ಕಲಾಪದಲ್ಲಿ ಸಮಯ, ಶಿಸ್ತು ಪಾಲನೆಯಾಗಲಿ

ವಿಧಾನಸಭೆಯಲ್ಲಿ ಪಕ್ಷಾತೀತವಾಗಿ ನಡೆದ ಗಂಭೀರ ಚರ್ಚೆ

Team Udayavani, Dec 23, 2021, 6:20 AM IST

ಕಲಾಪದಲ್ಲಿ ಸಮಯ, ಶಿಸ್ತು ಪಾಲನೆಯಾಗಲಿ

ಬೆಳಗಾವಿ: ಸಮಯ ಹಾಗೂ ಶಿಸ್ತುಪಾಲನೆ ಬಗ್ಗೆ ವಿಧಾನಸಭೆಯಲ್ಲಿ ಬುಧವಾರ ಗಂಭೀರ ಚರ್ಚೆ ನಡೆಯಿತು.

ಶೂನ್ಯವೇಳೆಯಲ್ಲಿ ಗಮನ ಸೆಳೆಯುವ ಸೂಚನೆ ಸಂದರ್ಭ ಪ್ರತಿಯೊಬ್ಬ ಸದಸ್ಯರು ಮಾತನಾಡಿ ಸದನದ ಸಮಯ ವ್ಯರ್ಥ ಆಗುತ್ತಿರುವ ಬಗ್ಗೆ ಮೂರೂ ಪಕ್ಷಗಳ ಹಿರಿಯ ಸದಸ್ಯರು ಪ್ರಸ್ತಾವಿಸಿ, ಸ್ಪೀಕರ್‌ ಹಾಗೂ ಸಂಸದೀಯ ವ್ಯವಹಾರಗಳ ಸಚಿವರು ಈ ಬಗ್ಗೆ ಗಮನ ಹರಿಸಿ ಪಕ್ಷಗಳ ಸದಸ್ಯರ ಸಂಖ್ಯೆ ಆಧಾರದಲ್ಲಿ ಚರ್ಚೆಗೆ ಇಂತಿಷ್ಟು ಸಮಯ ನಿಗದಿ ಮಾಡುವುದು ಸೂಕ್ತ ಎಂಬ ಸಲಹೆ ನೀಡಿದರು.

ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸದನಕ್ಕೆ ಇರುವ ಘನತೆ, ಗೌರವ ಹಾಗೂ ಜನರ ಅಪೇಕ್ಷೆ ಈಡೇರಿಸುವ ದೇಗುಲ ಎಂಬ ಭಾವನೆ ಎಲ್ಲರಲ್ಲೂ ಇದೆ. ಪವಿತ್ರ ಭಾವನೆ ಉಳಿಸಿಕೊಳ್ಳಬೇಕು. ರಾಜಕೀಯ ಪಕ್ಷಗಳು ಕೇವಲ ಬಿ ಫಾರಂ, ಟಿಕೆಟ್‌ ನೀಡುವುದು, ಗೆಲ್ಲಿಸುವುದು ಮಾತ್ರವಲ್ಲ. ಶಾಸಕರ ನಡವಳಿಕೆಯನ್ನು ನಿಯಂತ್ರಿಸಬೇಕು ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಕಲಾಪಕ್ಕೆ ಸಂಬಂಧಿಸಿದ ನಿಯಮದಂತೆ ನಡೆದುಕೊಂಡರೆ ಯಾವುದೇ ಸಮಸ್ಯೆಯಾಗುವುದಿಲ್ಲ. ಸಹಜವಾಗಿ ಹೆಚ್ಚಿನ ಸಮಯ ವಿಪಕ್ಷಕ್ಕೆ, ಅನಂತರ ಆಡಳಿತ ಪಕ್ಷದ ಸದಸ್ಯರಿಗೆ ನೀಡಬೇಕು. ಸದಸ್ಯರ ಸಂಖ್ಯೆ ಆಧಾರದ ಮೇಲೆ ಸಮಯದ ಹಂಚಿಕೆ ಆಗಬೇಕು. ಫ‌ಲಪ್ರದ ಚರ್ಚೆಯೂ ಹೆಚ್ಚಾಗಬೇಕು. ಕೆಲವೊಮ್ಮೆ ಸದನ ವಿಸ್ತರಿಸಬೇಕು ಎಂದವರೇ ಸದನದಲ್ಲಿ ಇರುವುದಿಲ್ಲ. ಇದು ಸರಿಯಲ್ಲ ಎಂದರು.

ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ಮಾತನಾಡಿ, ಒಂದು ದಿನವೂ ಪ್ರಮುಖವಾದ ಯಾವುದೇ ಚರ್ಚೆ ಸದನದಲ್ಲಿ ಬರುತ್ತದೆ ಎಂಬುದನ್ನು ನಿರೀಕ್ಷೆ ಮಾಡಲು ಸಾಧ್ಯವಾಗುತ್ತಿಲ್ಲ. ಸರಿಯಾಗಿ ಚರ್ಚೆ ಆಗದೇ ಇದ್ದರೆ ಈ ಮನೆ ಯಾಕೆ? ಸಭಾಧ್ಯಕ್ಷರು ಸ್ವಲ್ಪ ಬಿಗಿಯಾಗಬೇಕು ಎಂದರು.

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮಾತನಾಡಿ, ಮೌಲ್ಯಾಧಾರಿತ ಚರ್ಚೆಗೆ ನಾವು ಬೆಂಬಲ ಸೂಚಿಸಿದ್ದೇವೆ. ಸಮಯ ವ್ಯರ್ಥ ಆಗಬಾರದು ಎಂದರು.

ಸದಸ್ಯರಾದ ಎಚ್‌.ಡಿ.ರೇವಣ್ಣ, ಎ.ಟಿ.ರಾಮಸ್ವಾಮಿ, ರಾಮಲಿಂಗಾರೆಡ್ಡಿ, ಕೃಷ್ಣಬೈರೇಗೌಡ ಮಾತನಾಡಿದರು.

ಇದನ್ನೂ ಓದಿ:ಕುಂದಾಪುರ: ಕ್ರಿಸ್ಮಸ್‌ ಪ್ರಾರ್ಥನೆಗೆ ಶರತ್ತುಬದ್ಧ ಅನುಮತಿ

ನೀವು ಬಿಗಿ ನಿಲುವು ತಾಳಲೇಬೇಕು: ಬಿಎಸ್‌ವೈ
ಸಂಸದೀಯ ವ್ಯವಹಾರ ಸಚಿವ ಮತ್ತು ಅಧ್ಯಕ್ಷರು ಒಟ್ಟಾಗಿ, ಯಾರು ಯಾವ ವಿಷಯ ಎತ್ತುತ್ತಾರೆ ಮತ್ತು ಯಾವುದಕ್ಕೆ ಅವಕಾಶ ನೀಡಬೇಕು ಎಂಬುದರ ನಿರ್ಧಾರ ಮಾಡಬೇಕು. ಅದರ ಸಂಪೂರ್ಣ ಅಧಿಕಾರ ನಿಮಗೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸ್ಪೀಕರ್‌ಗೆ ಸಲಹೆ ನೀಡಿದರು. ಪ್ರಮುಖ ವಿಷಯಕ್ಕೆ ಅವಕಾಶ ನೀಡದೆ ಈ ಗೊಂದಲದ ವಾತಾವರಣಕ್ಕೆ ಕಾರಣ ಯಾರು? ನೀವು ಬಿಗಿಯಾದ ನಿಲುವು ತೆಗೆದುಕೊಳ್ಳದೇ ಇರುವುದು. ನಿಮ್ಮ ಬಿಗಿ ನಿಲುವು, ಕಾನೂನು ಚೌಕಟ್ಟಿನಲ್ಲಿ ಅಧಿವೇಶನ ನಡೆಯಬೇಕು. ಅದಕ್ಕೆ ನಾವೆಲ್ಲರೂ ಸಹಕಾರ ನೀಡುತ್ತೇವೆ. ಅನಗತ್ಯವಾಗಿ ಏಳೆಂಟು ಜನ ನಿಂತು ಮಾತಾಡುವುದನ್ನು ತಡೆಯಲು ನೀವು ಶಕ್ತಿ ಮೀರಿ ಪ್ರಯತ್ನ ಮಾಡುತ್ತಿದ್ದರೂ ಯಶಸ್ವಿಯಾಗುತ್ತಿಲ್ಲ. ನೀವು ಬಿಗಿ ನಿಲುವು ತಾಳಲೇ ಬೇಕು. ಇದು ಕೇವಲ ಉಪದೇಶ ಆಗದೇ ಜಾರಿಗೆ ಬರಬೇಕು. ಕಾನೂನು ಸಚಿವರು ಹಾಗೂ ನೀವು ಜಂಟಿಯಾಗಿ ಕೂತು ಚರ್ಚಿಸಬೇಕು ಎಂದು ಹೇಳಿದರು.

ಸದಸ್ಯರ ಹಾಜರಾತಿಯನ್ನು ಸಚೇತಕರು ಗಮನಿಸಬೇಕು. ಗಮನಸೆಳೆಯುವ ಸೂಚನೆ, ಶೂನ್ಯವೇಳೆ ಇತ್ಯಾದಿ ನಿಗದಿ ನಿಯಮಾವಳಿ ಓದಿ ಅರ್ಥ ಮಾಡಿಕೊಳ್ಳಬೇಕು. ವಾಸ್ತವವಾಗಿ ಸದನದಲ್ಲಿ ಅಪಮಾನ, ಮಾನಸಿಕ ಯಾತನೆಗೆ ಗುರಿಯಾಗುವುದು ಅಧ್ಯಕ್ಷಪೀಠ. ನಮ್ಮ ಸಮರ್ಥನೆ ಮಾಡಿಕೊಳ್ಳಲು ಯಾರೂ ಇರಲ್ಲ. ಮಾತಾಡದೇ ಇದ್ದರೆ ಸಭೆ ನಡೆಯದು.
-ರಮೇಶ್‌ ಕುಮಾರ್‌, ಮಾಜಿ ಸ್ಪೀಕರ್‌

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.