ನಂದಿಬೆಟ್ಟಕ್ಕೆ ನಿರ್ಬಂಧ; ಅವುಲಬೆಟ್ಟದತ್ತ ಪ್ರವಾಸಿಗರು
ಪ್ರಾಕೃತಿಕ ಸೌಂದರ್ಯ ಸವಿದು ವಾರಾಂತ್ಯ ಕಳೆದ ಪ್ರವಾಸಿಗರು; ಸ್ಥಳೀಯರಲ್ಲಿ ಕೋವಿಡ್ 3ನೇ ಅಲೆ ಭೀತಿ
Team Udayavani, Aug 9, 2021, 3:55 PM IST
ಗುಡಿಬಂಡೆ ತಾಲೂಕಿನ ಆವುಲಬೆಟ್ಟದ ಮೇಲೆ ಪ್ರವಾಸಿಗರ ದಂಡು.
ಗುಡಿಬಂಡೆ: ಜಿಲ್ಲೆಯ ಪ್ರಸಿದ್ಧ ಗಿರಿಧಾಮ ನಂದಿಬೆಟ್ಟಕ್ಕೆ ವಾರಾಂತ್ಯದಲ್ಲಿ ಪ್ರವಾಸಿಗರಿಗೆ ನಿರ್ಬಂಧ ಏರಿರುವುದರಿಂದ, ಹತ್ತಿರದ ಆವುಲಬೆಟ್ಟಕ್ಕೆ,
ಸುರಸದ್ಮಗಿರಿ ಬೆಟ್ಟ, ವಾಟದಹೊಸಹಳ್ಳಿ ಕೆರೆಗಳತ್ತ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಇದರಿಂದ ಸ್ಥಳೀಯರಲ್ಲಿ ಕೋವಿಡ್ 3ನೇ ಅಲೆಯ ಆತಂಕ ಎದುರಾಗಿದೆ.
ಕೋವಿಡ್ ಮೂರನೇ ಅಲೆ ಸೋಂಕು ಈಗಾಗಲೇ ನೆರೆಯ ರಾಜ್ಯಗಳಲ್ಲಿ ಕಾಣಿಸಿಕೊಂಡು ಕರ್ನಾಟಕಕ್ಕೂ ವಿಸ್ತರಿಸುತ್ತಿರುವ ಸಮಯದಲ್ಲೇ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಸ್ಥಳೀಯ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಾಗಿ ಪ್ರವಾಸಿ ತಾಣಗಳಿಗೆ ವಾರಾಂತ್ಯ ಭೇಟಿಗೆ ಪ್ರವಾಸಿಗರಿಗೆ ನಿರ್ಬಂಧ ಏರಿ ಆದೇಶ ಹೊರಡಿಸಿದ್ದಾರೆ.
ನಂದಿ ಬೆಟ್ಟಕ್ಕೆ ನಿರ್ಬಂಧ: ಅದರಂತೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ಅವರು ಕೋವಿಡ್ ಹೆಚ್ಚಾಗದಂತೆ ಸೂಕ್ತ ಕ್ರಮವಹಿಸುವ ನಿಟ್ಟಿನಲ್ಲಿ ಈಗಾಗಲೇ ಸ್ಥಳೀಯ ಸಂಸ್ಥೆ ಅಧಿಕಾರಿಗಳ ಜೊತೆ ಸಂವಾದ ನಡೆಸಿ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಹಾಗೆಯೇ ನಂದಿ ಬೆಟ್ಟಕ್ಕೆ ವಾರಾಂತ್ಯದಲ್ಲಿ ಪ್ರವಾಸಿಗರ ಭೇಟಿಗೆ ನಿರ್ಬಂಧ ಏರಿದ್ದಾರೆ.
ಇದನ್ನೂ ಓದಿ:ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ: ಶೇಕಡಾ 99.9 ವಿದ್ಯಾರ್ಥಿಗಳು ಪಾಸ್, ಓರ್ವ ಮಾತ್ರ ಫೇಲ್
ಅವುಲಬೆಟ್ಟಕ್ಕೆ ಭೇಟಿ: ಬೆಂಗಳೂರಿನಿಂದ ಕೂಗಳತೆಯ ದೂರದಲ್ಲಿರುವ ಜಿಲ್ಲೆಯ ನಂದಿಬೆಟ್ಟ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಆದರೆ,
ವಾರಾಂತ್ಯದಲ್ಲಿ ನಿರ್ಬಂಧ ಏರಿರುವ ವಿಷಯ ತಿಳಿಯದ ಪ್ರವಾಸಿಗರು ಅಲ್ಲಿಗೆ ಭಾನುವಾರ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿದ್ದಾರೆ. ನಿರ್ಬಂಧದ
ವಿಷಯ ತಿಳಿದ ನಂತರ ಬಂದ ದಾರಿಗೆ ಸುಂಕವಿಲ್ಲ ವೆಂಬಂತೆ ವಾಪಸ್ ಆಗುವುದು ಏಕೆ ಎಂದು, ನಂದಿ ಬೆಟ್ಟದ ಹತ್ತಿರುವ ಇರುವ ಅವುಲ
ಬೆಟ್ಟ, ಸುರಸದ್ಮಗಿರಿ ಮತ್ತು ವಾಟದ ಹೊಸಹಳ್ಳಿಯ ಕೆರೆಗೆ ನೂರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿ ಪ್ರಾಕೃತಿಕ ಸೌಂದರ್ಯ ಸವಿದು ಸಂಭ್ರಮಿಸಿದ್ದರು .
ಬೆಟ್ಟದ ಮೇಲಕ್ಕೆ ನಿರ್ಬಂಧ: ಅವುಲಬೆಟ್ಟಕ್ಕೆ ದಿನೇ ದಿನೆ ಪ್ರವಾಸಿಗರು ಹೆಚ್ಚಾಗುತ್ತಿದ್ದ ಕಾರಣ ಬೆಟ್ಟದ ಬುಡದಲ್ಲೇ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಿದ್ದು, ಬೆಟ್ಟದ ಮೇಲೆ ಹೋಗಲು ವಾಹನಗಳಿಗೆ ನಿರ್ಬಂಧ ಏರಲಾಗಿದೆ.
ದೇವಸ್ಥಾನಕ್ಕೂ ನಿರ್ಬಂಧ: ಅವುಲಬೆಟ್ಟದ ಮೇಲಿರುವ ನರಸಿಂಹ ದೇವರ ದೇವಸ್ಥಾನಕ್ಕೂ ಪ್ರವೇಶ ನಿಷೇಧಿಸಿದು, ಭಕ್ತರಿಗೆ ದೇವರ ದರ್ಶನಕ್ಕೆ ಪ್ರವೇಶವಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ