ಉಪಚುನಾವಣೆ ಫಲಿತಾಂಶದ ಬಗ್ಗೆ ಆಶ್ಚರ್ಯವಾಗುತ್ತಿದೆ ಎಂದ ಅನಿತಾ ಕುಮಾರಸ್ವಾಮಿ
Team Udayavani, Dec 11, 2019, 1:24 PM IST
ರಾಮನಗರ: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಜೆಡಿಎಸ್ ತೀವ್ರ ಮುಖಭಂಗ ಅನುಭವಿಸಿದ್ದು, ಶೂನ್ಯ ಸಂಪಾದನೆ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ, ಫಲಿತಾಂಶ ಕಂಡು ನನಗೆ ಆಶ್ಚರ್ಯವಾಗುತ್ತಿದೆ ಎಂದಿದ್ದಾರೆ.
ಒಂದು ಪಕ್ಷದಿಂದ ಗೆದ್ದು ಇನ್ನೊಂದು ಪಕ್ಷಕ್ಕೆ ಹಾರುವವರನ್ನು ಜನ ಗೆಲ್ಲಿಸ್ತಾರೆ ಅಂದರೆ ಆಶ್ಚರ್ಯವಾಗುತ್ತೆ. ಚುನಾವಣೆ ಬರುತ್ತೆ, ಹೋಗುತ್ತೆ. ಆದರೆ ಜನರು ನಮ್ಮ ಪರವಾಗಿದ್ದಾರೆ ಎಂದು ಅನಿತಾ ಕುಮಾರಸ್ವಾಮಿ ಹೇಳಿದರು.
ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ರಾಜೀನಾಮೆ ವಿಚಾರದ ಬಗ್ಗೆ ಗಮನಸೆಳೆದಾಗ ನನಗೇನು ಗೊತ್ತಿಲ್ಲ ಎಂದು ಪ್ರತಿಕ್ರಿಯಿಸಿದರು. ಇದರ ಬಗ್ಗೆ ದೊಡ್ಡವರು ನೋಡಿಕೊಳ್ತಾರೆ ಎಂದಷ್ಟೇ ಹೇಳಿದರು.
ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಹೀನಾಯ ಸೋಲನುಭವಿಸಿದೆ. ತನ್ನ ಭದ್ರ ಕೋಟೆ ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆಯಲ್ಲಿ ಕೂಡಾ ಸೋಲನುಭವಿಸಿದ್ದು, ಅಲ್ಲಿ ಮೊದಲ ಬಾರಿಗೆ ಬಿಜೆಪಿ ಕಾಲಿರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ