ಟಿ20: ವನಿತೆಯರಿಗೆ ಸೋಲು; ಆಸೀಸ್‌ 1-0 ಮುನ್ನಡೆ


Team Udayavani, Oct 10, 2021, 6:19 AM IST

ಟಿ20: ವನಿತೆಯರಿಗೆ ಸೋಲು

ಗೋಲ್ಡ್‌ ಕೋಸ್ಟ್‌: ಸಣ್ಣ ಮೊತ್ತದ ದ್ವಿತೀಯ ಟಿ20 ಪಂದ್ಯದಲ್ಲಿ ಭಾರತದ ವನಿತೆಯರು ಆತಿಥೇಯ ಆಸ್ಟ್ರೇಲಿಯಕ್ಕೆ 4 ವಿಕೆಟ್‌ಗಳಿಂದ ಶರಣಾಗಿದ್ದಾರೆ. ಇದರೊಂದಿಗೆ 3 ಪಂದ್ಯಗಳ ಸರಣಿಯಲ್ಲಿ ಆಸೀಸ್‌ 1-0 ಮುನ್ನಡೆ ಸಾಧಿಸಿದೆ. ಮೊದಲ ಪಂದ್ಯ ಮಳೆಯಿಂದ ರದ್ದುಗೊಂಡಿತ್ತು.

ಮೊದಲು ಬ್ಯಾಟಿಂಗ್‌ ನಡೆಸಿದ ಭಾರತ 9 ವಿಕೆಟಿಗೆ ಕೇವಲ 118 ರನ್‌ ಗಳಿಸಿದರೆ, ಆಸ್ಟ್ರೇಲಿಯ 19.1 ಓವರ್‌ಗಳಲ್ಲಿ 6 ವಿಕೆಟಿಗೆ 119 ರನ್‌ ಮಾಡಿ ಗುರಿ ಮುಟ್ಟಿತು.

ಅಗ್ರ ಕ್ರಮಾಂಕದ ತೀವ್ರ ಕುಸಿತದಿಂದಾಗಿ ಭಾರತಕ್ಕೆ ಸವಾಲಿನ ಮೊತ್ತ ಪೇರಿಸಲಾಗಲಿಲ್ಲ. ಮಂಧನಾ (1), ಶಫಾಲಿ ವರ್ಮ (3) ಮತ್ತು ಜೆಮಿಮಾ ರೋಡ್ರಿಗಸ್‌ (7) 24 ರನ್‌ ಆಗುವಷ್ಟರಲ್ಲಿ ವಾಪಸಾದರು.  ಲೆಮೆನಿಕ್‌ ಮೊದಲ ಓವರ್‌ನಲ್ಲೇ ಮಂಧನಾ ವಿಕೆಟ್‌ ಹಾರಿಸಿದರು. ತಮ್ಮ ಮುಂದಿನ ಓವರ್‌ನಲ್ಲಿ ಶಫಾಲಿಗೆ ಪೆವಿಲಿಯನ್‌ ಹಾದಿ ತೋರಿಸಿದರು.

81ಕ್ಕೆ ಕೌರ್‌ ಪಡೆಯ 9 ವಿಕೆಟ್‌ ಉರುಳಿತ್ತು. ಕೊನೆಯ ಹಂತದಲ್ಲಿ ಪೂಜಾ ಆಕ್ರಮಣಕಾರಿಯಾಗಿ ಬ್ಯಾಟ್‌ ಬೀಸಿದ್ದರಿಂದ ಮೊತ್ತ ನೂರರ ಗಡಿ ದಾಟಿತು. ಪೂಜಾ 26 ಎಸೆತಗಳಿಂದ ಅಜೇಯ 37 ರನ್‌ ಬಾರಿಸಿದರು (3 ಬೌಂಡರಿ, 2 ಸಿಕ್ಸರ್‌). ಕೌರ್‌ 28, ದೀಪ್ತಿ 16 ರನ್‌ ಮಾಡಿದರು.
ಚೇಸಿಂಗ್‌ ವೇಳೆ ಆಸೀಸ್‌ 71ಕ್ಕೆ 5 ವಿಕೆಟ್‌ ಉದುರಿಸಿ ಕೊಂಡಾಗ ಪಂದ್ಯಕ್ಕೆ ಮರಳುವ ಅವಕಾಶವೊಂದು ಭಾರತದ ಮುಂದಿತ್ತು. ರಾಜೇಶ್ವರಿ ಗಾಯಕ್ವಾಡ್‌ ಘಾತಕ ಸ್ಪೆಲ್‌ ನಡೆಸಿದ್ದರು. ಆದರೆ ಟಹ್ಲಿಯಾ ಮೆಗ್ರಾತ್‌ ಅಜೇಯ 42 ರನ್‌ (33 ಎಸೆತ, 6 ಬೌಂಡರಿ) ಬಾರಿಸಿ ಆಸ್ಟ್ರೇಲಿಯದ ಗೆಲುವನ್ನು ಸಾರಿದರು. ಅರ್ಹವಾಗಿ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು.

ಇದನ್ನೂ ಓದಿ:ಕಲ್ಲಿದ್ದಲು ಕೊರತೆ ನಿವಾರಿಸಲು ತಕ್ಷಣ ಕೇಂದ್ರ ಸ್ಪಂದನೆ : ಸುನಿಲ್‌ಕುಮಾರ್‌

ಸಂಕ್ಷಿಪ್ತ ಸ್ಕೋರ್‌: ಭಾರತ-9 ವಿಕೆಟಿಗೆ 118 (ಪೂಜಾ ಔಟಾಗದೆ 37, ಕೌರ್‌ 28, ದೀಪ್ತಿ 16, ಮೊಲಿನಾಕ್ಸ್‌ 11ಕ್ಕೆ 2, ಲೆಮೆನಿಕ್‌ 18ಕ್ಕೆ 2). ಆಸ್ಟ್ರೇಲಿಯ-19.1 ಓವರ್‌ಗಳಲ್ಲಿ 6 ವಿಕೆಟಿಗೆ 119 (ಮೆಗ್ರಾತ್‌ ಔಟಾಗದೆ 42, ಮೂನಿ 34, ಲ್ಯಾನಿಂಗ್‌ 15, ರಾಜೇಶ್ವರಿ 21ಕ್ಕೆ 3, ಕೌರ್‌ 9ಕ್ಕೆ 1). ಪಂದ್ಯಶ್ರೇಷ್ಠ: ಟಹ್ಲಿಯಾ ಮೆಗ್ರಾತ್‌.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.