Feticide: ಮತ್ತೂಂದು ಹೆಣ್ಣು ಭ್ರೂಣ ಹತ್ಯೆ ತಂಡ ಸಕ್ರಿಯ


Team Udayavani, Dec 4, 2023, 12:26 AM IST

pregnent

ಬೆಂಗಳೂರು: ಹೆಣ್ಣು ಭ್ರೂಣ ಪತ್ತೆ ಹಚ್ಚಿ ಗರ್ಭಪಾತ ಮಾಡುತ್ತಿದ್ದ ಪ್ರಕರಣ ಮತ್ತೂಂದು ರೋಚಕ ತಿರುವು ಪಡೆದುಕೊಂಡಿದೆ. ಬೈಯಪ್ಪನಹಳ್ಳಿ ಪೊಲೀಸರ ತನಿಖೆ ವೇಳೆ ಮೈಸೂರಿನ ಡಾ| ಚಂದನ್‌ ಬಲ್ಲಾಳ್‌, ಮಧ್ಯವರ್ತಿ ಶಿವಲಿಂಗೇಗೌಡ ತಂಡ ಮಾತ್ರವಲ್ಲ, ರಾಜ್ಯದಲ್ಲಿ ಮತ್ತೂಂದು ಹೆಣ್ಣು ಭ್ರೂಣ ಹತ್ಯೆ ತಂಡ ಸಕ್ರಿಯವಾಗಿದೆ ಎಂಬ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ.
ಇದೇ ಕಾರಣಕ್ಕೆ ಮೈಸೂರಿನ ಹಳೇ ಆಸ್ಪತ್ರೆಯೊಂದರ ಶುಶ್ರೂಷಕಿ ಉಷಾರಾಣಿ (35)ಯನ್ನು ಬಂಧಿಸಲಾಗಿದೆ. ಈಕೆಯ ವಿಚಾರಣೆಯಲ್ಲಿ ಚಂದನ್‌ ಬಲ್ಲಾಳ್‌, ಚೆನ್ನೈನ ಮಕ್ಕಳ ತಜ್ಞನ ತಂಡ ಮಾತ್ರವಲ್ಲ. ಮೈಸೂರಿನ ಪುಟ್ಟರಾಜು ಹಾಗೂ ಮಂಡ್ಯದ ಧನಂಜಯ್‌ ಎಂಬವರ ತಂಡವೂ ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿರುವುದು ಪತ್ತೆಯಾಗಿದ್ದು, ಪೊಲೀಸರೇ ಒಂದು ಕ್ಷಣ ಶಾಕ್‌ ಆಗಿದ್ದಾರೆ. ಸದ್ಯ ಪುಟ್ಟರಾಜು ಮತ್ತು ಧನಂಜಯ್‌ ನಿರೀಕ್ಷಣ ಜಾಮೀನು ಪಡೆದುಕೊಂಡಿದ್ದಾರೆ.

ಮೈಸೂರಿನ ಮೊದಲ ಆಸ್ಪತ್ರೆ ಎಂದು ಹೇಳಲಾದ ಆಸ್ಪತ್ರೆಯೊಂದರಲ್ಲಿ ಕೆಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದ ಉಷಾರಾಣಿಗೆ ಮೈಸೂರಿನ ವಿವಿಧ ಆಸ್ಪತ್ರೆಗಳಿಗೆ ಕ್ಯಾಟರಿಂಗ್‌ ಮಾಡುತ್ತಿದ್ದ ಪುಟ್ಟರಾಜು ಮತ್ತು ಮಂಡ್ಯದಲ್ಲಿ ಪ್ರಯೋಗಾಲಯ(ಲ್ಯಾಬ್‌)ದ ಟೆಕ್ನೀಷಿಯನ್‌ ಧನಂಜಯ್‌ ಪರಿಚಯವಾಗಿದೆ. ಈ ವೇಳೆ ಹೆಣ್ಣು ಭ್ರೂಣ ಗರ್ಭಪಾತ ಮಾಡಿಸಿಕೊಟ್ಟರೆ ಪ್ರತೀ ಕೇಸ್‌ಗೆ 2-3 ಸಾವಿರ ರೂ. ಕೊಡುವುದಾಗಿ ಇಬ್ಬರ ನಡುವೆ ಒಪ್ಪಂದವಾಗಿತ್ತು. ಅದರಂತೆ ಧನಂಜಯ್‌, ಮಂಡ್ಯದ ಲ್ಯಾಬ್‌ನಲ್ಲಿ ಗರ್ಭಿಣಿಯರಿಗೆ ಸ್ಕ್ಯಾನಿಂಗ್‌ ಮಾಡಿ ಗರ್ಭಪಾತ ಬಯಸುವ ಪೋಷಕರನ್ನು ಪುಟ್ಟರಾಜುಗೆ ಸಂಪರ್ಕಿಸುತ್ತಿದ್ದ. ಈತ ಉಷಾರಾಣಿ ಬಳಿ ಕಳುಹಿಸಿ ಗರ್ಭಪಾತ ಮಾಡಿಸುತ್ತಿದ್ದ. ಈಕೆ ಪ್ರತೀ ತಿಂಗಳು 4-5 ಗರ್ಭಪಾತ ಮಾಡಿಸುತ್ತಿದ್ದಳು ಎಂಬುದು ಗೊತ್ತಾಗಿರುವುದಾಗಿ ಮೂಲಗಳು ತಿಳಿಸಿವೆ.

ಆಸ್ಪತ್ರೆ ವೈದ್ಯರಿಗೆ ಗೊತ್ತಿಲ್ಲ!
ಮತ್ತೂಂದೆಡೆ ಉಷಾರಾಣಿ ಕೃತ್ಯಆಕೆ ಕೆಲಸ ಮಾಡುವ ಆಸ್ಪತ್ರೆಯ ಹಿರಿಯ ವೈದ್ಯರಿಗೆ ಗೊತ್ತಿಲ್ಲ. ಪುಟ್ಟರಾಜು ಸೂಚನೆ ಮೇರೆಗೆ ಆಸ್ಪತ್ರೆಗೆ ಕರೆಸಿಕೊಳ್ಳುತ್ತಿದ್ದ ಉಷಾರಾಣಿ, ಗರ್ಭಿಣಿಯರಿಗೆ ಇದೇ ರೀತಿ ಹೇಳಬೇಕೆಂದು ಮೊದಲೇ ಸೂಚಿಸುತ್ತಿದ್ದಳು. ಅದೇ ರೀತಿ ವೈದ್ಯರ ಮುಂದೆ ಕರೆದೊಯ್ದು ಸುಳ್ಳುಗಳನ್ನು ಹೇಳಿ, ಗರ್ಭಪಾತ ಮಾಡಿಸುತ್ತಿದ್ದಳು.

ಈ ಮಧ್ಯೆ ಕೆಲವರು ಮದುವೆಯಾಗಿ ಒಂದೆರಡು ವರ್ಷಗಳಾಗಿದ್ದು, ಈಗಲೇ ಮಕ್ಕಳು ಬೇಡ. ಆರ್ಥಿಕ ಪರಿಸ್ಥಿತಿ ಸರಿಯಿಲ್ಲ ಹಾಗೂ ಈಗಾಗಲೇ ಎರಡು ಹೆಣ್ಣು ಮಕ್ಕಳಾಗಿವೆ. ಮತ್ತೂಂದು ಹೆಣ್ಣು ಎಂದು ಗೊತ್ತಾಗಿದೆ. ಹೀಗಾಗಿ ಗರ್ಭಪಾತ ಮಾಡಿ ಎಂದು ಸುಳ್ಳು ಹೇಳಿಸುತ್ತಿದ್ದಳು. ಆದರೆ, ವೈದ್ಯರು ಆ ಪೋಷಕರಿಗೆ ಸೂಕ್ತ ಆಪ್ತಸಮಾಲೋಚನೆ ಮಾಡಿದರೂ, ಗರ್ಭಿಣಿ ಗರ್ಭಪಾತಕ್ಕೆ ಒತ್ತಾಯಿಸಿದರೆ, ಕಾನೂನಿನ ಪ್ರಕಾರ 24 ವಾರದ ಒಳಗಿರುವ ಮಗುವನ್ನು ಗರ್ಭಪಾತ ಮಾಡಲು ಅವಕಾಶ ಇರುವುದರಿಂದ ಗರ್ಭಪಾತ ಮಾಡುತ್ತಿದ್ದರು. ಆದರೆ, ಈ ಕೃತ್ಯದ ಹಿಂದೆ ಉಷಾರಾಣಿಯ ಮಾಸ್ಟರ್‌ ಮೈಂಡ್‌ ಇದೆ ಎಂಬುದು ವೈದ್ಯರಿಗೆ ಗೊತ್ತಿಲ್ಲ ಎಂಬುದು ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ಮೂಲಗಳು ತಿಳಿಸಿವೆ.

ಪ್ರತಿ ಗರ್ಭಿಣಿಯಿಂದ ಧನಂಜಯ್‌ ಮತ್ತು ಪುಟ್ಟರಾಜು, ಸಿರಿವಂತರ ಬಳಿ 50-60 ಸಾವಿರ ರೂ., ಮಧ್ಯಮ ವರ್ಗದವರ ಬಳಿ 20-30 ಸಾವಿರ ರೂ. ಪಡೆಯುತ್ತಿದ್ದರು. ಮತ್ತೂಂದು ಸ್ಫೋಟಕ ವಿಚಾರವೆಂದರೆ, ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಶಿವಲಿಂಗೇಗೌಡನ ಮೂಲಕವೂ ಪುಟ್ಟರಾಜು ವ್ಯವಹಾರ ನಡೆಸಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಆಸ್ಪತ್ರೆ ವೈದ್ಯರಿಗೆ ನೋಟಿಸ್‌

ಆರೋಪಿ ಉಷಾರಾಣಿ ಕೆಲಸ ಮಾಡುತ್ತಿದ್ದ ಆಸ್ಪತ್ರೆ ವೈದ್ಯರಿಗೆ ನೋಟಿಸ್‌ ನೀಡಿದ್ದು, ಇದುವರೆಗಿನ ಗರ್ಭಪಾತ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ಪ್ರಾಥಮಿಕವಾಗಿ ಆಸ್ಪತ್ರೆಯ ತಪ್ಪು ಕಂಡುಬಂದಿಲ್ಲ. ಆದರೆ, ಉಷಾರಾಣಿ ಜತೆ ಬೇರೆ ಯಾರಾದರೂ ಆಸ್ಪತ್ರೆಯ ವೈದ್ಯರು ಶಾಮೀಲಾಗಿದ್ದಾರೆಯೇ ಎಂಬ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಉಷಾರಾಣಿ ಬಂಧನ
ಚಂದನ್‌ ಬಲ್ಲಾಳ್‌ ಬಂಧನವಾಗುತ್ತಿದ್ದಂತೆ ಪುಟ್ಟರಾಜು ಮತ್ತು ಧನಂಜಯ್‌ ನಿರೀಕ್ಷಣ ಜಾಮೀನು ಪಡೆದುಕೊಂಡಿದ್ದಾರೆ. ಆದರೆ, ಪ್ರಕರಣ ಸಂಬಂಧ ವಿಚಾರಣೆಗೆ ಕರೆದಾಗ ಈ ಇಬ್ಬರೇ ಪ್ರತ್ಯೇಕವಾಗಿ ಗರ್ಭಪಾತದ ತಂಡ ಕಟ್ಟಿಕೊಂಡಿರುವುದು ಗೊತ್ತಾಗಿದೆ. ಪುಟ್ಟರಾಜು ಹೇಳಿಕೆ ಆಧರಿಸಿ ಉಷಾರಾಣಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.