ಮದಗಜನ ಸೇರುವ ನಿರೀಕ್ಷೆಯಲ್ಲಿ ಆಶಿಕಾ

ಪ್ಯಾನ್‌ ಇಂಡಿಯಾ ಚಿತ್ರಕ್ಕೆ ಜೋರು ತಯಾರಿ

Team Udayavani, Jun 12, 2020, 4:38 AM IST

ashika-madagaja

ಶ್ರೀಮುರಳಿ ಅಭಿನಯದ “ಮದಗಜ’ ಚಿತ್ರ ಈಗಾಗಲೇ ಮೊದಲ ಹಂತದ ಶೇ.30 ರಷ್ಟು ಚಿತ್ರೀಕರಣ ಮುಗಿಸಿದೆ. ಎರಡನೇ ಹಂತಕ್ಕೆ ತಯಾರಾಗುವ ಹೊತ್ತಲ್ಲೇ ಲಾಕ್‌ ಡೌನ್‌ ಘೋಷಣೆಯಾಗಿದೆ. ಈಗ ಲಾಕ್‌ಡೌನ್‌ ಸಡಿಲಗೊಂಡಿದ್ದು,  ಅಂದುಕೊಂಡಂತೆ ನಡೆದರೆ, ಜೂ.18ರಿಂದ ಚಿತ್ರೀಕರಣಕ್ಕೆ ಅನುಮತಿ ಸಿಗುವ ಸಾಧ್ಯತೆ ಇದೆ. ಹಾಗೇನಾದರೂ, ಚಿತ್ರೀಕರಣಕ್ಕೆ ಅನುಮತಿ ಸಿಕ್ಕರೆ, ಜುಲೈ 6 ರಿಂದ “ಮದಗಜ’ ಚಿತ್ರಕ್ಕೆ ಚಾಲನೆ ಸಿಗಲಿದೆ.

ಈ ಚಿತ್ರಕ್ಕೆ ನಟಿ ಆಶಿಕಾ ನಾಯಕಿಯಾಗಿದ್ದಾರೆ. ಈವರೆಗೆ ಶ್ರೀಮುರಳಿ  ಅವರ ಭಾಗದ ಚಿತ್ರೀಕರಣ ಮಾತ್ರ ನಡೆದಿದೆ. ಆಶಿಕಾ ಅವರ ಭಾಗದ ಚಿತ್ರೀಕರಣವಿನ್ನೂ ಶುರುವಾಗಿಲ್ಲ. ಜು.6ರಿಂದ ಆಶಿಕಾ “ಮದಗಜ’ ತಂಡವನ್ನು ಸೇರಿಕೊಳ್ಳಲಿದ್ದಾರೆ. ಮೈಸೂರು ಹಾಗೂ  ಗುಂಡ್ಲುಪೇಟೆ ಸುತ್ತಮುತ್ತಲ ಸ್ಥಳಗಳಲ್ಲಿ ಒಂದೇ ಹಂತದ 46 ದಿನಗಳ ಕಾಲ ಚಿತ್ರೀಕರಣ ನಡೆಸುವ ಯೋಚನೆ ನಿರ್ದೇಶಕ ಮಹೇಶ್‌ ಕುಮಾರ್‌ ಅವರಿಗಿದೆ. ಸದ್ಯಕ್ಕೆ ನಿರ್ದೇಶಕರು ಹಾಡುಗಳ ತಯಾರಿಯಲ್ಲಿದ್ದಾರೆ.

ಈಗಾಗಲೇ ಸಂಗೀತ  ನಿರ್ದೇಶಕ ರವಿಬಸ್ರೂರ್‌ ಅವರು ಹಾಡುಗಳಿಗೆ ರಾಗ ಸಂಯೋ ಜಿಸಿದ್ದು, ಟ್ರ್ಯಾಕ್‌ ಹಾಡಿಸ್ತಾ ಇದ್ದಾರೆ. “ಬಹ ದ್ದೂರ್‌’ ಚೇತನ್‌ ಕುಮಾರ್‌, ರವಿಬಸ್ರೂರ್‌, ಕಿನ್ನರ ರಾಜ್‌ ಬರೆದಿರುವ ನಾಲ್ಕು ಹಾಡುಗಳು  ರೆಡಿಯಾಗಿವೆ. ಸದ್ಯಕ್ಕೆ ಗಾಯಕ ಸಂತೋಷ್‌ ವೆಂಕಿ ಅವರು ಟ್ರ್ಯಾಕ್‌ ಹಾಡಿದ್ದಾರೆ. ಕೈಲಾಶ್‌ ಖೇರ್‌, ಕಾಲ ಭೈರವ, ಶ್ರೇಯಾಘೋಷಾಲ್‌ ಇತರರು ಹಾಡಲಿದ್ದಾರೆ.

ತಮ್ಮ ಚಿತ್ರದ ಬಗ್ಗೆ ಹೇಳುವ ನಿರ್ದೇಶಕ ಮಹೇಶ್‌ಕುಮಾರ್‌, ಸದ್ಯ ಲಾಕ್‌ಡೌನ್‌ ತೆರವಾಗಿದೆ. ಚಿತ್ರೀಕರಣಕ್ಕೆ ಅನುಮತಿ ಕೊಟ್ಟರೆ, ನಾವು ಶೂಟಿಂಗ್‌ಗೆ ಹೋಗುವ ತಯಾರಿ ಮಾಡಿಕೊಂಡಿದ್ದೇವೆ. ಇಷ್ಟೊತ್ತಿಗಾಗಲೇ ಚಿತ್ರೀಕರಣ ಮುಗಿಯಬೇಕಿತ್ತು. ಆದರೆ, ಲಾಕ್‌ಡೌನ್‌ ಘೋಷಣೆಯಾಯಿತು. ಆದಷ್ಟು ಬೇಗ  ಚಿತ್ರೀಕರಣ ಶುರುವಾದರೆ, ಒಂದೇ ಹಂತದಲ್ಲಿ ಶೂಟಿಂಗ್‌ ಮುಗಿಸಿ, ಎಲ್ಲಾಕೆಲಸಗಳನ್ನು ಮಾಡಿಕೊಂಡು ಡಿಸೆಂಬರ್‌ 25 ರಂದು ಬಿಡುಗಡೆ ಮಾಡುವ ಯೋಚನೆ ಮಾಡಲಾಗಿದೆ.ಆದರೆ, ಅದಕ್ಕೆ ಪೂರಕವಾಗಿ, ಈಗ ಚಿತ್ರೀಕರಣಕ್ಕೆ ಅನುಮತಿ ಸಿಗಬೇಕಿದೆ ಎನ್ನುತ್ತಾರೆ ಮಹೇಶ್‌ ಕುಮಾರ್‌.

ಚಿತ್ರಕ್ಕೆ ನವೀನ್‌ಕುಮಾರ್‌ ಛಾಯಾಗ್ರಹಣವಿದೆ. ಹರೀಶ್‌ ಗೊಂಬೆ ಸಂಕಲನವಿದೆ. ಮೋಹನ್‌ ಬಿ.ಕೆ.ರೆ ಕಲಾ ನಿರ್ದೇಶನವಿದೆ. ಚಿತ್ರದಲ್ಲಿ ಶಿವರಾಜ್‌ ಕೆ.ಆರ್‌.ಪೇಟೆ, ಚಿಕ್ಕಣ್ಣ, ರಂಗಾಯಣ ರಘು ಜೊತೆ ಅನೇಕರು ನಟಿಸುತ್ತಿದ್ದಾರೆ.  ವಿಶೇಷವೆಂದರೆ, ಇದು ಪ್ಯಾನ್‌ ಇಂಡಿಯಾ ಸಿನಿಮಾ ಆಗಲಿದ್ದು, ಪರಭಾಷೆಯ ಖಳನಟರನ್ನು ಕರೆತರಲಾಗುತ್ತಿದೆ. ಹಾಗೆಯೇ ಅವರ ಅಮ್ಮನ  ಪಾತ್ರಕ್ಕೂ ಪರಭಾಷೆಯ ಕಲಾವಿದರೇ ಇರಲಿದ್ದಾರೆ ಎಂಬುದು ಚಿತ್ರತಂಡದ ಹೇಳಿಕೆ.

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.