ಆಟೋ, ಟ್ಯಾಕ್ಸಿ, ಕ್ಯಾಬ್ ಚಾಲಕರಿಗೆ ನೆರವು ನೀಡಲು ಆಗ್ರಹ
Team Udayavani, Sep 10, 2020, 10:27 AM IST
ತುಮಕೂರು: ಕೋವಿಡ್-19ನಿಂದ ಬಹುತೇಕ ಆಟೋ ಟ್ಯಾಕ್ಸಿ, ಮ್ಯಾಕ್ಸಿಕ್ಯಾಬ್ ಚಾಲಕರು, ಮಾಲೀಕರು ತಮ್ಮ ಜೀವನ ನೆಡೆಸಲು ಕಷ್ಟಕರವಾಗಿ ಬೀದಿಗೆ ಬಿದ್ದಿದ್ದಾರೆ, ರಾಜ್ಯ ಸರ್ಕಾರ ತಕ್ಷಣ ಇವರ ನೆರವಿಗೆ ಧಾವಿಸಬೇಕು ಎಂದು ಕೌಶಲ್ಯ ಅಭಿವೃದ್ಧಿ
ನಿಗಮದ ಮಾಜಿ ಅಧ್ಯಕ್ಷ ಹಾಗೂ ವಕ್ತಾರ ಮುರಳೀಧರ ಹಾಲಪ್ಪ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
ಆಟೋ, ಟ್ಯಾಕ್ಸಿ ಮತ್ತು ಮ್ಯಾಕ್ಸಿಕ್ಯಾಬ್ ಚಾಲಕರು ಮತ್ತು ಮಾಲೀಕರ ಕುಂದುಕೊರತೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಬಗೆ ಹರಿಸಬೇಕೆಂದು ಒತ್ತಾಯಿಸಿ ಬುಧವಾರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದರು.
ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಆಗ್ರಹ: ರಾಜ್ಯ ಸರ್ಕಾರ ಚಾಲಕರಿಗೆ ಘೋಷಣೆ ಮಾಡಿರುವ 5000 ರೂ.ಗಳ ಪರಿಹಾರದಲ್ಲಿ ಕೇವಲ 1.20 ಲಕ್ಷ ಚಾಲಕರಿಗೆ ಮಾತ್ರ ಸಿಕ್ಕಿದ್ದು, ಇನ್ನೂ 1.30 ಲಕ್ಷ ಮಂದಿಗೆ ಪರಿಹಾರ ಸಿಗಬೇಕಿದೆ. ಶೀಘ್ರವಾಗಿ ಎಲ್ಲಾ ಚಾಲಕರ ಖಾತೆಗೆ ಸಹಾಯಧನ ಬರುವಂತೆ ಕ್ರಮ ಕೈಗೊಳ್ಳಬೇ ಕೆಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳನ್ನು ಒತ್ತಾಯಿಸಿದರು.
ಪರಿಹಾರ ಧನ ನೀಡಿ: ಈಗಾಗಲೇ ನೀಡಿರುವ ಭರವಸೆಯಂತೆ ಕರ್ನಾಟಕ ಪರ್ಮಿಟ್ 1 ಸೀಟಿಗೆ 300 ರೂ. ಕಡಿತಗೊಳಿಸಬೇಕು, ಆರ್ಟಿಒ ಕಚೇರಿಗಳಲ್ಲಿ ದಲ್ಲಾಳಿಗಳ ಹಾವಳಿಯನ್ನು ತಪ್ಪಿಸುವುದು, ರಾಜ್ಯದಲ್ಲಿ ಸುಮಾರು 7.50 ಲಕ್ಷ ಚಾಲಕರಿದ್ದು, ಅದರಲ್ಲಿ 2.50 ಲಕ್ಷ ಚಾಲಕರು ಮಾತ್ರ ಅರ್ಜಿ ಸಲ್ಲಿಸಿದ್ದಾರೆ. ಅದರಲ್ಲೂ ಕೂಡ ರಾಜ್ಯ ಸರ್ಕಾರ ಕೇವಲ 1.20 ಲಕ್ಷ ಚಾಲಕರಿಗೆ ಸಹಾಯಧನ
ನೀಡಿದ್ದು, ಇನ್ನೂ 1.30 ಲಕ್ಷ ಚಾಲಕರಿಗೆ ಸಹಾಯಧನ ಸಿಗಬೇಕಿದೆ. ಅವರಿಗೆ ಚಾಲನ ಪರವಾನಗಿಯಲ್ಲಿ ಸಮಸ್ಯೆಗಳಿದ್ದರೆ ಅಂತಹವರಿಗೆ ಶೀಘ್ರವಾಗಿ ಸಮಸ್ಯೆ ಬಗೆಹರಿಸಿ ಪರಿಹಾರಧನ ಸಿಗುವಂತೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಮನವಿ ಸ್ವೀಕರಿಸಿದ ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಜು ಮಾತನಾಡಿ, ನಿಮ್ಮ ಮನವಿಯನ್ನು ಮೇಲಧಿಕಾರಿಗಳಿಗೆ ಕಳುಹಿಸಿಕೊಟ್ಟು ಶೀಘ್ರ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು