ಬಂಗಾರದ ಗಟ್ಟಿ ದೋಚಿದವರ ಬಂಧನ


Team Udayavani, Dec 2, 2021, 11:26 AM IST

police

ಬೆಂಗಳೂರು: ಇತ್ತೀಚೆಗೆ ಎರಡೂವರೆ ಕೋಟಿ ರೂ. ಮೌಲ್ಯದ ಚಿನ್ನದ ಗಟ್ಟಿ ದೋಚಿ ಪರಾರಿಯಾಗಿದ್ದ ಚಿನ್ನಾಭರಣ ಮಳಿಗೆಯ ಭದ್ರತಾ ಸಿಬ್ಬಂದಿ ಸೇರಿ ಏಳು ಮಂದಿ ಆರೋಪಿಗಳನ್ನು ಹಲಸೂರು ಗೇಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೆ.ಜಿ.ಹಳ್ಳಿ ನಿವಾಸಿ ಮೊಹಮ್ಮದ್‌ ಫ‌ರ್ಹಾನ್‌ ಅಲಿ ಯಾಸ್‌ ಶಹಬಾಜ್‌(25), ಆರ್‌.ನಗರ ನಿವಾಸಿ ಉಮೇಶ್‌(53), ನಾಗವಾರ ಮುಖ್ಯರಸ್ತೆ ನಿವಾಸಿ ಮೊಹಮ್ಮದ್‌ ಹುಸೇನ್‌(36), ವೆಂಕಟೇಶ್ವರಪುರ ನಿವಾಸಿ ಮೊಹಮ್ಮದ್‌ ಆರೀಫ್(36), ಅಂಜುಂ ಅಲಿ ಯಾಸ್‌ ಅಮ್ಜದ್‌(34), ಸೈಯದ್‌ ಅಹಮ್ಮದ್‌(24) ಹಾಗೂ ಸುಹೇಲ್‌ ಬೇಗ್‌ ಅಲಿಯಾಸ್‌ ಬಾಬು(24) ಬಂಧಿತರು.

ಆರೋಪಿಗಳಿಂದ 2.25 ಕೋಟಿ ರೂ. ಮೌಲ್ಯದ 4 ಕೆ.ಜಿ. 954 ಗ್ರಾಂ ಚಿನ್ನವನ್ನು ವಶಕ್ಕೆ ಪಡೆ ಯವಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಹೇಳಿದರು. ನ.19ರಂದು ಚಿನ್ನದ ಗಟ್ಟಿ ಕೊಂಡೊಯ್ಯುತ್ತಿದ್ದ ಚಿನ್ನದ ವ್ಯಾಪಾರಿ ನಗರ್ತ್‌ಪೇಟೆ ನಿವಾಸಿ ಸಿದ್ದೇಶ್ವರ್‌ ಹರಿಭಾ ಶಿಂಧೆ(32) ಮೇಲೆ ಆರೋಪಿಗಳು ಹಲ್ಲೆ ನಡೆಸಿ 2.5 ಕೋಟಿ ರೂ. ಮೌಲ್ಯದ 5.5 ಕೆ.ಜಿ. ಚಿನ್ನದ ಗಟ್ಟಿಯನ್ನು ಕಳವು ಮಾಡಿದ್ದರು.

ಆರೋಪಿಗಳ ಪೈಕಿ ಶಹಬಾಜ್‌ ಮತ್ತ ಸುಹೇಲ್‌ ವಿರುದ್ಧ ಕೆ.ಜಿ. ಹಳ್ಳಿ ಮತ್ತು ತಿಪಟೂರು ಠಾಣೆಯಲ್ಲಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ, ಬಿಡುಗಡೆಯಾಗಿದ್ದರು. ಮತ್ತೂಬ್ಬ ಆರೋಪಿ ಉಮೇಶ್‌ ಇಂಡಿಯನ್‌ ಎಕ್ಸ್‌ಪ್ರಸ್‌ ಬಳಿರುವ ಅಟ್ಟಿಕಾ ಗೋಲ್ಡ್‌ ಅಂಗಡಿಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ. ಒಂದು ವರ್ಷದ ಹಿಂದೆ ಉಮೇಶ್‌ ಇದೇ ರೀತಿಯ ಕೃತ್ಯದಲ್ಲಿ ವಿಫ‌ಲ ಯತ್ನ ನಡೆಸಿದ್ದ. ಇದೀಗ ಶಹಬಾಜ್‌ ಹಾಗೂ ಇತರರ ಜತೆ ಸೇರಿಕೊಂಡು ಕೃತ್ಯ ಎಸಗಿದ್ದಾನೆ ಎಂದರು.

ಭದ್ರತಾ ಸಿಬ್ಬಂದಿಯೇ ಸೂತ್ರದಾರ: ಅಟ್ಟಿಕಾ ಗೋಲ್ಡ್‌ ಮಳಿಗೆಯಲ್ಲಿ ಭದ್ರತಾ ಸಿಬ್ಬಂದಿಯಾಗಿದ್ದ ಉಮೇಶ್‌, ಚಿನ್ನಾಭರಣ ಮಳಿಗೆಗೆ ಬರುವ ವ್ಯಕ್ತಿಗಳ ಮೇಲೆ ನಿಗಾವಹಿಸುತ್ತಿದ್ದ, ಕೋಟ್ಯಂತರ ರೂ. ಮೌಲ್ಯದ ಚಿನ್ನದ ಗಟ್ಟಿ ಅಥವಾ ಚಿನ್ನಾಭರಣ ಖರೀದಿಸಿದ ವ್ಯಕ್ತಿಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದ.ಅವರ ವಾಹನ ನಂಬರ್‌ ಹಾಗೂ ಮಳಿಗೆಯ ಒಳಭಾಗದಲ್ಲಿ ನೋಂದಣಿ ಪುಸ್ತ ಕದಲ್ಲಿದ್ದ ಗ್ರಾಹಕನ ಮೊಬೈಲ್‌ ನಂಬರ್‌ ಪಡೆದುಕೊಳ್ಳುತ್ತಿದ್ದ.

ಈ ಮಾಹಿತಿಯನ್ನು ತನ್ನ ಸಹಚರರಾದ ಇತರೆ ಆರೋಪಿಗಳ ಜತೆ ಹಂಚಿಕೊಳ್ಳುತ್ತಿದ್ದ. ಶಹನಾಬ್‌ ಮತ್ತು ಸುಹೇಲ್‌ ಇತರೆ ಆರೋಪಿಗಳ ಜತೆ ಸೇರಿಕೊಂಡು ದರೋಡೆ ಮಾಡುತ್ತಿದ್ದರು. ಒಂದು ವರ್ಷದ ಹಿಂದೆ ಇದೇ ರೀತಿಯ ದರೋಡೆಗೆ ವಿಫ‌ಲ ಯತ್ನ ನಡೆಸಿದ್ದರು. ನ.19ರಂದು ಚಿನ್ನದ ಗಟ್ಟಿ ಕೊಂಡೊಯ್ಯುತ್ತಿದ್ದ ಚಿನ್ನದ ವ್ಯಾಪಾರಿ ನಗರ್ತ್‌ಪೇಟೆ ನಿವಾಸಿ ಸಿದ್ದೇಶ್ವರ್‌ ಹರಿಭಾ ಶಿಂಧೆ(32) ಮತ್ತು ಸ್ನೇಹಿತ ಸೂರಜ್‌ ಶ್ರೀಕಾಂತ್‌ ಜಾಧವ್‌ ಜತೆ ಅಟ್ಟಿಕಾ ಗೋಲ್ಡ್‌ನಲ್ಲಿ 2.5 ಕೋಟಿ ರೂ. ಮೌಲ್ಯದ 5.5 ಕೆ.ಜಿ. ಚಿನ್ನದ ಗಟ್ಟಿ ಖರೀ ದಿಸಿದ್ದರು.

ಈ ಮಾಹಿತಿಯನ್ನು ಉಮೇಶ್‌, ಇತರೆ ಆರೋಪಿಗಳಿಗೆ ನೀಡಿದ್ದಾನೆ. ಹೀಗಾಗಿ 6 ಮಂದಿ 2 ಕಿ.ಮೀ. ದೂರ ಅವರನ್ನು ಹಿಂಬಾಲಿಸಿ, ಕಬ್ಬನ್‌ ಪೇಟೆ ಮುಖ್ಯ ರಸ್ತೆ 22ನೇ ಕ್ರಾಸ್‌ನಲ್ಲಿ ಹಿಂದಿನಿಂದ ಬಂದು ಮಾರಕಾಸ್ತ್ರಗಳನ್ನು ತೋರಿಸಿ, ದರೋಡೆ ಮಾಡಿದ್ದರು. ಬಳಿಕ ಏಳು ಮಂದಿ ಹಂಚಿಕೊಂಡಿದ್ದರು ಎಂದು ಪೊಲೀಸರು ಹೇಳಿದರು. ಪೊಲೀಸರ ಈ ಕಾರ್ಯಕ್ಕೆ ನಗರ ಪೊಲೀಸ್‌ ಆಯುಕ್ತರು ಶ್ಲಾ ಸಿ, ತನಿಖಾ ತಂಡಕ್ಕೆ 70 ಸಾವಿರ ಬಹುಮಾನ ಘೋಷಿಸಿ¨ªಾರೆ.

ಫೋನ್‌ ಸಂಭಾಷಣೆ ಮೂಲಕ ಬಲೆಗೆ

ಇನ್‌ಸ್ಪೆಕ್ಟರ್‌ ಸಿ.ವಿ.ದೀಪಕ್‌ ಮತ್ತು ಸಬ್‌ ಇನ್‌ಸ್ಪೆಕ್ಟರ್‌ ಎನ್‌.ಸಿ.ಮಲ್ಲಿಕಾರ್ಜುನ್‌, ಗೋಪಾಲಕೃಷ್ಣ ನೇತೃತ್ವದ ತಂಡ ಪ್ರಕರಣ ದಾಖಲಿಸಿಕೊಂಡ ವಿಚಾರಣೆ ನಡೆಸಿದಾಗ ಭದ್ರತಾ ಸಿಬ್ಬಂದಿ ಉಮೇಶ್‌ ಗೊಂದಲದ ಹೇಳಿಕೆ ನೀಡಿದ್ದ. ಅಲ್ಲದೆ, 2ನೇ ಬಾರಿ ಮಳಿಗೆಯ ಸಿಬ್ಬಂದಿ ವಿಚಾರಣೆಗೆ ಹೋದಾಗ, ಮೊಬೈಲ್‌ನಲ್ಲಿ ಉಮೇಶ್‌, ಆತನ ಸಹಚರರಿಗೆ ಪೊಲೀಸ್‌ ಬಂದಿದ್ದಾರೆ ಎಂದು ಹೇಳುತ್ತಿದ್ದ.

ಈ ವಿಷಯ ಕೇಳಿಸಿಕೊಂಡ ಸಿಬ್ಬಂದಿ, ಹಿರಿಯ ಅಧಿಕಾರಿಗಳಿಗೆ ಹೇಳಿದ್ದರು. ಬಳಿಕ ಆತನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದಾಗ ಸತ್ಯಾಂಶ ಬೆಳಕಿಗೆ ಬಂದಿದೆ. ಈತನ ಸಿಡಿಆರ್‌ ಆಧರಿಸಿ ಇತರೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.