ಯಾವುದೇ ಖಾತೆ ಕೊಟ್ಟರೂ ನಿಭಾಯಿಸುವೆ: ಬಿ.ಸಿ.ಪಾಟೀಲ್
Team Udayavani, Aug 5, 2021, 9:32 PM IST
ಬೆಂಗಳೂರು: ಸಚಿವ ಸಂಪುಟದಲ್ಲಿ ಯಾವುದೇ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸುವುದಾಗಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.
ಮುಖ್ಯಮಂತ್ರಿಯವರ ಸೂಚನೆ ಮೇರೆಗೆ ಹಾವೇರಿ ಜಿಲ್ಲೆಯಲ್ಲಿ ನೆರೆಹಾವಳಿ ಪರಿಶೀಲನೆಗೆ ತೆರಳುವ ಸುದ್ದಿಗಾರರ ಜತೆ ಮಾತನಾಡಿದ ಅವರು, ಮತ್ತೆ ಕೃಷಿ ಖಾತೆ ಕೊಟ್ಟರೂ ಸಂತೋಷ ಇಲಾಖೆಯಲ್ಲಿ ಈಗಾಗಲೇ ಹಲವು ಪ್ರಗತಿಪರ ರೈತಪರ ಕೆಲಸಗಳನ್ನು ಮಾಡಿದ್ದು,ಇನ್ನೊಂದಿಷ್ಟು ಸಾಧನೆ ಮಾಡಬೇಕಿದೆ ಎದಂದು ಹೇಳಿದರು.
ಕೃಷಿ ಖಾತೆ ಬಿಟ್ಟು ಬೇರೆ ಖಾತೆ ಕೊಟ್ಟರೂ ಶ್ರದ್ಧೆ ನಿಷ್ಠೆಯಿಂದ ನಿಭಾಯಿಸುತ್ತೇನೆ. ಇಂತಹದ್ದೇ ಖಾತೆ ಎಂದು ಕೊಡಿ ಎಂದು ಕೇಳಿಲ್ಲ.ಯಾವುದೇ ಇಲಾಖೆ ಕೊಟ್ಟರೂ ಪ್ರಗತಿಪರವಾಗಿ ಮಾಡುತ್ತೇನೆ ಎಂದು ತಿಳಿಸಿದರು.
ಮೇಲ್ಮನೆ ಸದಸ್ಯ ಆರ್.ಶಂಕರ್ಗೆ ಸಚಿವ ಸ್ಥಾನ ಸಿಗದ ಬಗ್ಗೆ ಅಸಮಾಧಾನ ಇದ್ದರೆ ವರಿಷ್ಠರು ಅದೆಲ್ಲವನ್ನೂ ಸರಿಪಡಿಸುತ್ತಾರೆ ಎಂದು ಹೇಳಿದರು.