರತಿಫಲವಾಗಿ ಹಂತ ಹಂತವಾಗಿ ಪ್ರಾಣಿ ಬಲಿ ಪ್ರಮಾಣ ಕಡಿಮೆ ಆಗಿದೆ ಎಂದರು.

ಸಿಕ್ಕಿ ಬಿದ್ದ ಚರ್ಮದ ವ್ಯಾಪಾರಿ
ಕಳೆದ ಮಾ.3 ರ ಜಾತ್ರೆಯಲ್ಲಿ ಪ್ರಾಣಿ ಬಲಿ‌ ನಿಷೇದಿತ ಪ್ರದೇಶ ಹೊರತು ಪಡಿಸಿ 300 ರಿಂದ 500 ಪ್ರಾಣಿ ಹತ್ಯೆ ಆಗಿರುವುದು ಅಂದಾಜಿಸಲಾಗಿದೆ. ಇದು ನಮ್ಮ ಹೋರಾಟಕ್ಕೆ ಬಹುತೇಕ ಯಶಸ್ವಿಯಾಗಿದೆ. ಹಿಂದಿನ ಹೋರಾಟಕ್ಕೆ ಹೋಲಿಸಿದರೆ ಬಹು ಸಂಖ್ಯೆಯಲ್ಲಿ ಪ್ರಾಣಿ ಬಲಿ ತಡೆದಿದ್ದೇವೆ.
ಈ ಸಂದರ್ಭದಲ್ಲಿ ಚರ್ಮ ವ್ಯಾಪಾರಿ ಕುರಿ ಚರ್ಮ ಸಮೇತ ಸಿಕ್ಕಿ ಬಿದ್ದಿದ್ದು ಆತ 151 ಚರ್ಮ‌‌ ವಶಕ್ಕೆ ತೆಗೆದುಕೊಳ್ಳಲಾಗಿದ್ದು ಈತನ ವಿರುದ್ದವೂ ಕೇಸ್ ದಾಖಲಿಸಿ 14 ದಿನಗಳ‌ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮೂರ್ಖ‌ ಚರ್ಮದ ವ್ಯಾಪಾರಿ ಪ್ರಾಣಿ ಬಲಿ‌ ನಿಷೇಧದ ಅರಿವು ಇಲ್ಲದೇ ಚರ್ಮ ಖರೀಧಿಸಲು ಬಂದು ವಿಶ್ವ ಪ್ರಾಣಿ ಮಂಡಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದು, ಎಲ್ಲೆಲ್ಲಿ ಪ್ರಾಣಿ ಹತ್ಯೆ ನಡೆಸಿದವರ ಮಾಹಿತಿ ಆ ಚರ್ಮ‌ ವ್ಯಾಪಾರಿಯ ಮೂಲಕ ಪತ್ತೆ ಹಚ್ಚಲಾಗುತ್ತಿದೆ.

ಈ ವರ್ಷದಲ್ಲಿ ಪ್ರಾಣಿ ಬಲಿ ಹೇಗೆ ನಿಯಂತ್ರಿಸಬಹುದು ಎನ್ನುವ ತಂತ್ರಗಾರಿಗೆ ಸಿಕ್ಕಿದೆ. ಮುಂದಿನ ಜಾತ್ರೆಯಲ್ಲಿ ತಂತ್ರಗಾರಿಕೆ ಬಳಸಿಕೊಂಡು ಸಾಮೂಹಿಕ ಪ್ರಾಣಿ ಬಲಿ ನಿಯಂತ್ರಿಸಲಾಗುವುದು. ಈ ಬಾರಿ ದ್ರೋಣ್ ಕ್ಯಾಮರಾ ಬಳಸಿಕೊಂಡಿದ್ದೇವೆ. ಅಲ್ಲದೇ ಜಾತ್ರೆಯ ಮುನ್ನ 400 ಪೊಲೀಸರಿಂದ‌18 ಗ್ರಾಮಗಳಲ್ಲಿ ಪಥ ಸಂಚಲನ ನಡೆಸಿ ಪ್ರಾಣಿ ಬಲಿ‌ ಜಾಗೃತಿ ಮೂಡಿಸಲಾಗಿದೆ. ಮುಂದಿನ ಜಾತ್ರೆಯಲ್ಲಿ ಸುತ್ತಮುತ್ತಲಿನ ಜಮೀನು‌ ಮಾಲೀಕರು ಯಾವೂದೇ ಕಾರಣಕ್ಕೂ ಭಕ್ತರು ತಾತ್ಕಾಲಿಕ ಟೆಂಟ್ ಗೆ ಅವಕಾಶ ಕಲ್ಪಿಸಬಾರದು. ಸದರಿ‌ ಟೆಂಟ್ ನಲ್ಲಿ ಪ್ರಾಣಿ ನಡೆದರೆ ಜಮೀನು‌ ಮಾಲೀಕರು ಹೊಣೆಗಾರರು ಎಂದರು.

ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ ಮಹಿಳಾ ಘಟಕದ ಅಧ್ಯಕ್ಷೆ ಸುನಂದಾದೇವಿ ವಸ್ತ್ರದ್ ಮಠ ಹಾಜರಿದ್ದರು.

ಟಾಪ್ ನ್ಯೂಸ್

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.