Police: ದಂಪತಿ ಮೇಲೆ ಹಲ್ಲೆ; ದೂರು
Team Udayavani, Nov 3, 2023, 12:17 AM IST
ಉಪ್ಪಿನಂಗಡಿ: ಪಡೆದುಕೊಂಡ ಹಣವನ್ನು ಹಿಂದಿರುಗಿಸಲು ವಿಳಂಬಿಸಿದ್ದಾರೆಂದು ರಸ್ತೆಯಲ್ಲಿ ನಡೆದುಕೊಡು ಹೋಗುತ್ತಿದ್ದ ಬಜತ್ತೂರು ಗ್ರಾಮದ ಮಹಿಳೆ ಮತ್ತು ಅವರ ಪತಿಯ ಮೇಲೆ ಗುಂಪೊಂದು ಹಲ್ಲೆ ಮಾಡಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ.
ಉಷಾ (30) ಮತ್ತು ಕೃಷ್ಣಪ್ಪ ಹಲ್ಲೆಗೊಳಗಾದವರು. ಸುರೇಶ, ಉಮೇಶ, ಗಿರೀಶ ಅವರು ಉಷಾ ಅವರ ಮೈ ಮೇಲೆ ಕೈ ಮಾಡಿ ಮಾನಭಂಗಕ್ಕೆ ಯತ್ನಿಸಿದ್ದಾರೆ. ರಕ್ಷಿಸಲು ಬಂದ ಪತಿ ಕೃಷ್ಣಪ್ಪ ಅವರ ಮೇಲೂ ಕೋಲಿನಿಂದ ಹೊಡೆದು ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ಗಾಯಗೊಂಡ ದಂಪತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.