ಇ-ಪಾಸ್‌ ವಿಳಂಬದಿಂದ ಮುಂಬಯಿ ಕರಾವಳಿಗರಲ್ಲಿ ಆತಂಕ

ಉಚಿತ ಬಸ್‌ ಸೇವೆಯಿಂದ ಮಂಗಳೂರು ತಲುಪಿದ ಯುವಕ

Team Udayavani, May 17, 2020, 5:45 AM IST

ಇ-ಪಾಸ್‌ ವಿಳಂಬದಿಂದ ಮುಂಬಯಿ ಕರಾವಳಿಗರಲ್ಲಿ ಆತಂಕ

ಸಾಂದರ್ಭಿಕ ಚಿತ್ರ.

ಮಂಗಳೂರು: “ಮುಂಬಯಿಯ ಹಲವೆಡೆ ಸಾವಿರಾರು ಮಂದಿ ಊರಿಗೆ ಬರಲು ಪಾಸ್‌ ಸಿಗದೆ ಸಂಕಷ್ಟದಲ್ಲಿದ್ದಾರೆ. ಕೆಲವರ ಕೈಯಲ್ಲಿ ಹಣ ಕೂಡ ಇಲ್ಲ. ಅವರಿಗೆ ನೆರವಾದವರಿಗೆ ಪುಣ್ಯ ಬರುತ್ತದೆ’.

-ಇದು ಮುಂಬಯಿಯಿಂದ ದಾನಿಯೋರ್ವರು ಮಾಡಿದ ಉಚಿತ ಬಸ್‌ ಸೇವೆಯಿಂದ ಮೇ 15ರಂದು ಸಂಜೆ ಮಂಗಳೂರಿಗೆ ಆಗಮಿಸಿದ ಯುವಕನ ಮನವಿ.

“ಇಬ್ಬರು ವಿದ್ಯಾರ್ಥಿನಿಯರ ಸಹಿತ 15 ಮಂದಿ ಬಂದಿದ್ದೇವೆ. ಅದರಲ್ಲಿ ಇಬ್ಬರು ದ.ಕ. ಜಿಲ್ಲೆಯವರಿದ್ದೆವು. ಉಳಿದವರು ಉಡುಪಿಯವರು. ನಾನು ಪಾಸ್‌ ಪಡೆದುಕೊಂಡು ಬರುವಾಗ ಒಂದು ಆಸನ ಮಾತ್ರ ಖಾಲಿಯಿರು ವುದು ಕಂಡು ಮರುಜನ್ಮ ಸಿಕ್ಕಂತಾಯ್ತು. ಕೈಯಲ್ಲಿದ್ದ ಹಣವೂ ಖಾಲಿಯಾಗಿತ್ತು. ಈಗ ಮಂಗಳೂರು ತಲುಪಿ ಕ್ವಾರಂಟೈನ್‌ನಲ್ಲಿದ್ದೇನೆ. ಆದರೆ ಸಾವಿರಾರು ಮಂದಿ ಪಾಸ್‌ಗಾಗಿ ಎದುರು ನೋಡುತ್ತಿದ್ದಾರೆ. ಯಾವಾಗ ಊರು ತಲುಪುತ್ತೇವೆ ಎಂಬ ಕಾತರ ಅವರಲ್ಲಿದೆ ಎಂದು ಆ ಯುವಕ ಮುಂಬಯಿಯಲ್ಲಿರುವ ಕರಾವಳಿಗರ ಸಂಕಟವನ್ನು ವಿವರಿಸುತ್ತಾನೆ.

ಊರೇ ಸೇಫ್
“ನಾನು ಹೊಟೇಲ್‌ನಲ್ಲಿ ದುಡಿ ಯುತ್ತಿದ್ದೆ. ಹೊಟೇಲ್‌ ಬಂದ್‌ ಆಗಿ 2 ತಿಂಗಳಾಯಿತು. ಮೇ 2ಕ್ಕೆ ಪಾಸ್‌ಗಾಗಿ ಸೇವಾ ಸಿಂಧುವಿನಲ್ಲಿ ನೋಂದಾಯಿಸಿದ್ದೆ. ಮೇ 13ಕ್ಕೆ ಪಾಸ್‌ ಸಿಕ್ಕಿತು. ಮರುದಿನವೇ ನನಗೆ ಬಸ್‌ ಸಿಕ್ಕಿತು. ನನ್ನ ಹಲವು ಗೆಳೆಯರು ನೋಂದಾಯಿಸಿದರು. ಅವರಿಗಿನ್ನೂ ಪಾಸ್‌ ಸಿಕ್ಕಿಲ್ಲ. ಕೋವಿಡ್-19 ಸೋಂಕು ಹೆಚ್ಚಾದರೆ ಮಾಡುವುದೇನು ಎಂಬ ಆತಂಕವೂ ಅವರನ್ನು ಕಾಡುತ್ತಿದೆ. ಒಮ್ಮೆ ಊರಿಗೆ ಬಂದರೆ ಸಾಕು.ಮುಂಬಯಿಗಿಂತ ಊರೇ ಸೇಫ್ ಎಂಬ ಭಾವನೆ ಅವರಲ್ಲಿದೆ. ತೊಂದರೆಗೆ ಸಿಲುಕಿಕೊಂಡಿರುವವರಲ್ಲಿ ಹೆಚ್ಚಿನವರು ಹೊಟೇಲ್‌ ಕಾರ್ಮಿಕರು. ಕೆಲವರು ಟಿಕೆಟ್‌ ಹಣವನ್ನು ಹೇಗಾದರೂ ಮಾಡಿ ಹೊಂದಿಸಿಕೊಳ್ಳಲು ತಯಾರಿದ್ದಾರೆ. ಆದರೆ ಪಾಸ್‌ ಸಿಗುತ್ತಿಲ್ಲ’ ಎನ್ನುತ್ತಾರೆ ಕ್ವಾರಂಟೈನ್‌ನಲ್ಲಿರುವ ಯುವಕ.

“ಮತ್ತೆ ಮುಂಬಯಿಗೆ ಹೋಗುವೆ’
ಕೋವಿಡ್-19 ಸೋಂಕಿನಿಂದ ಮುಂಬಯಿ ಮುಕ್ತವಾಗುವ ವಿಶ್ವಾಸವಿದೆ. ಅನಂತರ ಮುಂಬಯಿಗೆ ತೆರಳಿ, ಬದುಕು ಕಟ್ಟಿಕೊಳ್ಳಲು ಸಿದ್ದರಿದ್ದೇವೆ. ಮುಂಬಯಿಯಿಂದ ಮಂಗಳೂರಿಗೆ ಬರುವಾಗ ಯಾವುದೇ ತೊಂದರೆಯಾಗಿಲ್ಲ.ಗರಿಷ್ಠ ಎಚ್ಚರಿಕೆಯಿಂದ ನಾವಿದ್ದೆವು. ಕ್ವಾರಂಟೈನ್‌ನಲ್ಲಿರುವುದ ರಿಂದಾಗಿ ಯಾರ ಭೇಟಿಗೂ ಮತ್ತು ಯಾರಿಗೂ ತೊಂದರೆ ಯಾಗುವುದಿಲ್ಲ ಎನ್ನುತ್ತಾರೆ ಯುವಕ.

ಪಾಸ್‌ ಇಲ್ಲದೆ ಹೊರಡದಿರಿ
ಮುಂಬಯಿನಲ್ಲಿ ಕೆಲವರು ಊರಿಗೆ ಪಾಸ್‌ ಇಲ್ಲದೆಯೂ ಹೋಗಬಹುದು ಎಂದು ಹೇಳುತ್ತಾರೆ. ಆದರೆ ಇದು ತಪ್ಪು ಮಾಹಿತಿ. ಪಾಸ್‌ ಇಲ್ಲದೆ ಬಂದರೆ ಚೆಕ್‌ಪೋಸ್ಟ್‌ಗಳಲ್ಲಿ ತುಂಬಾ ತೊಂದರೆಯಾಗುತ್ತದೆ.

ತುರ್ತು ಅಗತ್ಯ ಇರುವವರಿಗೆ ಆದ್ಯತೆ
ಇ-ಪಾಸ್‌ ಕಡ್ಡಾಯ. ಈಗ ತುರ್ತು ಅಗತ್ಯ ಇರುವವರಿಗೆ ಉಚಿತ ಬಸ್‌ ವ್ಯವಸ್ಥೆ ಮಾಡಲಾಗಿದೆ. ಸಂಸದ ಗೋಪಾಲ್‌ ಸಿ. ಶೆಟ್ಟಿ ಅವರ ನೆರವಿನಿಂದ ಈ ವ್ಯವಸ್ಥೆ ಮಾಡಲಾಗಿದೆ. ಈ ರೀತಿ ತೊಂದರೆಯಲ್ಲಿರುವವರಿಗೆ ಮತ್ತಷ್ಟು ಮಂದಿ ಕೈ ಜೋಡಿಸಬೇಕಾಗಿದೆ. ಮೇ 5ಕ್ಕೆ ಒಂದು ಉಚಿತ ಬಸ್‌ ಕುಂದಾಪುರಕ್ಕೆ ಕಳುಹಿಸಿಕೊಡಲಾಗಿತ್ತು. ಅನಂತರ ಮೇ 14ಕ್ಕೆ ಮಂಗಳೂರಿಗೆ ಕಳುಹಿಸಿಕೊಡಲಾಗಿದೆ.
-ಎರ್ಮಾಳು ಹರೀಶ್‌ ಶೆಟ್ಟಿ, ಸಮಾಜ ಸೇವಕರು, ಮುಂಬಯಿ

ಟಾಪ್ ನ್ಯೂಸ್

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.