ಕಾಂಗ್ರೆಸ್ನಲ್ಲಿ ಸಿಎಂ ಹುದ್ದೆಗೆ ಪೈಪೋಟಿ: ಅರುಣ್ ಸಿಂಗ್
ಈಶ್ವರಪ್ಪ ಪರ ಪಕ್ಷ ನಿಲ್ಲಲಿದೆ ಎಂದ ಬಿಜೆಪಿ ರಾಜ್ಯ ಉಸ್ತುವಾರಿ
Team Udayavani, Apr 17, 2022, 7:35 AM IST
ಹೊಸಪೇಟೆ: ಕರ್ನಾಟಕ ಕಾಂಗ್ರೆಸ್ನಲ್ಲಿ “ಕೂಸು ಹುಟ್ಟುವ ಮುನ್ನ ಕುಲಾವಿ’ ಎಂಬಂತೆ ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಶುರುವಾಗಿದ್ದು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೆಲಕಚ್ಚಲಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.
ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಪ್ರಾರಂಭವಾಗಿದೆ. ದೇಶದಲ್ಲೆಡೆ ಜನತೆ ಕಾಂಗ್ರೆಸ್ ಮೇಲಿನ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ. ದೇಶದ 4 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಏರಿದ ಬಳಿಕ ಕರ್ನಾಟಕದ ಕಾರ್ಯಕರ್ತರು ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಉತ್ಸುಕರಾಗಿದ್ದಾರೆ. ಕೇಂದ್ರದ ನರೇಂದ್ರ ಮೋದಿಯವರ ಸರಕಾರದ ಸಾಧನೆಗಳು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜನಪರ ಮತ್ತು ಬಡವರ ಪರವಾದ ಕಾರ್ಯಕ್ರಮಗಳ ವಿವರವನ್ನು ಜನರಿಗೆ ತಲುಪಿಸಿ ಬಿಜೆಪಿಯನ್ನು ಗೆಲ್ಲಿಸಲು ಕಾರ್ಯಕರ್ತರು ಸಜ್ಜಾಗಿದ್ದಾರೆ ಎಂದರು.
ವಿಜಯನಗರದಿಂದ ಪದಾಧಿಕಾರಿಗಳು ವಿಜಯದ ಸಂಕಲ್ಪ ದೊಂದಿಗೆ ಮರಳಲಿದ್ದಾರೆ. ಬಿಜೆಪಿ 2023ರ ವಿಧಾನಸಭಾ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸೀಟುಗಳನ್ನು ಗೆದ್ದು ಅಧಿಕಾರಕ್ಕೆ ಏರುವ ವಿಶ್ವಾಸವಿದೆ ಎಂದು ತಿಳಿಸಿದರು.
ಕಾಮನ್ ಮ್ಯಾನ್ ಮತ್ತು ಸಿಂಪಲ್ಮ್ಯಾನ್ ಎನಿಸಿದ ಬಸವರಾಜ ಬೊಮ್ಮಾಯಿ ಅವರು ಕಾರ್ಯಕರ್ತರ ಹುರುಪನ್ನು ಹೆಚ್ಚಿಸಿದ್ದಾರೆ. ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲು ಸಂಘಟನ ಚತುರರಾಗಿದ್ದಾರೆ ಎಂದು ಶ್ಲಾ ಸಿದರು.
ಸಂತೋಷ್ ಪಾಟೀಲ್ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕೆ.ಎಸ್.ಈಶ್ವರಪ್ಪ ಪರವಾಗಿ ಬಿಜೆಪಿ ಪಕ್ಷ ನಿಲ್ಲಲಿದೆ ಎಂದರು.
ಮಾಜಿ ಸಚಿವ ಈಶ್ವರಪ್ಪ ನಮ್ಮ ಪಕ್ಷದ ಹಿರಿಯ ನಾಯಕರು. ರಾಜ್ಯದಲ್ಲಿ ಬಿಜೆಪಿ ಪಕ್ಷ ಈ ಹಂತಕ್ಕೆ ಬರಲು ಈಶ್ವರಪ್ಪ ಅವರ ಕೊಡುಗೆಯೂ ದೊಡ್ಡದಿದೆ. ಶೀಘ್ರದಲ್ಲೇ ಅವರು ಆರೋಪ ಮುಕ್ತರಾಗುವ ವಿಶ್ವಾಸವಿದೆ. ಆ ಬಳಿಕ ಅವರು ಪುನಃ ಸಚಿವರಾಗುತ್ತಾರೆ ಎಂದು ಹೇಳಿದರು.
ಸಂತೋಷ್ ಪಾಟೀಲ್ ಪ್ರಕರಣದಲ್ಲಿ ಈಶ್ವರಪ್ಪರನ್ನು ಸಿಲುಕಿಸಲು ಷಡ್ಯಂತ್ರ ನಡೆದಿದೆ. ಸದ್ಯ ಪ್ರಕರಣದ ತನಿಖೆ ನಡೆಯುತ್ತಿದೆ. ಆ ಬಳಿಕ ಸತ್ಯ ಹೊರಬರಲಿದೆ. ಈಶ್ವರಪ್ಪ ತಳಮಟ್ಟದಿಂದ ಬಿಜೆಪಿಯನ್ನು ಕಟ್ಟಿದ್ದಾರೆ. ನಮ್ಮ ಪಕ್ಷ ಅವರೊಂದಿಗಿದೆ. ಪ್ರಕರಣದಲ್ಲಿ ಕಾಂಗ್ರೆಸ್ ಷಡ್ಯಂತ್ರವಿದ್ದು ಅದು ತನಿಖೆಯಿಂದ ಬಹಿರಂಗವಾಗಲಿದೆ ಎಂದರು.
ಕೆ.ಎಸ್. ಈಶ್ವರಪ್ಪ ರಾಜೀನಾಮೆ ಪ್ರಕರಣದಿಂದ ಕೇಂದ್ರ ಮತ್ತು ರಾಜ್ಯ ಸರಕಾರ ಹಾಗೂ ಬಿಜೆಪಿಗೆ ಯಾವುದೇ ಮುಜುಗರ ಉಂಟಾಗಿಲ್ಲ. ಅವರು ಆರೋಪ ಬಂದ ಕೂಡಲೇ ಪ್ರಾಮಾಣಿಕವಾಗಿ ರಾಜೀನಾಮೆ ಸಲ್ಲಿಸಿದ್ದಾರೆ.
– ನಾರಾಯಣ ಸ್ವಾಮಿ, ಕೇಂದ್ರ ಸಚಿವ
ಕಾಂಗ್ರೆಸ್ಗೆ ಮರ್ಮಾಘಾತ ನೀಡುವ ಅನೇಕ ಸಂಗತಿಗಳು ಬಿಜೆಪಿಗೆ ಲಭಿಸಿವೆ. ಅದನ್ನು ಚುನಾವಣ ರಾಜಕೀಯ ತಂತ್ರಗಾರಿಕೆ ರೂಪದಲ್ಲಿ ಅವರಿಗೆ ಪ್ರತಿರೋಧ ಒಡ್ಡಲು ಕಾರ್ಯಕರ್ತರು ಬಳಸಿಕೊಳ್ಳಲು ನಿರ್ಧರಿಸಲಾಗಿದೆ.
- ಸಿ.ಟಿ.ರವಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ
Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!
Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ
Ayodhya: ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಬಹಿಷ್ಕಾರ: ಶ್ರೀರಾಮುಲು ಆಕ್ರೋಶ
Hospete: ಫೆ.3 ರಂದು ಅಂತರಾಷ್ಟ್ರೀಯ ಪ್ರವಚನಕಾರರಾದ ಬಿ.ಕೆ.ಶಿವಾನಿ ಹೊಸಪೇಟೆಗೆ ಭೇಟಿ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ