ಕಾಶ್ಮೀರ: ಹಿಮದೊಳಗೆ ಸಿಲುಕಿದ್ದ 30 ಮಂದಿಯ ರಕ್ಷಣೆ
Team Udayavani, Jan 19, 2022, 6:50 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಸೋಮವಾರ ನಾಗರಿಕರು ಚಲಿಸುತ್ತಿದ್ದ ವಾಹನದ ಮೇಲೆ ಹಿಮಪಾತವಾಗಿದ್ದು, ಅದರಲ್ಲಿ ಸಿಲುಕಿದ್ದ ಒಂದು ಮಗುವೂ ಸೇರಿ ದಂತೆ 30 ಮಂದಿಯನ್ನು ಸೇನೆಯ ಯೋಧರು ರಕ್ಷಿಸಿದ್ದಾರೆ.
ತಂಗಧಾರ್-ಚೌಕಿಬಾಲ್ ಆಕ್ಸಿಸ್ ಬಳಿಯಲ್ಲಿ ಈ ಘಟನೆ ನಡೆದಿದೆ. ವಾಹನದ ಮೇಲೆ ಹಿಮ ಬೀಳುವಷ್ಟರಲ್ಲಿ ಅದರಲ್ಲಿದ್ದವರು ಕೆಳಕ್ಕೆ ಇಳಿದಿದ್ದಾರೆ. ಅಲ್ಲಿಯೇ ಇದ್ದ ಅವರನ್ನು ಯೋಧರು ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಅವರ ವಾಹನವನ್ನೂ ಹಿಮದಿಂದ ಹೊರತೆಗೆಯಲಾಗಿದೆ.
ಇದನ್ನೂ ಓದಿ:ಬಜೆಟ್ ಅಧಿವೇಶನಕ್ಕಿಲ್ಲ ಬಹು ನಿರೀಕ್ಷಿತ ಕ್ರಿಪ್ಟೋ ಕರೆನ್ಸಿ ನಿಯಂತ್ರಣ ವಿಧೇಯಕ
ಅದೇ ರಸ್ತೆಯ ಇನ್ನೊಂದು ಭಾಗದಲ್ಲಿ 16 ಜನರ ಮತ್ತೊಂದು ಗುಂಪು ಹಿಮದಲ್ಲಿ ಸಿಲುಕಿದ್ದು, ಅವರನ್ನೂ ರಕ್ಷಿಸಿರುವುದಾಗಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು