ಆಟೋಮೊಬೈಲ್‌: ಉತ್ತೇಜನಗಳ ಕೊರತೆ


Team Udayavani, Feb 2, 2022, 5:30 AM IST

ಆಟೋಮೊಬೈಲ್‌: ಉತ್ತೇಜನಗಳ ಕೊರತೆ

ಕೇಂದ್ರ ಸರಕಾರದ ಈ ಬಾರಿ ಬಜೆಟ್‌ನಲ್ಲಿ ಆಟೋಮೊಬೈಲ್‌ ಕ್ಷೇತ್ರದ ಬಗ್ಗೆ ನಿರ್ಲಕ್ಷ್ಯ ತೋರಿದ್ದು, ಈ ಕ್ಷೇತ್ರವನ್ನು ಬಾಧಿಸಲಿದೆ. ಕೊರೊನೋತ್ತರ ಪರಿಸ್ಥಿತಿಯ ಕಾಲಘಟ್ಟದಲ್ಲಿ ಇದೀಗ ಚೇತರಿಕೆಯತ್ತ ಸಾಗುತ್ತಿರುವ ಹಂತದಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಕನಿಷ್ಠ ಕೆಲವು ಉತ್ತೇಜನ ಗಳನ್ನಾದರೂ ನೀಡಿದ್ದರೆ ಈ ಕ್ಷೇತ್ರಕ್ಕೆ ಒಂದಷ್ಟು ಲಾಭವಾಗುತ್ತಿತ್ತು.

ಎಲೆಕ್ಟ್ರಿಕಲ್‌ ವಾಹನ ಕ್ಷೇತ್ರಕ್ಕೆ ಪೂರಕವಾಗಿ ಉತ್ತೇಜನ ಯೋಜನೆ ಗಳನ್ನು ಘೋಷಿಸಲಾಗಿದೆ. ಈ ಕ್ಷೇತ್ರದ ಬೆಳವಣಿಗೆಗೆ ಇದು ಉತ್ತೇಜನ ದಾಯಕವಾಗಲಿದೆ. ಎಲೆಕ್ಟ್ರಿಕ್‌ ವಾಹನಗಳ ಬ್ಯಾಟರಿ ಬದಲಾವಣೆಗಳಿಗೆ ಹಾಗೂ ಚಾರ್ಚಿಂಗ್‌ ಪಾಯಿಂಟ್‌ಗಳ ಸ್ಥಾಪನೆಗೆ ಪೂರಕವಾಗಿ ಯೋಜನೆ ಗಳನ್ನು ಉಲ್ಲೇಖೀಸಲಾಗಿದೆ. ಇದು ಎಲೆಕ್ಟ್ರಿಕ್‌ ವಾಹನಗಳ ಖರೀದಿಗೆ ಪ್ರೋತ್ಸಾಹದಾಯಕವಾಗಿದೆ. ಪ್ರವರ್ಧಮಾನಕ್ಕೆ ಬರುತ್ತಿರುವ ಎಲೆಕ್ಟ್ರಿಕ್‌ ವಾಹನಗಳ ಕ್ಷೇತ್ರಕ್ಕೆ ವೇಗ ನೀಡುವ ಸಾಧ್ಯತೆಗಳಿವೆ.

ಆಟೋಮೊಬೈಲ್‌ ಪ್ರಸ್ತುತ ಅವಶ್ಯ ಕ್ಷೇತ್ರದಲ್ಲಿ ಬರುತ್ತದೆ. ಆರ್ಥಿಕ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಒಂದು ಪ್ರಮುಖ ಕ್ಷೇತ್ರ. ವಿವಿಧ ರೂಪದಲ್ಲಿ ದೇಶದ ಆರ್ಥಿಕತೆ ಮಹತ್ವದ ಕೊಡುಗೆಯನ್ನು ನೀಡುತ್ತಿದೆ. ಅದುದರಿಂದ ಇದನ್ನು ಆದ್ಯತೆಯ ಕ್ಷೇತ್ರವಾಗಿ ಪರಿಗಣಿಸುವುದು ಅವಶ್ಯವಾಗಿತ್ತು. ವಾಹನ ಸಾಲಗಳ ಮೇಲೆ ಕೆಲವು ರಿಯಾತಿಗಳ ಘೋಷಣೆ, ಜಿಎಸ್‌ಟಿಯಲ್ಲಿ ಇಳಿಕೆ, ಬಿಡಿಭಾಗಗಳ ತೆರಿಗೆಯಲ್ಲಿ ಇಳಿಕೆ ಮುಂತಾದ ಕ್ರಮಗಳು ಆಟೋಮೊಬೈಲ್‌ ಕ್ಷೇತ್ರದ ಚೇತರಿಕೆಗೆ ಪೂರಕವಾಗುತ್ತಿತ್ತು. ಆದರೆ ಬಜೆಟ್‌ನಲ್ಲಿ ಎಲೆಕ್ಟ್ರಿಕ್‌ ವಾಹನಗಳ ಕ್ಷೇತ್ರಕ್ಕೆ ಸ್ವಲ್ಪ ಪ್ರಯೋಜನೆ ಗಳನ್ನು ನೀಡಿದ್ದು ಬಿಟ್ಟರೆ ಉಳಿದಂತೆ ಇಡೀ ಆಟೋಮೊಬೈಲ್‌ ಕ್ಷೇತ್ರವನ್ನು ಅವಗಣಿಸಿರುವುದು ಕಂಡುಬಂದಿದೆ. ಕನಿಷ್ಠ ಕೆಲವು ರಿಯಾಯತಿ, ಕೊಡುಗೆಗಳನ್ನು ನೀಡಿದ್ದರೆ ಕ್ಷೇತ್ರ ಮಾತ್ರವಲ್ಲದೆ ಆರ್ಥಿಕತೆಗೂ ಪೂರಕವಾಗುತ್ತಿತ್ತು.

ವಾಹನಗಳಿಗೆ ಡಿಪ್ರಿಸಿಯೇಶನ್‌ ದರ ಏರಿಕೆ ನಿರೀಕ್ಷೆ ಇಟ್ಟುಕೊಳ್ಳ ಲಾಗಿತ್ತು. ಏರಿಕೆ ಮಾಡಿದ್ದರೆ ವಾಹನಗಳ ಖರೀದಿಯಲ್ಲಿ ಹೆಚ್ಚಳವಾಗಿ ಮಾರಾಟದಲ್ಲಿ ಏರಿಕೆಯಾಗುತ್ತಿತ್ತು. ಇದರ ಬಗ್ಗೆ ಬಜೆಟ್‌ನಲ್ಲಿ ಯಾವುದೇ ಉಲ್ಲೇಖ ಮಾಡದಿರುವುದು ಆಟೋಮೊಬೈಲ್‌ ಕ್ಷೇತ್ರದ ಮೇಲೆ ಪರಿಣಾಮ ಬೀರಲಿದೆ. ಕೇಂದ್ರ ಸರಕಾರ ಈಗಾಗಲೇ ಗುಜರಿ ನೀತಿಯನ್ನು ಪ್ರಕಟಿಸಿದೆ. ಇದು ಪ್ರಥಮವಾಗಿ ಮೆಟ್ರೋ ನಗರಗಳಲ್ಲಿ ಅನುಷ್ಠಾನಕ್ಕೆ ಬಂದು ಬಳಿಕ ಸಣ್ಣ ನಗರಗಳಲ್ಲಿ ಜಾರಿಗೆ ಬರಲಿದೆ. ಗುಜರಿ ನೀತಿಯಲ್ಲಿ ಕೆಲವು ರಿಯಾಯಿತಿ ಅಂಶಗಳನ್ನು ಉಲ್ಲೇಖಿಸಲಾಗಿತ್ತು. ಆದರೆ ಹೊಸ ವಾಹನಗಳ ಖರೀದಿಗೆ ಹೆಚ್ಚುವರಿಯಾಗಿ ಒಂದಷ್ಟು ಉತ್ತೇಜನದಾಯಕ ಕ್ರಮಗಳನ್ನು ಘೋಷಿಸಿದ್ದರೆ ಆಟೋಮೊಬೈಲ್‌ ಕ್ಷೇತ್ರದ ಬೆಳವಣಿಗೆಗೆ ಪೂರಕವಾಗುತ್ತಿತ್ತು.

ವಾಣಿಜ ಕ್ಷೇತ್ರ,ಉದ್ದಿಮೆ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಕೆಲವು ಉತ್ತೇಜನಗಳು ಘೋಷಿಸಲಾಗಿದೆ. 100 ಪಿಎಂ ಗತಿಶಕ್ತಿ ಕಾರ್ಗೋ ಟರ್ಮಿನಲ್‌, ಡಿಜಟಲ್‌ ರುಪಿ, ಇ-ಪಾಸ್‌ಪೋರ್ಟ್‌, ಯುನಿಫೈಡ್‌ ಲಾಜಿಸ್ಟಿಕ್‌ ಇಂಟರ್‌ಫೇಸ್‌, ಡಿಜಟಲ್‌ ಯೂನಿವರ್ಸಿಟಿ ಮುಂತಾದ ಕ್ರಮಗಳು ಪ್ರೋತ್ಸಾಹದಾಯಕವಾಗಿವೆ. ತುರ್ತು ಕ್ರೆಡಿಟ್‌ ಲೈನ್‌ ಗ್ಯಾರಂಟಿ ಸ್ಕೀಮ್‌ ವಿಸ್ತರಣೆ ಸೇರಿದಂತೆ ಉದ್ಯಮ ಸ್ನೇಹಿ ಕ್ರಮಗಳು ಕ್ಷೇತ್ರದ ಬೆಳವಣಿಗೆಗೆ ಪೂರಕವಾಗಲಿವೆ. 25,000 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಯೋಜನೆಯಲ್ಲಿ ಮಂಗಳೂರು-ಬೆಂಗಳೂರು ಹೆದ್ದಾರಿಗೂ ಅನುದಾನ ಲಭ್ಯತೆ ಅಪೇಕ್ಷಣೀಯವಾಗಿದೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.