Asia Cup Cricket: ಅಫ್ಘಾನ್‌ ಔಟ್‌; ಶ್ರೀಲಂಕಾ, ಬಾಂಗ್ಲಾ ಮುನ್ನಡೆ


Team Udayavani, Sep 5, 2023, 11:16 PM IST

afghanistan crick

ಲಾಹೋರ್‌: ಶ್ರೀಲಂಕಾ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ದಿಟ್ಟ ಹೋರಾಟ ನೀಡಿಯೂ 2 ರನ್‌ ಅಂತರದ ಸೋಲನುಭವಿಸಿದ ಅಫ್ಘಾನಿ ಸ್ಥಾನ ಏಷ್ಯಾ ಕಪ್‌ ಪಂದ್ಯಾವಳಿಯಿಂದ ಹೊರಬಿದ್ದಿದೆ. “ಬಿ’ ವಿಭಾಗದಿಂದ ಶ್ರೀಲಂಕಾ ಮತ್ತು ಬಾಂಗ್ಲಾದೇಶ ಸೂಪರ್‌-4 ಹಂತಕ್ಕೆ ಪ್ರವೇಶ ಪಡೆದಿವೆ.

ಮಂಗಳವಾರದ ಕೊನೆಯ ಲೀಗ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಶ್ರೀಲಂಕಾ 8 ವಿಕೆಟಿಗೆ 291 ರನ್‌ ಗಳಿಸಿದರೆ, ಅಮೋಘ ರೀತಿಯಲ್ಲಿ ಬೆನ್ನಟ್ಟಿಕೊಂಡು ಬಂದ ಅಫ್ಘಾನ್‌ ಪಡೆ 37.4 ಓವರ್‌ಗಳಲ್ಲಿ 289ಕ್ಕೆ ಆಲೌಟ್‌ ಆಯಿತು.

ಲಾಹೋರ್‌ ಟ್ರ್ಯಾಕ್‌ನಲ್ಲಿ ರನ್‌ ಸರಾಗವಾಗಿ ಹರಿದು ಬರುವ ಕಾರಣ ಟಾಸ್‌ ಗೆದ್ದ ಶ್ರೀಲಂಕಾ ಬ್ಯಾಟಿಂಗ್‌ ಆಯ್ದುಕೊಂಡಿತು. ಇದರಲ್ಲಿ ಯಶಸ್ಸನ್ನೂ ಕಂಡಿತು. ಆರಂಭಿಕರಾದ ಪಥುಮ್‌ ನಿಸ್ಸಂಕ (41) ಮತ್ತು ದಿಮುತ್‌ ಕರುಣಾರತ್ನೆ (32) 10.2 ಓವರ್‌ಗಳನ್ನು ನಿಭಾಯಿಸಿ 63 ರನ್‌ ಒಟ್ಟುಗೂಡಿಸಿದರು. ಆದರೆ ಸದೀರ ಸಮರವಿಕ್ರಮ (3) ಬೇಗನೇ ವಾಪಸಾದರು. 23 ರನ್‌ ಅಂತರದಲ್ಲಿ 3 ವಿಕೆಟ್‌ ಬಿತ್ತು.

ಈ ಹಂತದಲ್ಲಿ ಕುಸಲ್‌ ಮೆಂಡಿಸ್‌ (92) ಮತ್ತು ಚರಿತ ಅಸಲಂಕ (38) ಅಫ್ಘಾನ್‌ ದಾಳಿಗೆ ಸಡ್ಡು ಹೊಡೆದು ನಿಂತರು. 4ನೇ ವಿಕೆಟಿಗೆ 102 ರನ್‌ ಒಟ್ಟುಗೂಡಿಸಿ ಬೃಹತ್‌ ಮೊತ್ತದ ಸೂಚನೆಯಿತ್ತರು. 40ನೇ ಓವರ್‌ ತನಕ ಕ್ರೀಸ್‌ ಆಕ್ರಮಿಸಿಕೊಂಡ ಮೆಂಡಿಸ್‌ 84 ಎಸೆತ ನಿಭಾಯಿಸಿ ಸೊಗಸಾದ ಇನ್ನಿಂಗ್ಸ್‌ ಕಟ್ಟಿದರು (8 ಫೋರ್‌, 3 ಸಿಕ್ಸರ್‌). ಆದರೆ ಶತಕ ಸಮೀಪಿಸುವಾಗ ರನೌಟ್‌ ಸಂಕಟಕ್ಕೆ ಸಿಲುಕಿದರು.

40 ಓವರ್‌ ಅಂತ್ಯಕ್ಕೆ ಶ್ರೀಲಂಕಾ 7 ವಿಕೆಟಿಗೆ 226 ರನ್‌ ಗಳಿಸಿತ್ತು. ಆಗ ದುನಿತ್‌ ವೆಲ್ಲಲಗೆ (ಅಜೇಯ 33) ಮತ್ತು ಮಹೀಶ್‌ ತೀಕ್ಷಣ (28) ಸಿಡಿದು ನಿಂತರು. ಕೊನೆಯ 10 ಓವರ್‌ಗಳನ್ನು ದಿಟ್ಟ ರೀತಿಯಲ್ಲಿ ನಿಭಾಯಿಸಿದ ಈ ಜೋಡಿ 8ನೇ ವಿಕೆಟಿಗೆ 64 ಒಟ್ಟುಗೂಡಿಸಿತು.

ಅಫ್ಘಾನಿಸ್ಥಾನ ಪರ ಗುಲ್ಬದಿನ್‌ ನೈಬ್‌ 4, ರಶೀದ್‌ ಖಾನ್‌ 2 ವಿಕೆಟ್‌ ಉರುಳಿಸಿದರು.

ಸಂಕ್ಷಿಪ್ತ ಸ್ಕೋರ್‌
ಶ್ರೀಲಂಕಾ-8 ವಿಕೆಟಿಗೆ 291 (ಮೆಂಡಿಸ್‌ 92, ನಿಸ್ಸಂಕ 41, ಅಸಲಂಕ 36, ವೆಲ್ಲಲಗೆ ಔಟಾಗದೆ 33, ಕರುಣಾರತ್ನೆ 32, ತೀಕ್ಷಣ 28, ನೈಬ್‌ 60ಕ್ಕೆ 4, ರಶೀದ್‌ ಖಾನ್‌ 63ಕ್ಕೆ 2). ಅಫ್ಘಾನಿಸ್ಥಾನ-37.4 ಓವರ್‌ಗಳಲ್ಲಿ 289 (ನಬಿ 65, ಶಾಹಿದಿ 59, ರಜಿತ 79ಕ್ಕೆ 4, ಧನಂಜಯ 12ಕ್ಕೆ 2, ವೆಲ್ಲಲಗೆ 36ಕ್ಕೆ 2).

ಟಾಪ್ ನ್ಯೂಸ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.