Agri: ಕೃಷಿಗೆ ಸೌರವಿದ್ಯುತ್‌ ಪಂಪ್‌ಸೆಟ್‌ಗಳ ಅಳವಡಿಕೆ: ಜಾರ್ಜ್‌


Team Udayavani, Oct 19, 2023, 11:18 PM IST

george

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್‌ ಕ್ಷೇತ್ರದಲ್ಲಿ ದೀರ್ಘಾವಧಿಯ ಸ್ವಾವಲಂಬನೆ ಸಾಧಿಸಲು ಕೃಷಿಗೆ ಸೌರವಿದ್ಯುತ್‌ ಪಂಪ್‌ಸೆಟ್‌ಗಳ ಅಳವಡಿಕೆ ಅಗತ್ಯವಾಗಿದ್ದು, ಇದರಿಂದ ಸರಕಾರಕ್ಕೆ ವಾರ್ಷಿಕ ಅಂದಾಜು ಒಂದು ಲಕ್ಷ ಕೋಟಿ ರೂ. ಆರ್ಥಿಕ ಹೊರೆ ತಗ್ಗಲಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಇದರ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ತಿಳಿಸಿದರು.

ಬೆಸ್ಕಾಂ ಕೇಂದ್ರ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಇಂಧನ ಇಲಾಖೆ ಹಿರಿಯ ಅಧಿಕಾರಿಗಳು ಮತ್ತು ಸೋಲಾರ್‌ ನೀರಾವರಿ ಪಂಪ್‌ ತಯಾರಕರೊಂದಿಗೆ ನಡೆಸಿದ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು.

ಮೊದಲು ರಾಜ್ಯದಲ್ಲಿ ಹೆಚ್ಚುವರಿ ವಿದ್ಯುತ್‌ ಉತ್ಪಾದನೆ ಆಗುತ್ತಿತ್ತು. ಅನಂತರದಲ್ಲಿ ಮಳೆ ಕೈಕೊಟ್ಟ ಪರಿಣಾಮ ದಿಢೀರ್‌ ಬೇಡಿಕೆ ಹೆಚ್ಚಳವಾಯಿತು. ಪರಿಣಾಮ ಈಗ ಕೊರತೆ ಕಾಡುತ್ತಿದೆ. ವಿದ್ಯುತ್‌ ಕ್ಷೇತ್ರದಲ್ಲಿ ದೀರ್ಘಾವಧಿ ಪರಿಹಾರ ಕಂಡುಕೊಳ್ಳಬೇಕಾದರೆ, ಸೌರವಿದ್ಯುತ್‌ ಪಂಪ್‌ಸೆಟ್‌ಗಳ ಅಳವಡಿಕೆ ಅಧಿಕ ಆಗಬೇಕು. ಇದರಿಂದ ರೈತರು ಮತ್ತು ಸರಕಾರ ಇಬ್ಬರ ಮೇಲಿನ ಹೊರೆಯೂ ತಗ್ಗಲಿದೆ. ಅಷ್ಟೇ ಅಲ್ಲ, ಪರಿಸರಾತ್ಮಕ ಸುಸ್ಥಿರ ಬೆಳವಣಿಗೆಗೂ ಇದು ಪೂರಕವಾಗಲಿದೆ ಎಂದು ಹೇಳಿದರು.

34 ಲಕ್ಷ ಕೃಷಿ ಪಂಪ್‌ಸೆಟ್‌
ಸುಮಾರು 34 ಲಕ್ಷ ಕೃಷಿ ಪಂಪ್‌ಸೆಟ್‌ಗಳಿದ್ದು, ಇವುಗಳನ್ನು ಸೋಲಾರ್‌ ಪಂಪ್‌ಸೆಟ್‌ಗಳಿಗೆ ಪರಿವರ್ತನೆ ಮಾಡಿದರೆ, ಸರಕಾರಕ್ಕೆ ವಾರ್ಷಿಕ ಒಂದು ಲಕ್ಷ ಕೋಟಿ ರೂ. ಮೊತ್ತದಷ್ಟು ಆರ್ಥಿಕ ಹೊರೆ ತಗ್ಗಲಿದೆ. ಜತೆಗೆ ತೈಲ ಆಮದು ಕೂಡ ಗಣನೀಯವಾಗಿ ಇಳಿಕೆಯಾಗಲಿದೆ. ಪ್ರಸ್ತುತ ವಾರ್ಷಿಕ 1.38 ಬಿಲಿಯನ್‌ ಲೀಟರ್‌ ಡೀಸೆಲ್‌ ಬಳಸಲಾಗುತ್ತಿದೆ. ಈ ಎಲ್ಲ ದೃಷ್ಟಿಯಿಂದ ಸೋಲಾರ್‌ ಪಂಪ್‌ಸೆಟ್‌ಗಳನ್ನು ಉತ್ತೇ ಜಿಸುವ ತುರ್ತು ಅಗತ್ಯ ಇದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಪ್ರಸ್ತುತ 6,801 ಕೃಷಿ ಸೋಲಾರ್‌ ಪಂಪ್‌ಸೆಟ್‌ಗಳಿವೆ. ಇದರಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ (ಕೆಆರ್‌ಇಡಿಎಲ್‌) 3,710, ಸಣ್ಣ ನೀರಾವರಿ ಇಲಾಖೆಯ 2,075, ಕೃಷಿ ಇಲಾಖೆಯ 201, ಬೆಸ್ಕಾಂನ 310, ಕೆಆರ್‌ಇಡಿಎಲ್‌ ಕೇಂದ್ರದ ಪಿಎಂ- ಕುಸುಮ್‌ ಯೋಜನೆ ಅಡಿ ಅಳವಡಿಸಿರುವ 513 ಪಂಪ್‌ಸೆಟ್‌ಗಳು ಸೇರಿವೆ.

ಸೋಲಾರ್‌ ಪಂಪ್‌ಸೆಟ್‌ ಅಳವಡಿಕೆಗೆ ತಗಲುವ ವೆಚ್ಚದಲ್ಲಿ ಹೊಸ ಮತ್ತು ನವಿಕರಿಸಬಹುದಾದ ಇಂಧನ ಸಚಿವಾಲಯದಿಂದ ಶೇ. 30ರಷ್ಟು ಅನುದಾನ ನೀಡಲಿದೆ. ಫ‌ಲಾನುಭವಿಯು ಒಂದು ಲಕ್ಷ ರೂ. (ಪರಿಶಿಷ್ಟ ಜಾತಿ ಮತ್ತು ವರ್ಗಕ್ಕೆ ಉಚಿತ) ಭರಿಸಬೇಕಾಗುತ್ತದೆ. ಉಳಿದ ಮೊತ್ತವನ್ನು ರಾಜ್ಯ ಸರಕಾರ ಭರಿಸುತ್ತದೆ. 2014-15ರಲ್ಲಿ ಸೋಲಾರ್‌ ಪಂಪ್‌ಸೆಟ್‌ ಯೋಜನೆ ಪರಿಚಯಿಸ ಲಾಗಿದೆ ಎಂದು ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದರು.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.