ಆಟೊ ಚಾಲಕರು ಪರಿಹಾರಕ್ಕೆ ಬೆಂಗಳೂರಿಗೆ ಬರಬೇಕಿಲ್ಲ: ಸವದಿ
Team Udayavani, May 6, 2020, 8:54 PM IST
ಬೆಂಗಳೂರು: ರಾಜ್ಯ ಸರ್ಕಾರ ಆಟೊ ಚಾಲರಿಗೆ ನೀಡಿರುವ ಸಹಾಯಧನ ಪಡೆಯಲು ಯಾವ ಆಟೊ ಚಾಲಕರು ಬೆಂಗಳೂರಿಗೆ ಬರುವ ಅಗತ್ಯವಿಲ್ಲ. ಸರ್ಕಾರವೇ ಸೂಕ್ತ ಮಾರ್ಗಸೂಚಿ ರೂಪಿಸಿ ಚಾಲಕರಿಗೆ ಅವರ ನೆರವಿನ ಹಣ ತಲುಪಿಸಲಾಗುವುದು ಎಂದು ಸಾರಿಗೆ ಸಚಿವ ಹಾಗೂ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ರಾಜ್ಯದ 7 ಲಕ್ಷ 75 ಸಾವಿರ ಆಟೊ ಚಾಲಕರು ಕೋವಿಡ್ 19 ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿದ್ದರಿಂದ ರಾಜ್ಯ ಸರ್ಕಾರ ಪ್ರತಿಯೊಬ್ಬರಿಗೂ 5 ಸಾವಿರ ರೂ. ಪರಿಹಾರ ನೀಡಲು ತೀರ್ಮಾನಿಸಲಾಗಿದೆ. ಆದರೆ, ಅನೇಕ ಆಟೊ ಚಾಲಕರು ಅರ್ಜಿ ಸಲ್ಲಿಸಲು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಕೆಲವರು ಸಾರಿಗೆ ಇಲಾಖೆಗೆ ಅರ್ಜಿ ಬರೆಯುತ್ತಿದ್ದಾರೆ. ಯಾರೂ ಅನಗತ್ಯ ಹಣ ವ್ಯಯ ಮಾಡಿಕೊಳ್ಳಬಾರದು. ಸರ್ಕಾರ ಸೂಕ್ತ ಮಾರ್ಗಸೂಚಿ ರಚಿಸಿ ಹಣ ತಲುಪಿಸುತ್ತದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ