ಜ್ಯೋತಿಷ್ಯ ವಿಜ್ಞಾನವಾಗಿದ್ದು,ಅದನ್ನು ನಿಷೇಧಿಸುವುದಿಲ್ಲ: ಅಶೋಕ್
Team Udayavani, Jan 24, 2020, 7:24 PM IST
ಬೆಂಗಳೂರು: ಜ್ಯೋತಿಷ್ಯವು ವಿಜ್ಞಾನವಾಗಿರುವುದರಿಂದ ಅದನ್ನು ನಿಷೇಧಿಸುವುದಿಲ್ಲ. ಆದರೆ ಜ್ಯೋತಿಷ್ಯದ ಹೆಸರಿನಲ್ಲಿ ಮೋಸ, ಕಿರುಕುಳ ನೀಡಿದ ಬಗ್ಗೆ ನೊಂದವರು ದೂರು ನೀಡಿದರೆ ಪೊಲೀಸರು ಕಾನೂನು ಕ್ರಮ ಜರಗಿಸಲಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಹಿಂದಿನ ಕಾಂಗ್ರೆಸ್ ಸರಕಾರ ಜಾರಿಗೊಳಿಸಲು ಉದ್ದೇಶಿಸಿದ್ದ ಮೌಡ್ಯ ಪ್ರತಿಬಂಧಕ ಕಾಯ್ದೆಯನ್ನು ಕೆಲವು ಬದಲಾವಣೆಗಳೊಂದಿಗೆ ಸರಕಾರ ಜಾರಿಗೊಳಿಸಿದೆ. ಧರ್ಮದ ಹೆಸರಿನಲ್ಲಿ ನಡೆಯುವ ಎಲ್ಲ ರೀತಿಯ ಮೌಡ್ಯವನ್ನು ನಿಷೇಧಿಸಬೇಕು. ಹಿಂದಿನ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಧರ್ಮದ ವಿಷಯಗಳನ್ನು ಎಳೆದು ತಂದಿದ್ದರಿಂದ ವಿರೋಧಿಸಲಾಗಿತ್ತು. ಮಕ್ಕಳನ್ನು ಮುಳ್ಳಿನ ಮೇಲೆ ಮಲಗಿಸುವುದು, ಮೇಲಿನಿಂದ ಕೆಳಕ್ಕೆ ಎಸೆಯುವುದು ಸಹಿತ ಇತರ ಆಚರಣೆಗಳಿಗೆ ನನ್ನ ವಿರೋಧವಿದೆ ಎಂದು ಹೇಳಿದರು.
ಕಾಂಗ್ರೆಸ್, ಜೆಡಿಎಸ್ನವರಿಗೆ ಹೋಲಿಸಿದರೆ ಬಿಜೆಪಿಯವರು ಜ್ಯೋತಿಷ್ಯ ಕೇಳುವುದು ಕಡಿಮೆ. ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಮಧ್ಯಪ್ರದೇಶದಲ್ಲಿ ಹೋಮ ಮಾಡಿಸುತ್ತಿಲ್ಲವೇ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಯಾವಾಗಲೂ ಜ್ಯೋತಿಷ್ಯ ನಂಬುತ್ತಾರೆ. ನಾವು ಜ್ಯೋತಿಷ್ಯ ನಿಷೇಧಿಸಿದರೆ ಅವರಿಗೆ ಕಷ್ಟವಾಗುತ್ತದೆ. ಹಾಗಾಗಿ ಜ್ಯೋತಿಷ್ಯ ನಿಷೇಧಿಸುವುದಿಲ್ಲ ಎಂದು ಮಾರ್ಮಿಕವಾಗಿ ನುಡಿದರು.
ಜಿಲ್ಲಾಧಿಕಾರಿ ಸ್ಥಾನದ ಹೆಸರು ಬದಲಾವಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಆರ್.ಅಶೋಕ್, ಜಿಲ್ಲಾಧಿಕಾರಿಗಳನ್ನು ಕಲೆಕ್ಟರ್ ಎಂದು ಹಲವು ರಾಜ್ಯಗಳಲ್ಲಿ ಕರೆಯಲಾಗುತ್ತಿದೆ. ಹಾಗಾಗಿ ರಾಜ್ಯದಲ್ಲೂ ಜಿಲ್ಲಾಧಿಕಾರಿ ಹೆಸರಿನ ಬದಲಿಗೆ ಕಲೆಕ್ಟರ್ ಎಂದು ಬದಲಾಯಿಸಬೇಕು ಎಂದು ಕೆಲವು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ. ಇದರ ಸಾಧಕ-ಬಾಧಕ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಹಾಗೆಯೇ ಕಂದಾಯ ಇಲಾಖೆಯಲ್ಲಿ ಬಳಕೆಯಲ್ಲಿರುವ ಅನ್ಯ ಭಾಷೆಯ ಪದಗಳ ಬದಲಾಗಿ ಕನ್ನಡ ಪದಗಳ ಬಳಕೆಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಸಿಎಂ ಜತೆ ಚರ್ಚೆ
ನಿವೇಶನಗಳ ನೋಂದಣಿ ವೇಳೆ ಅಕ್ರಮ ತಡೆಗೆ “ಕಾವೇರಿ’ ತಂತ್ರಾಂಶ ಬಳಸಿಕೊಳ್ಳಲಾಗುತ್ತಿದೆ. ದಾಖಲೆಗಳು ಸರಿಯಾಗಿಲ್ಲದಿದ್ದರೆ ತಂತ್ರಾಂಶವು ನೋಂದಣಿಗೆ ಅವಕಾಶ ನೀಡುವುದಿಲ್ಲ. ಇದರಿಂದಾಗಿ ಭೂಪರಿವರ್ತನೆಯಾಗದ ಮತ್ತು ಸಕ್ಷಮ ಯೋಜನಾ ಪ್ರಾಧಿಕಾರದಿಂದ ಮಂಜೂರಾತಿ ಸಿಗದ ಕಂದಾಯ ನಿವೇಶನಗಳ ನೋಂದಣಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.
ಮುಖ್ಯಮಂತ್ರಿಗಳು ಶೀಘ್ರವೇ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿಗಳು ಈಗಾಗಲೇ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿದ್ದು, ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರೊಂದಿಗೂ ಮತ್ತೂಮ್ಮೆ ಚರ್ಚಿಸಿ ಅಂತಿಮಗೊಳಿಸಲಿದ್ದಾರೆ.
ಹೈಕಮಾಂಡ್ನಿಂದ ಸಂಪುಟ ವಿಸ್ತರಣೆಗೆ ಯಾವುದೇ ತಕರಾರು ಇಲ್ಲ. ಉಪ ಚುನಾವಣೆಯಲ್ಲಿ ಗೆದ್ದ ಅರ್ಹ ಶಾಸಕರಿಗೆ ಈ ಹಿಂದೆ ನೀಡಿದ್ದ ಭರವಸೆಯಂತೆ ನಡೆದುಕೊಳ್ಳಲಾಗುವುದು. ಇದರಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಸಂಪುಟ ವಿಸ್ತರಣೆ ವಿಳಂಬವಾಗುವುದಿಲ್ಲ ಎಂದು ಸಚಿವ ಆರ್.ಅಶೋಕ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ