ಪಡುಬಿದ್ರಿ : ಸಾಲಬಾಧೆಯಿಂದ ಮನನೊಂದ ರಿಕ್ಷಾ ಚಾಲಕ ವಿಷ ಸೇವಿಸಿ ಆತ್ಮಹತ್ಯೆ
Team Udayavani, Oct 29, 2020, 6:32 PM IST
ಪಡುಬಿದ್ರಿ : ಸಾಲಬಾಧೆಯಿಂದ ಮನನೊಂದು ಪಡುಬಿದ್ರಿಯ ಮುರುಡಿ ಬ್ರಹ್ಮಸ್ಥಾನ ಬಳಿಯ ಬಾಡಿಗೆ ಮನೆ ನಿವಾಸಿ, ಆಟೋರಿಕ್ಷಾ ಚಾಲಕ ಎಂ. ಸತೀಶ್ ಪೂಜಾರಿ (58) ಅವರು ಗುರುವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ದಶಕಗಳ ಹಿಂದೆ ಬಸ್ ಚಾಲಕರಾಗಿದ್ದ ಅವರು ಅನಂತರ ಪಡುಬಿದ್ರಿಯಲ್ಲಿ ಆಟೋರಿಕ್ಷಾ ಚಾಲಕ ವೃತ್ತಿಯಲ್ಲಿ ತೊಡಗಿಕೊಂಡಿದ್ದರು. ಜೀವನ ನಿರ್ವಹಣೆಗಾಗಿ ಸ್ವಂತ ಆಟೋ ರಿಕ್ಷಾ ಹೊಂದಲು ಹಾಗೂ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ಈ ಹಿಂದೆ ವಿವಿಧೆಡೆ ಸಾಲ ಪಡೆದುಕೊಂಡಿದ್ದರು. ಕೊರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಸಮರ್ಪಕ ದುಡಿಮೆ ಇಲ್ಲದೆ ಸಾಲ ಮರುಪಾವತಿಸಲು ಸಮಸ್ಯೆ ಉಂಟಾಗಿತ್ತು. ಇದರಿಂದ ಮನನೊಂದು ಪಡುಬಿದ್ರಿಯ ಪೆಟ್ರೋಲ್ ಬಂಕ್ವೊಂದರ ಬಳಿ ಅ. 27ರಂದು ಅವರು ವಿಷ ಪದಾರ್ಥವನ್ನು ಸೇವಿಸಿದ್ದರು. ಬಳಿಕ ಈ ಬಗ್ಗೆ ಮತ್ತೋರ್ವ ಆಟೋ ಚಾಲಕನಿಗೆ ಮಾಹಿತಿಯನ್ನು ನೀಡಿದ್ದರು. ತತ್ಕ್ಷಣ ಅವರನ್ನು ಚಿಕಿತ್ಸೆಗಾಗಿ ಉಡುಪಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿತ್ತು.
ಅಲ್ಲಿನ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಅ. 29ರಂದು ಮೃತಪಟ್ಟಿದ್ದಾರೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ