ದಾರಿ ಮಧ್ಯೆ ಇಂಧನ ಖಾಲಿ : ಬೆಂಗಾವಲು ವಾಹನದಲ್ಲಿ ಸಂಚರಿಸಿದ ಉನ್ನತ ಶಿಕ್ಷಣ ಸಚಿವ
Team Udayavani, Feb 14, 2022, 3:13 PM IST
ಕಲಬುರಗಿ : ಎರಡು ದಿನಗಳ ಕಾಲ ಕಲಬುರಗಿ – ಯಾದಗಿರಿ ಜಿಲ್ಲೆಯ ಪ್ರವಾಸ ಕೈಗೊಂಡಿದ್ದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ವಿಮಾನ ನಿಲ್ದಾಣಕ್ಕೆ ಬರುವಾಗ ದಾರಿ ನಡುವೆ ವಾಹನದಲ್ಲಿ ಇಂಧನ ಖಾಲಿಯಾಗಿದ್ದರಿಂದ ಪೊಲೀಸ್ ಬೆಂಗಾವಲು ವಾಹನದಲ್ಲಿ ಸಂಚರಿಸಿ ವಿಮಾನ ಹತ್ತಿರುವ ಘಟನೆ ನಡೆದಿದೆ.
ಯಾದಗಿರಿಯಿಂದ ಶಹಾಪುರ-ಜೇವರ್ಗಿ ರಸ್ತೆ ಮಾರ್ಗವಾಗಿ ಕಲಬುರಗಿ ಆಗಮಿಸುತ್ತಿದ್ದಾಗ ಜೇವರ್ಗಿ ದಾಟಿ ಕಲಬುರಗಿಗೆ ಬರುವಾಗ ಸಚಿವರು ಸಂಚರಿಸುತ್ತಿದ್ದ ಕಾರಿನ ಇಂಧನ ಖಾಲಿಯಾಯಿತು. ಇದರ ಬೆನ್ನಲ್ಲೇ ಇವರ ಜತೆ ಮತ್ತೂಂದು ಕಾರಿನಲ್ಲಿ ಸಂಚರಿಸುತ್ತಿದ್ದ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರ ಕಾರು ಸಹ ಇಂಧನ ಖಾಲಿಯಾಗಿ ನಿಂತಿತು. ಹೀಗಾಗಿ ಸಚಿವರು ಅನಿವಾರ್ಯವಾಗಿ ಪೊಲೀಸ್ ಬೆಂಗಾವಲು ವಾಹನದಲ್ಲಿ ಹತ್ತಿ ವಿಮಾನ ನಿಲ್ದಾಣಕ್ಕೆ ಬಂದು ತಲುಪಿದರು. ಎರಡೂ ಕಾರಿನ ಇಂಧನ ಖಾಲಿಯಾಗಿದ್ದರಿಂದ ಪೊಲೀಸ್ ಬೆಂಗಾವಲಿನಲ್ಲಿ ಬಂದ ಕಾರಣ ಸಚಿವರು 20 ನಿಮಿಷ ತಡವಾಗಿ ತಲುಪಿದರು.
ಈ ನಡುವೆ ಕಲಬುರಗಿ ಸಂಸದ ಡಾ.ಉಮೇಶ ಜಾಧವ ವಿಮಾನಯಾನ ನಿರ್ವಾಹಕರೊಂದಿಗೆ ಚರ್ಚಿಸಿ ವಿಮಾನದಲ್ಲಿ ಸಚಿವರನ್ನು ಕರೆದು ಕೊಂಡು ಹೋಗುವಂತೆ ನೋಡಿಕೊಂಡರು. ವಿಮಾನ 20 ನಿಮಿಷ ಕಾಲ ವಿಳಂಬವಾಗಿರುವುದನ್ನು ವಿಮಾನ ನಿಲ್ದಾಣದ ಮೂಲಗಳು ಖಚಿತಪಡಿಸಿವೆ.
ಇದನ್ನೂ ಓದಿ : ಹಿಜಾಬ್ ವಿವಾದ: ಹೈಕೋರ್ಟ್ ನಲ್ಲಿ ವಿಚಾರಣೆ; ಆರ್ಟಿಕಲ್ 25 ಪ್ರಸ್ತಾವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
Lok Sabha Election; ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು