Yakshagana: ಅರುವ ಕೊರಗಪ್ಪ ಶೆಟ್ಟಿ ಅವರಿಗೆ ಜಾನಪದ ಶ್ರೀ ಪ್ರಶಸ್ತಿ


Team Udayavani, Dec 28, 2023, 12:22 AM IST

koraa

ಬೆಂಗಳೂರು/ ಬೆಳ್ತಂಗಡಿ: ಸರಕಾರವು 2022-23ನೇ ಸಾಲಿನ ಜಾನಪದ ಶ್ರೀ ಪ್ರಶಸ್ತಿಗೆ ತೆಂಕುತಿಟ್ಟು ಯಕ್ಷಗಾನದ ಹಿರಿಯ ಕಲಾವಿದರೂ ರಾಜ್ಯ ಪ್ರಶಸ್ತಿ ವಿಜೇತರೂ ಆಗಿರುವ ಅರುವ ಕೊರಗಪ್ಪ ಶೆಟ್ಟಿ (83) ಅವರನ್ನು ಆಯ್ಕೆ ಮಾಡಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಬುಧವಾರ ಪತ್ರಿಕಾ ಗೋಷ್ಠಿಯಲ್ಲಿ ಈ ವಿಚಾರ ತಿಳಿಸಿದರು.

“ಅರುವದವರು” ಎಂದೇ ಪ್ರಸಿದ್ಧಿ ಅಳದಂಗಡಿಯ ಸುಬ್ಬಯ್ಯ ಶೆಟ್ಟಿ- ಕಾಂತಕ್ಕೆ ದಂಪತಿಯ ಹಿರಿಯ ಮಗನಾಗಿ 28 ನವೆಂಬರ್‌ 1940ರಲ್ಲಿ ಜನಿಸಿದ “ಅರುವದವರು’ ತಮ್ಮ 15ನೇ ವರ್ಷದಲ್ಲಿ ಕಟೀಲು ಮೇಳವನ್ನು ಸೇರಿಕೊಂಡು 6 ದಶಕಗಳಿಂದ ವಿವಿಧ ಮೇಳಗಳಲ್ಲಿ ಕಲಾಸೇವೆ ಮಾಡುತ್ತಿದ್ದಾರೆ.

“ಗದಾಯುದ್ಧ’ದ ಕೌರವ, “ಕೋಟಿ ಚೆನ್ನಯ’ದ ಕೋಟಿ ಮುಂತಾದ ಪಾತ್ರಗಳ ನಿರ್ವಹಣೆಯಲ್ಲೂ ಪ್ರಸಿದ್ಧಿ ಪಡೆದಿದ್ದಾರೆ. 3 ವರ್ಷ ಕಾಲ ಕಟೀಲು ಮೇಳ, ಕೂಡ್ಲು ಮೇಳದಲ್ಲಿ 2 ವರ್ಷ, ಕುಂಡಾವು ಮೇಳದಲ್ಲಿ 7 ವರ್ಷ, ಕದ್ರಿ, ಮಂಗಳಾ ದೇವಿ, ಎಡನೀರು ಮೇಳ ಗಳಲ್ಲಿ ಸೇವೆ ಸಲ್ಲಿಸಿ, 3 ದಶಕಳ ಕಾಲ ಕರ್ನಾಟಕ ಮೇಳದಲ್ಲಿ ತಾರಾ ಕಲಾವಿದರಾಗಿ ರಂಗಸ್ಥಳವನ್ನಾಳಿ ಪ್ರಸ್ತುತ ಬಪ್ಪನಾಡು ಮೇಳದಲ್ಲಿ ಮುಖ್ಯ ಕಲಾವಿದರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಮಂಗಳಾದೇವಿ ಮೇಳದಲ್ಲಿ 12 ವರ್ಷ ಹಾಗೂ ಕರ್ನಾಟಕ ಯಕ್ಷಗಾನ ನಾಟಕ ಸಭಾದಲ್ಲಿ ಕನ್ನಡ ಯಕ್ಷಗಾನ ಪ್ರಸಂಗಗಳಲ್ಲಷ್ಟೇ ಅಲ್ಲದೇ ಹಲವಾರು ತುಳು ಪ್ರಸಂಗಗಳಲ್ಲೂ ಮುಖ್ಯ ಪಾತ್ರಗಳನ್ನು ನಿರ್ವ ಹಿಸಿ ಜನಮನ ಗೆದ್ದಿದ್ದಾರೆ. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಎಡನೀರು ಪ್ರಶಸ್ತಿ, ಶ್ರೀ ಪೇಜಾವರ ಮಠದ ರಾಮವಿಠಲ ಪ್ರಶಸ್ತಿ, ಮಾಣಿಲ ಪ್ರಶಸ್ತಿ, ಉಡುಪಿ ಯಕ್ಷಗಾನ ಕಲಾರಂಗದ ಡಾ| ಬಿ.ಬಿ. ಶೆಟ್ಟಿ ಪ್ರಶಸ್ತಿ ಸೇರಿ ಹಲವಾರು ಪ್ರಶಸ್ತಿ ಅರಸಿ ಬಂದಿವೆ. ಶ್ರೀ ಅರುವ ಕೊರಗಪ್ಪಶೆಟ್ಟಿ ಸಾಂಸ್ಕೃತಿಕ ಪ್ರತಿಷ್ಠಾನದ ಮೂಲಕ ಕಲಾವಿದರಿಗೆ ನೆರವು, ಹೆಣ್ಣು ಮಕ್ಕಳ ಮದುವೆಗೆ ನೆರವು, ವಿದ್ಯಾರ್ಥಿ ವೇತನ ವಿತರಿಸುತ್ತ ಬಂದಿದ್ದಾರೆ.

ಇತರ ಪ್ರಶಸ್ತಿ ಪುರಸ್ಕೃತರು
ಇದೇ ಸಂದರ್ಭ 2022 -23 ಮತ್ತು 23-24ರ ಸಾಲಿನ ವರ್ಣಶಿಲ್ಪಿ ವೆಂಕಟಪ್ಪ, ಜಕಣಾಚಾರಿ ಮತ್ತಿತರ ಪ್ರಶಸ್ತಿ ಗಳನ್ನೂ ಪ್ರಕಟಿಸಲಾಗಿದೆ. ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿಗೆ ಜಿ.ಎಲ್‌.ಎನ್‌. ಸಿಂಹ, ಬಸವರಾಜ ಎಲ್‌. ಜಾನೆ; ಜಕಣಾ ಚಾರಿ ಪ್ರಶಸ್ತಿಗೆ ಮಹದೇವಪ್ಪ ಎಸ್‌. ಶಿಲ್ಪಿ, ಎಸ್‌.ಪಿ.

ಜಯಣ್ಣಾಚಾರ್‌ ಪಾತ್ರರಾಗಿದ್ದಾರೆ. ಜಾನಪದ ಶ್ರೀ ಪ್ರಶಸ್ತಿಗೆ ಅರುವ ಅವರ ಜತೆಗೆ ಕಲ್ಲಪ್ಪ ಮಿರ್ಜಾಪುರ, ಜಿ.ಪಿ. ಜಗದೀಶ್‌, ಹಲಗೆ ದುರ್ಗಮ್ಮ ಭಾಜನರಾಗಿದ್ದಾರೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.