Aus V/s NZ: ಕಿವೀಸ್‌ ವಿರುದ್ಧವೂ ಗೆಲುವಿನ ನಿರೀಕ್ಷೆಯಲ್ಲಿ ಆಸ್ಟ್ರೇಲಿಯ

ಜಯದ ಹಾದಿಗೆ ಮರಳಲು ನ್ಯೂಜಿಲ್ಯಾಂಡ್‌ ಕಾತರ

Team Udayavani, Oct 28, 2023, 12:50 AM IST

new aus

ಧರ್ಮಶಾಲಾ: ಪ್ರಶಸ್ತಿ ಗೆಲ್ಲುವ ಫೇವರಿಟ್‌ಗಳಲ್ಲಿ ಒಂದಾಗಿರುವ ಬಲಿಷ್ಠ ಆಸ್ಟ್ರೇಲಿಯ ತಂಡವು ವಿಶ್ವಕಪ್‌ ಕೂಟದ ಶನಿವಾರದ ಪಂದ್ಯದಲ್ಲಿ ತನ್ನ ಪ್ರತಿಸ್ಪರ್ಧಿ ನ್ಯೂಜಿಲ್ಯಾಂಡ್‌ ಸವಾಲನ್ನು ಎದುರಿಸಲು ಸಜ್ಜಾಗಿದೆ. ಬಹಳಷ್ಟು ಆತ್ಮವಿಶ್ವಾಸದಲ್ಲಿರುವ ಆಸ್ಟ್ರೇಲಿಯ ತಂಡವು ತಮ್ಮ ಗೆಲುವಿನ ಓಟವನ್ನು ಕಾಪಾಡಿಕೊಳ್ಳಲು ಮತ್ತು ವಿಶ್ವಕಪ್‌ನಲ್ಲಿ ನ್ಯೂಜಿಲ್ಯಾಂಡ್‌ ವಿರುದ್ಧ ತಮ್ಮ ದಾಖಲೆಯನ್ನು ಮತ್ತಷ್ಟು ವಿಸ್ತರಿಸುವ ಯೋಜನೆಯೊಂದಿಗೆ ಈ ಹೋರಾಟಕ್ಕೆ ಸಿದ್ಧವಾಗಿದೆ.

ಈ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯ ಕಳಪೆ ಯಾಗಿ ಆಟ ಆರಂಭಿಸಿದ್ದರೂ ಇದೀಗ ಸತತ ಮೂರು ಗೆಲುವಿನೊಂದಿಗೆ ಜಯದ ಹಾದಿಗೆ ಮರಳಿದ್ದು ಎದು ರಾಳಿಗೆ ಎಚ್ಚರಿಕೆಯ ಗಂಟೆ ಬಾರಿಸಿದೆ. ಆತಿಥೇಯ ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಸೋಲಿನ ಬಳಿಕ ಆಸ್ಟ್ರೇಲಿಯ ತಂಡವು ಸತತ ಮೂರು ಗೆಲುವಿನೊಂದಿಗೆ ತನ್ನ ಉತ್ಸಾಹವನ್ನು ಹೆಚ್ಚಿಸಿಕೊಂಡಿದೆ. ಅದರಲ್ಲಿಯೂ ನೆದರ್ಲೆಂಡ್ಸ್‌ ವಿರುದ್ಧ ದಾಖಲೆ 309 ರನ್ನುಗಳ ಅಮೋಘ ಗೆಲುವು ಕೂಡ ಸೇರಿಕೊಂಡಿದೆ.

ಐದು ಬಾರಿಯ ಚಾಂಪಿಯನ್‌ ಆಗಿರುವ ಆಸ್ಟ್ರೇಲಿಯ ತಂಡವು ಕೂಟದ ನಿರ್ಣಾಯಕ ಹಂತದ ವೇಳೆಗೆ ನಾಲ್ಕನೇ ಸ್ಥಾನದಲ್ಲಿದ್ದರೆ ನ್ಯೂಜಿಲ್ಯಾಂಡ್‌ ಮೂರನೇ ಸ್ಥಾನದಲ್ಲಿದೆ. ಶನಿವಾರದ ಮಹತ್ವದ ಪಂದ್ಯದಲ್ಲಿ ಗೆಲುವು ಸಾಧಿ ಸುವ ಮೂಲಕ ಅಂಕಪಟ್ಟಿಯಲ್ಲಿ ತನ್ನ ಸ್ಥಾನವನ್ನು ಬಲಪಡಿಸುವುದರ ಜತೆ ಅಗ್ರ ನಾಲ್ಕರೊಳಗಿನ ಸ್ಥಾನ ಉಳಿಸಿಕೊಳ್ಳಲು ಆಸ್ಟ್ರೇಲಿಯ ಪ್ರಯತ್ನಿಸಲಿದೆ.

ಆಸ್ಟ್ರೇಲಿಯ ಫೇವರಿಟ್‌
ಸದ್ಯದ ಸ್ಥಿತಿಯನ್ನು ನೋಡಿದರೆ ನ್ಯೂಜಿಲ್ಯಾಂಡ್‌ ಕೂಡ ಈ ಕೂಟದ ಬಲಿಷ್ಠ ತಂಡಗಳಲ್ಲಿ ಒಂದಾಗಿದೆ. ಆಡಿದ ಐದು ಪಂದ್ಯಗಳಲ್ಲಿ ಅದು ನಾಲ್ಕರಲ್ಲಿ ಜಯ ಸಾಧಿಸಿದ್ದರೆ ಭಾರತ ವಿರುದ್ಧ ಸೋಲನ್ನು ಕಂಡಿತ್ತು. ಆದರೆ ಆಸ್ಟ್ರೇಲಿಯ ವಿರುದ್ಧದ ದ್ವಿಪಕ್ಷೀಯ ಹೋರಾಟದಲ್ಲಿ ನ್ಯೂಜಿಲ್ಯಾಂಡಿನ ಸಾಧನೆ ಉತ್ತಮವಾಗಿಲ್ಲ. ಹೀಗಾಗಿ ಕಮಿನ್ಸ್‌ ಪಡೆ ಗೆಲ್ಲುವ ಫೇವರಿಟ್‌ ತಂಡವೆನಿಸಿದೆ.
ವಿಶ್ವಕಪ್‌ ಕೂಟಗಳಲ್ಲಿ ಉಭಯ ತಂಡಗಳು 11 ಬಾರಿ ಮುಖಾಮುಖೀ ಆಗಿದ್ದು ಎಂಟು ಬಾರಿ ಆಸ್ಟ್ರೇಲಿಯ ಜಯ ಸಾಧಿಸಿದ್ದರೆ ಮೂರು ಬಾರಿ ನ್ಯೂಜಿಲ್ಯಾಂಡ್‌ ಗೆಲುವಿನ ನಗು ಚೆಲ್ಲಿದೆ. ಇಷ್ಟರವರೆಗಿನ 141 ಏಕದಿನ ಪಂದ್ಯಗಳಲ್ಲಿ ಆಸ್ಟ್ರೇಲಿಯ 95 ಬಾರಿ ಜಯ ಸಾಧಿಸಿದ್ದರೆ ನ್ಯೂಜಿಲ್ಯಾಂಡ್‌ 39 ಬಾರಿ ಗೆಲುವು ಒಲಿಸಿಕೊಂಡಿದೆ. ಉಭಯ ತಂಡಗಳ ಬಲಾಬಲವನ್ನು ನೋಡಿದರೆ ಆಸ್ಟ್ರೇಲಿಯವೇ ಉತ್ತಮ ತಂಡವೆಂದು ಹೇಳಬಹುದು.

ಬ್ಯಾಟಿಂಗ್‌ ಬಲಿಷ್ಠ
ಆಸ್ಟ್ರೇಲಿಯದ ಬ್ಯಾಟಿಂಗ್‌ ಬಲಿಷ್ಠವಾಗಿದೆ. ಆರಂಭಿಕ ಡೇವಿಡ್‌ ವಾರ್ನರ್‌ ಎರಡು ಶತಕ ಸಹಿತ 332 ರನ್‌ ಪೇರಿಸಿದ್ದು ಅಗ್ರ ಆಟಗಾರರಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಗ್ಲೆನ್‌ ಮ್ಯಾಕ್ಸ್‌ವೆಲ್‌ ಅವರ ಅತೀವೇಗದ ಶತಕವೂ ಗಮನಿಸಬೇಕಾದ ವಿಷಯವಾಗಿದೆ. ಆದರೆ ಮಧ್ಯಮ ಕ್ರಮಾಂಕದಲ್ಲಿ ಸ್ಟೀವನ್‌ ಸ್ಮಿತ್‌, ಮಾರ್ನಸ್‌ ಲಬುಶೇನ್‌ ಅವರು ಸ್ಥಿರ ನಿರ್ವಹಣೆ ನೀಡಬೇಕಾದ ಅಗತ್ಯವಿದ್ದರೆ ಕ್ಯಾಮರೂನ್‌ ಗ್ರೀನ್‌ ಇನ್ನಷ್ಟೇ ಸಿಡಿಯಬೇಕಾಗಿದೆ.

ಆಸ್ಟ್ರೇಲಿಯದ ಬೌಲಿಂಗ್‌ ಪಡೆಯೂ ಉತ್ತಮವಾಗಿದೆ. ಮಿಚೆಲ್‌ ಸ್ಟಾರ್ಕ್‌, ಜೋಶ್‌ ಹೇಝಲ್‌ವುಡ್‌ ಮತ್ತು ನಾಯಕ ಕಮಿನ್ಸ್‌ ಉತ್ತಮ ನಿರ್ವಹಣೆ ನೀಡುತ್ತಿದ್ದರೂ ಸ್ಪಿನ್‌ ದಾಳಿಯಲ್ಲಿ ಆ್ಯಡಂ ಝಂಪ ಅವರ ನಿರ್ವಹಣೆಯಿಂದ ಆಸ್ಟ್ರೇಲಿಯ ಮೇಲುಗೈ ಸಾಧಿಸಲು ಯಶ ಸ್ವಿಯಾಗಿದೆ. ಇದರ ಜತೆ ಟ್ರ್ಯಾವಿಸ್‌ ಹೆಡ್‌ ತಂಡಕ್ಕೆ ಮರಳಿರುವುದು ಬೌಲಿಂಗ್‌ ಪಡೆಯನ್ನು ಇನ್ನಷ್ಟು ಬಲಪಡಿಸಿದೆ.

ನ್ಯೂಜಿಲ್ಯಾಂಡ್‌ ತಿರುಗೇಟು ಸಾಧ್ಯತೆ
ಗಾಯಗೊಂಡಿರುವ ಕೇನ್‌ ವಿಲಿ ಯಮ್ಸನ್‌ ಅವರ ಅನುಪಸ್ಥಿತಿಯಲ್ಲಿ ಟಾಮ್‌ ಲಾಥಂ ತಂಡವನ್ನು ಮುನ್ನ ಡೆಸಲಿದ್ದು ಗೆಲುವಿನ ಟ್ರ್ಯಾಕ್‌ಗೆ ಮರಳಲು ಪ್ರಯತ್ನಿಸಲಿದೆ. ಭಾರತ ವಿರುದ್ಧ ಸೋತು ಆಘಾತಗೊಂಡಿರುವ ನ್ಯೂಜಿಲ್ಯಾಂಡ್‌ ಈ ಪಂದ್ಯದಲ್ಲಿ ಗೆದ್ದು ಮುನ್ನಡೆಯಲು ಯೋಚಿಸುತ್ತಿದೆ. ಡೇವನ್‌ ಕಾನ್ವೇ, ಡ್ಯಾರಿಲ್‌ ಮಿಚೆಲ್‌, ರಚಿನ್‌ ರವೀಂದ್ರ ಅವರಿಂದ ಉತ್ತಮ ಬ್ಯಾಟಿಂಗ್‌ ನಿರ್ವಹಣೆ ನಿರೀಕ್ಷಿಸಲಾಗಿದೆ. ನ್ಯೂಜಿಲ್ಯಾಂಡಿನ ಬೌಲಿಂಗ್‌ ಬಲಿಷ್ಠವಾಗಿದೆ. ಸ್ಯಾಂಟ್ನರ್‌ ಸಹಿತ ವೇಗಿಗಳಾದ ಮ್ಯಾಟ್‌ ಹೆನ್ರಿ ಮತ್ತು ಲೂಕಿ ಫೆರ್ಗ್ಯುಸನ್‌ ಮತ್ತು ಟ್ರೆಂಟ್‌ ಬೌಲ್ಟ್ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಇದೊಂದು ಗರಿಷ್ಠ ವಿಕೆಟ್‌ ಪಡೆದಿರುವ ಆ್ಯಡಂ ಝಂಪ ಮತ್ತು ಸ್ಯಾಂಟ್ನರ್‌ ಅವರ ನಡುವಣ ಹೋರಾಟವೆಂದು ಬಣ್ಣಿಸಲಾಗಿದೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.