ಏಶ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ: ಪಾಕಿಸ್ಥಾನವನ್ನು ಕೆಡವಿ ಕಂಚು ಗೆದ್ದ ಭಾರತ


Team Udayavani, Dec 23, 2021, 5:20 AM IST

ಏಶ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ: ಪಾಕಿಸ್ಥಾನವನ್ನು ಕೆಡವಿ ಕಂಚು ಗೆದ್ದ ಭಾರತ

ಢಾಕಾ: ಏಶ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ ಪಂದ್ಯಾವಳಿಯಲ್ಲಿ ಬದ್ಧ ಎದುರಾಳಿ ಪಾಕಿಸ್ಥಾನವನ್ನು 4-3 ಗೋಲುಗಳಿಂದ ಕೆಡವಿದ ಭಾರತ ಕಂಚಿನ ಪದಕ ಜಯಿಸಿದೆ. ಈ ಎರಡೂ ತಂಡಗಳು ಕಳೆದ ಸಲದ ಜಂಟಿ ಚಾಂಪಿಯನ್‌ಗಳಾಗಿದ್ದವು.

ಭಾರತ, ಪಾಕಿಸ್ಥಾನಗಳೆರಡೂ ಸೆಮಿಫೈನಲ್‌ನಲ್ಲಿ ಸೋತು ಬುಧವಾರ 3ನೇ ಸ್ಥಾನದ ಸ್ಪರ್ಧೆಗೆ ಇಳಿದಿದ್ದವು. ಪಂದ್ಯದ್ದುಕ್ಕೂ ಸಮಬಲದ ಹೋರಾಟ ಕಂಡುಬಂತು. ಪೆನಾಲ್ಟಿ ಕಾರ್ನರ್‌ಗಳ ಪ್ರವಾಹವೇ ಹರಿದು ಬಂತು. ಅದೃಷ್ಟ ಭಾರತದ ಕೋಟೆಯಲ್ಲಿ ಅವಿತಿತ್ತು. ಇದು ಈ ಕೂಟದಲ್ಲಿ ಪಾಕ್‌ ಎದುರು ಮನ್‌ಪ್ರೀತ್‌ ಸಿಂಗ್‌ ಪಡೆ ಸಾಧಿಸಿದ 2ನೇ ಗೆಲುವು. ಲೀಗ್‌ ಹಂತದಲ್ಲಿ ಭಾರತ 3-1 ಅಂತರದಿಂದ ಗೆದ್ದು ಬಂದಿತ್ತು.

ಮೊದಲ ನಿಮಿಷದಲ್ಲೇ ಗೋಲ್‌
ಭಾರತ ಮೊದಲ ನಿಮಿಷದಲ್ಲೇ ಗೋಲು ಬಾರಿಸಿ ಮುನ್ನಡೆ ಗಳಿಸಿತು. ಉಪನಾಯಕ ಹರ್ಮನ್‌ಪ್ರೀತ್‌ ಸಿಂಗ್‌ ಖಾತೆ ತೆರೆದರು. 10ನೇ ನಿಮಿಷದಲ್ಲಿ ಪಾಕಿಸ್ಥಾನ ಸಮಬಲ ಸಾಧಿಸುವಲ್ಲಿ ಯಶಸ್ವಿಯಾಯಿತು. ಅಫ್ರಾಜ್‌ ಅವರಿಂದ ಈ ಗೋಲು ದಾಖಲಾಯಿತು. ಅರ್ಧ ಹಾದಿ ಕ್ರಮಿಸುವಾಗ ಇತ್ತಂಡಗಳು 1-1 ಸಮಬಲದಲ್ಲಿದ್ದವು.

3ನೇ ಕ್ವಾರ್ಟರ್‌ನ 3ನೇ ನಿಮಿಷದಲ್ಲಿ ಅಬ್ದುಲ್‌ ರಾಣಾ ಸಿಡಿಸಿದ ಗೋಲಿನಿಂದ ಪಾಕಿಸ್ಥಾನ ಮುನ್ನಡೆ ಸಾಧಿಸಿತು. ಭಾರತ ಒತ್ತಡಕ್ಕೆ ಸಿಲುಕಿತು. ಈ ಹಂತ ಮುಗಿಯಲು ಕೆಲವೇ ಸೆಕೆಂಡ್‌ಗಳಿರುವಾಗ ಸುಮಿತ್‌ ಸಿಡಿಸಿದ ಗೋಲಿನಿಂದ ಪಂದ್ಯ ಮತ್ತೆ ಸಮಬಲಕ್ಕೆ ಬಂತು.

ಇದನ್ನೂ ಓದಿ:ಪ್ರೊ ಕಬಡ್ಡಿ: ಬುಲ್ಸ್‌ ಗೆ ತಿವಿದ ಯು ಮುಂಬಾ

ಅಂತಿಮ ಹಂತದ ಪೈಪೋಟಿ
ಅಂತಿಮ ಕ್ವಾರ್ಟರ್‌ನಲ್ಲಿ ಪೈಪೋಟಿ ತೀವ್ರ ಗೊಂಡಿತು. 53ನೇ ನಿಮಿಷದಲ್ಲಿ ವರುಣ್‌ ಕುಮಾರ್‌, 57ನೇ ನಿಮಿಷದಲ್ಲಿ ಆಕಾಶ್‌ದೀಪ್‌ ಸಿಂಗ್‌ ಸೇರಿಕೊಂಡು ಭಾರತಕ್ಕೆ 4-2 ಮುನ್ನಡೆ ಕೊಡಿಸುವಲ್ಲಿ ಯಶಸ್ವಿಯಾದರು.
ಮರು ಗಳಿಗೆಯಲ್ಲೇ ಪಾಕ್‌ ತಿರುಗಿ ಬಿತ್ತು. 57ನೇ ನಿಮಿಷದಲ್ಲೇ ಅಹ್ಮದ್‌ ನದೀಮ್‌ 3ನೇ ಗೋಲು ಬಾರಿಸಿದರು. ಉಳಿದ 3 ನಿಮಿಷಗಳನ್ನು ಎಚ್ಚರಿಕೆಯಿಂದ ಕಳೆದ ಭಾರತ ಕಂಚು ಗೆಲ್ಲುವಲ್ಲಿ ಯಶಸ್ವಿಯಾಯಿತು. ಕೊನೆಯ ಕೆಲವು ನಿಮಿಷಗಳಲ್ಲಿ ಭಾರತ ಹತ್ತೇ ಆಟಗಾರರೊಂದಿಗೆ ಹೋರಾಟ ಸಂಘಟಿಸಬೇಕಾಯಿತು. ಹಾರ್ದಿಕ್‌ ಸಿಂಗ್‌, ಸುಮಿತ್‌ ಅವರಿಗೆ ಹಳದಿ ಕಾರ್ಡ್‌ ನೀಡಲಾಗಿತ್ತು.

ದಕ್ಷಿಣ ಕೊರಿಯಾ ಚಾಂಪಿಯನ್‌
ಭಾರೀ ಪೈಪೋಟಿಯೊಡ್ಡಿದ ಜಪಾನ್‌ ತಂಡವನ್ನು ಶೂಟೌಟ್‌ನಲ್ಲಿ 4-2 ಗೋಲುಗಳಿಂದ ಮಣಿಸಿದ ದಕ್ಷಿಣ ಕೊರಿಯಾ ನೂತನ ಏಶ್ಯನ್‌ ಹಾಕಿ ಚಾಂಪಿಯನ್‌ ಎನಿಸಿತು. ನಿಗದಿತ ವೇಳೆಯಲ್ಲಿ ಇತ್ತಂಡಗಳು 3-3 ಸಮಬಲ ಸಾಧಿಸಿದ್ದವು.

ಭಾರತ, ಪಾಕಿಸ್ಥಾನ ಹೊರತುಪಡಿಸಿ 3ನೇ ತಂಡವೊಂದು ಇಲ್ಲಿ ಚಾಂಪಿಯನ್‌ ಆಗಿ ಮೂಡಿಬಂದ ಮೊದಲ ನಿದರ್ಶನ ಇದಾಗಿದೆ. ಕೊರಿಯಾ ಫೈನಲ್‌ ಪ್ರವೇಶಿಸಿದ್ದು ಕೂಡ ಇದೇ ಮೊದಲು. ಜಪಾನ್‌ 2013ರಲ್ಲಿ ಫೈನಲ್‌ ಪ್ರವೇಶಿಸಿ ಪಾಕಿಸ್ಥಾನಕ್ಕೆ ಶರಣಾಗಿತ್ತು.

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.