Aranthodu: ನೀರು ಪಾಲಾಗಿದ್ದ ಕೂಲಿ ಕಾರ್ಮಿಕನ ಮೃತದೇಹ ಪತ್ತೆ
Team Udayavani, Jul 9, 2023, 2:24 PM IST
ಅರಂತೋಡು: ನಾಲ್ಕು ದಿನಗಳ ಹಿಂದೆ ಪಾಲ ದಾಟುತ್ತಿದ್ದ ಸಂದರ್ಭ ಆಯ ತಪ್ಪಿ ಹೊಳೆಗೆ ಬಿದ್ದಿದ್ದ ಕೂಲಿ ಕಾರ್ಮಿಕನ ಮೃತದೇಹ ಜು.9ರ ಭಾನುವಾರ ಪತ್ತೆಯಾಗಿದೆ.
ಕುಂದಲ್ಪಾಡಿ ಪೆರಾಜೆ ಎಂಬಲ್ಲಿ ರಬ್ಬರ್ ಟ್ಯಾಪರ್ ಆಗಿದ್ದ ಕಾಸರಗೋಡು ಜಿಲ್ಲೆಯ ಚಿತ್ತಾರಿಕಲ್ ಸಮೀಪದ ನಾರಾಯಣನ್ ಎಂಬವರು ಕೂರ್ನಡ್ಕದಲ್ಲಿ ಪಾಲ ದಾಟಿ ಬರುತ್ತಿದ್ದಾಗ ನೀರು ಪಾಲಾಗಿದ್ದರು.
ಅಂದಿನಿಂದಲೇ ಶೋಧ ಕಾರ್ಯ ಆರಂಭಗೊಂಡಿತ್ತು. ಸುಳ್ಯ ಅಗ್ನಿಶಾಮಕ ದಳ, ಎಸ್.ಡಿ.ಆರ್.ಎಫ್ ತಂಡ, ಪೋಲಿಸ್ ಇಲಾಖೆಯೊಂದಿಗೆ ಅರಂತೋಡು ಕಲ್ಲುಗುಂಡಿ ವಿಖಾಯ ತಂಡ ಹಾಗೂ ಪೈಚಾರಿನ ಮುಳುಗು ತಜ್ಞರು ಕೂಡಾ ಶೋಧ ಕಾರ್ಯದಲ್ಲಿ ತೊಡಗಿದ್ದರು.
ಇದೀಗ ಆಲೆಟ್ಟಿಯ ಕನ್ನಿಗುಂಡಿ ಬಳಿಯಲ್ಲಿ ಪಯಸ್ವಿನಿ ಹೊಳೆ ಮಧ್ಯೆ ಪೊದೆಯಲ್ಲಿ ಸಿಲುಕಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಆ ಪ್ರದೇಶದಲ್ಲಿ ಪೈಚಾರಿನ ಮುಳುಗು ತಜ್ಞರು ಶೋಧ ಕಾರ್ಯ ನಡೆಸುತ್ತಿದ್ದಾಗ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ.
ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು