ಕಾರ್ಕಳ: ಅತ್ತೂರು ಜಾತ್ರೆಗೆ ಚಾಲನೆ : ಮರಳಿದ ಜಾತ್ರೆ ವೈಭವ, 400 ಸಂತೆ ಮಾರುಕಟ್ಟೆ ಮಳಿಗೆ


Team Udayavani, Feb 21, 2022, 2:51 PM IST

ಕಾರ್ಕಳ: ಅತ್ತೂರು ಜಾತ್ರೆಗೆ ಚಾಲನೆ : ಮರಳಿದ ಜಾತ್ರೆ ವೈಭವ, 400 ಸಂತೆ ಮಾರುಕಟ್ಟೆ ಮಳಿಗೆ

ಕಾರ್ಕಳ : ಅತ್ತೂರು ಜಾತ್ರೆ ಆರಂಭಗೊಂಡರೆ ರಾತ್ರಿ ಆಗುವುದಿಲ್ಲ ಎಂದೇ ಪ್ರತೀತಿ. ವಾರ್ಷಿಕೋತ್ಸವ ದಿನಗಳಲ್ಲಿ ಹಗಲು ರಾತ್ರಿ ಎನ್ನದೆ ಜನ ಸಾಗರವೇ ಇಲ್ಲಿಗೆ ಹರಿದು ಬರುತ್ತದೆ. ಕಳೆದ ಎರಡು ವರ್ಷಗಳಿಂದ ಕೋವಿಡ್‌ ಕಾರಣಗಳಿಂದ ವಾರ್ಷಿಕೋತ್ಸವ ಸರಳವಾಗಿ ನಡೆದಿತ್ತು. ಈ ಬಾರಿ ಒಂದಷ್ಟು ವಿಜೃಂಭಣೆಗೆ ತೆರೆದುಕೊಳ್ಳುತ್ತಿದ್ದು, ಭಕ್ತರ ಆಗಮನ ಜತೆಗೆ ಸಂತೆಯೂ ಈ ಬಾರಿ ಸಂತೆಯೂ ಅಧಿಕ ಪ್ರಮಾಣದಲ್ಲಿದೆ.

ಅತ್ತೂರು ಸಂತ ಲಾರೆನ್ಸ್‌ ಬಸಿಲಿಕಾದ ಜಾತ್ರೆ ರವಿವಾರದಿಂದ ವಿಜೃಂಭಣೆಯಿಂದ ಆರಂಭಗೊಂಡಿದೆ. ಅತ್ತೂರು ಜಾತ್ರೆ ಎಂದ ಕೂಡಲೇ ಎಲ್ಲರ ಮನಸ್ಸಿನಲ್ಲಿ ಮೂಡುವ ಯೋಚನೆ ಈ ವರ್ಷ ಎಷ್ಟು ಸಂತೆ ಬಂದಿರಬಹುದು ಎಂಬುದೇ ಆಗಿದೆ. ತೊಟ್ಟಿಲಿನಿಂದ ಹಿಡಿದು ಆಟದ ಜೋಕಾಲಿ, ಮನೋರಂಜನೆ. ಜಾಯಿಂಟ್‌ವೀಲ್‌, ಮಕ್ಕಳು ಕುಳಿತು ತಿರುಗಾಡುವ ವಿವಿಧ ಆಟಿಕೆಗಳು, ಡ್ರೆಸ್‌ ಮೆಟೀರಿಯಲ್‌, ಮಣಿಸರಕಿನ ಸ್ಟಾಲ್‌ಗ‌ಳು, ಐಸ್‌ಕ್ರಿಂ, ಪಾನಿಪುರಿ, ಗೋಬಿ ಮಂಚೂರಿ ಸಹಿತ ವಿವಿಧ ತಿನಿಸುಗಳ ಸ್ಟಾಲ್‌ಗ‌ಳು ಈ ಬಾರಿ ಇವೆ. ವ್ಯಾಪಾರ ಮಾಡುವುದಕ್ಕೆ ಸಂತೆ ಮಾರುಕಟ್ಟೆಯಲ್ಲಿ 400 ಮಳಿಗೆಗಳು ತೆರೆದುಕೊಂಡಿವೆ. ಆರಂಭದ ದಿನದಿಂದಲೆ ಜನರು ಚರ್ಚ್‌ ಕಡೆ ಆಗಮಿಸುತ್ತಿದ್ದು, ಮಳಿಗೆಗಳ ಮುಂದೆಲ್ಲ ಜನ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುತ್ತಿದ್ದಾರೆ. ಮುಂದಿನ ನಾಲ್ಕೈದು ದಿನಗಳಲ್ಲಿ ಇನ್ನು ಹೆಚ್ಚುವ ಸಾಧ್ಯತೆಗಳಿವೆ. ಮರಳಿ ಹಿಂದಿನ ಸ್ಥಿತಿಗೆ ಅತ್ತೂರು ಜಾತ್ರೆ ಮರಳುವ ಲಕ್ಷಣ ಗೋಚರಿಸುತ್ತಿದೆ.

ಇದನ್ನೂ ಓದಿ : ಕೆ.ಎಸ್.ಈಶ್ವರಪ್ಪರನ್ನು ವಜಾಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

ಕೊರೊನಾದಿಂದ ಈ ಹಿಂದಿನ ಎರಡು ವರ್ಷ ಜಾತ್ರೆ ಸರಳವಾಗಿ ನಡೆದ ಕಾರಣ ಜಾತ್ರೆಯ ಸಂತೆ ವ್ಯಾಪಾರ ವಹಿವಾಟು ಮಳಿಗೆ ಇರಲಿಲ್ಲ. ಈ ಬಾರಿ ತಕ್ಕಮಟ್ಟಿಗೆ ಎಲ್ಲ ಬಗೆಯ ಸ್ಟಾಲ್‌ಗ‌ಳು ಜಾತ್ರೆ ಸಂತೆಯಲ್ಲಿದೆ. ಚರ್ಚ್‌ ಮುಂಭಾಗದ ರಸ್ತೆ ಬದಿ, ಎಡಬದಿಗೆ ವಿಶಾಲವಾದ ಸಂತೆ ಮಾರುಕಟ್ಟೆಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ದಕ್ಷಿಣ ಭಾರತದಲ್ಲೆ ಭಾವೈಕ್ಯದ ಅಗ್ರ ಧಾರ್ಮಿಕ ಕ್ಷೇತ್ರವಾದ ಸಂತ ಲಾರೆನ್ಸ್‌ ಚರ್ಚ್‌ ಝಗಮಗಿಸುವ ವಿದ್ಯುತ್‌ ದೀಪಗಳಿಂದ ಕಂಗೊಳಿಸುತ್ತಿದೆ.

ಟಾಪ್ ನ್ಯೂಸ್

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.