ಅನ್ನಭಾಗ್ಯ: ಏಪ್ರಿಲ್‌ನಲ್ಲಿ ತೊಗರಿ ಬೇಳೆ ಸಿಕ್ಕಿಲ್ಲ


Team Udayavani, May 2, 2019, 3:04 AM IST

annabhagya

ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಮುಂದುವರಿಸಿಕೊಂಡು ಬಂದಿರುವ ಹಿಂದಿನ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ “ಅನ್ನಭಾಗ್ಯ’ ಯೋಜನೆಯಡಿ ಬಿಪಿಎಲ್‌ ಕುಟುಂಬಗಳಿಗೆ ತೊಗರಿ ಬೇಳೆ ಸಿಕ್ಕಿಲ್ಲ.

ಅನ್ನಭಾಗ್ಯ ಯೋಜನೆಯ ಫ‌ಲಾನುಭವಿಗಳು ಕಳೆದೆರಡು ತಿಂಗಳಿಂದ ತೊಗರಿ ಬೇಳೆಯಿಂದ ವಂಚಿತರಾಗಿದ್ದಾರೆ. ಆದರೆ, ಏಪ್ರಿಲ್‌ ತಿಂಗಳಲ್ಲಿ ಮಾತ್ರ ತೊಗರಿ ಬೇಳೆ ಕೊಡಲು ಆಗಿಲ್ಲ. ಮೇ ತಿಂಗಳಿಗಾಗಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಸಮಜಾಯಿಷಿ ನೀಡುತ್ತಿದ್ದಾರೆ.

ಅನ್ನಭಾಗ್ಯ ಯೋಜನೆಯ ಫ‌ಲಾನುಭವಿಗಳಿಗೆ ಪ್ರತಿ ತಿಂಗಳು ತೊಗರಿ ಬೇಳೆ ನೀಡಬೇಕಾದರೆ ಒಂದು ತಿಂಗಳ ಹಿಂದೆಯೇ ತೊಗರಿ ಬೇಳೆ ಖರೀದಿ ಪ್ರಕ್ರಿಯೆ ಪ್ರಾರಂಭಿಸಬೇಕಾಗುತ್ತದೆ. ಆದರೆ, ಅಧಿಕಾರಿಗಳು ಸಕಾಲದಲ್ಲಿ ಪ್ರಕ್ರಿಯೆ ಆರಂಭ ಮಾಡದೆ ಇದ್ದ ಕಾರಣದಿಂದಾಗಿ ಕಳೆದೆರಡು ತಿಂಗಳಿಂದ ಬಿಪಿಎಲ್‌ ಕುಟುಂಬಗಳಿಗೆ ತೊಗರಿ ಬೇಳೆ ಸಿಕ್ಕಿಲ್ಲ ಎನ್ನಲಾಗಿದೆ.

ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆಯಡಿ ವಿತರಿಸಲು ಬೇಕಾಗುವ ತೊಗರಿ ಬೇಳೆಯನ್ನು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಮೂಲಕ ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟದಿಂದ (ನಾಫೆಡ್‌) ಖರೀದಿ ಮಾಡಲಾಗುತ್ತದೆ.

ಮುಂದಿನ ತಿಂಗಳಿಗೆ ಬೇಕಾಗುವ ತೊಗರಿ ಬೇಳೆಯ ಖರೀದಿಗೆ ಹಿಂದಿನ ಒಂದು ತಿಂಗಳಿಂದ ಪ್ರಕ್ರಿಯೆ ಪ್ರಾರಂಭಿಸಬೇಕಾಗುತ್ತದೆ. ಆ ತಿಂಗಳಿಗೆ ಎಷ್ಟು ತೊಗರಿ ಬೇಳೆ ಬೇಕು ಎಂಬ ವಿವರ ಸಲ್ಲಿಸಿ, ಅದಕ್ಕೆ ತಗಲುವ ಹಣವನ್ನು ಪಾವತಿ ಮಾಡಬೇಕು.

ಆದರೆ, ಸಂಬಂಧಪಟ್ಟ ಅಧಿಕಾರಿಗಳು ಸಕಾಲದಲ್ಲಿ ಆ ಕೆಲಸ ಮಾಡದೆ ಇರುವುದರಿಂದ ಮಾರ್ಚ್‌ನಲ್ಲಿ ತೊಗರಿ ಬೇಳೆ ಖರೀದಿ ಆಗಿಲ್ಲ. ಹಾಗಾಗಿ, ಏಪ್ರಿಲ್‌ನಲ್ಲಿ ಕೊಡಲು ಆಗಿಲ್ಲ. ಮೇ ತಿಂಗಳಿಗೆ ಬೇಕಾಗುವ ತೊಗರಿ ಬೇಳೆ ಖರೀದಿ ಪ್ರಕ್ರಿಯೆ ಈಗಾಗಲೇ ಪ್ರಾರಂಭಿಸಲಾಗಿದ್ದು, ಈ ತಿಂಗಳು ಯಾವುದೇ ಸಮಸ್ಯೆ ಇರುವುದಿಲ್ಲ ಎಂದು ಹಿರಿಯ ಅಧಿಕಾರಿಗಳು ಸ್ಪಷ್ಟನೆ ನೀಡುತ್ತಿದ್ದಾರೆ.

13 ಸಾವಿರ ಮೆಟ್ರಿಕ್‌ ಟನ್‌ ಬೇಕು: ರಾಜ್ಯದಲ್ಲಿ ಒಟ್ಟು 1.43 ಕೋಟಿ ಬಿಪಿಲ್‌ ಕಾರ್ಡ್‌ಗಳಿದ್ದು, 4.86 ಕೋಟಿ ಫ‌ಲಾನುಭವಿಗಳಿದ್ದಾರೆ. ಪ್ರತಿ ಕಾರ್ಡ್‌ಗೆ ಪ್ರತಿ ತಿಂಗಳು 1 ಕೆ.ಜಿ ತೊಗರಿ ಬೇಳೆ ವಿತರಿಸಲು ತಿಂಗಳಿಗೆ ಸುಮಾರು 13 ಸಾವಿರ ಮೆಟ್ರಿಕ್‌ ಟನ್‌ ತೊಗರಿ ಬೇಳೆ ಬೇಕು.

ಇದಕ್ಕಾಗಿ ತಿಂಗಳಿಗೆ 65 ಕೋಟಿ ರೂ.ಪಾವತಿಸಬೇಕಾಗುತ್ತದೆ. ಅನ್ನಭಾಗ್ಯ ಯೋಜನೆಯಡಿ ವಿತರಿಸುವ ಅಕ್ಕಿ ಕೇಂದ್ರದಿಂದ ಬರುತ್ತದೆ. ಆದರೆ, ತೊಗರಿ ಬೇಳೆಯನ್ನು ಸಂಪೂರ್ಣವಾಗಿ ರಾಜ್ಯ ಸರ್ಕಾರವೇ ಖರೀದಿಸಬೇಕಾಗುತ್ತದೆ. ಅಲ್ಲದೆ ಇದನ್ನು ಮುಕ್ತ ಮಾರುಕಟ್ಟೆಯಲ್ಲಿ ನೇರವಾಗಿ ಖರೀದಿ ಮಾಡುವಂತಿಲ್ಲ. ಕರ್ನಾಟಕ ಆಹಾರ ನಿಗಮದ ಮೂಲಕ ನಾಫೆಡ್‌ನಿಂದ ಮಾತ್ರ ಖರೀದಿ ಮಾಡಬೇಕಾಗುತ್ತದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.