ಹಿಂದೂ, ಜೈನ ಗ್ರಂಥಾಧ್ಯಯನಕ್ಕೆ ಸಂಸ್ಕೃತ, ಪ್ರಾಕೃತದ ಅರಿವು ಅತ್ಯಗತ್ಯ: ಡಾ| ಶೆಣೈ
ಪೊಳಲಿ ಶೀನಪ್ಪ ಹೆಗ್ಡೆ, ಎಸ್.ಆರ್. ಹೆಗ್ಡೆ ಪ್ರಶಸ್ತಿ ಪ್ರದಾನ
Team Udayavani, Jan 2, 2022, 5:00 AM IST
ಉಡುಪಿ: ಹಿಂದೂ ಮತ್ತು ಜೈನ ಗ್ರಂಥಗಳ ಸಮಗ್ರ ಅಧ್ಯಯನಕ್ಕೆ ಸಂಸ್ಕೃತ ಮತ್ತು ಪ್ರಾಕೃತ ಭಾಷೆಯ ಜ್ಞಾನ ಅವಶ್ಯ ಎಂದು ಇತಿಹಾಸ ತಜ್ಞ ಡಾ| ವೈ. ಉಮಾನಾಥ ಶೆಣೈ ಅಭಿಪ್ರಾಯ ವ್ಯಕ್ತಪಡಿಸಿದರು.
ಅವರು ಎಂಜಿಎಂ ಕಾಲೇಜಿನಲ್ಲಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದಿಂದ 2021ನೇ ಸಾಲಿನ ಪೊಳಲಿ ಶೀನಪ್ಪ ಹೆಗ್ಡೆ ಮತ್ತು ಎಸ್.ಆರ್. ಹೆಗ್ಡೆ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.
ಹಿಂದೂ ಧರ್ಮದ ಅನೇಕ ಗ್ರಂಥಗಳು ಸಂಸ್ಕೃತದಲ್ಲಿ ಇರುವಂತೆ, ಜೈನ ಧರ್ಮದ ಗ್ರಂಥಗಳು ಪ್ರಾಕೃತ ಭಾಷೆಯಲ್ಲಿವೆ. ಹಾಗೆಯೇ ಬೌದ್ಧಧರ್ಮದ ಸಾಹಿತ್ಯಗಳು ಪಾಲಿ ಭಾಷೆಯಲ್ಲಿವೆ. ಸಂಸ್ಕೃತ ಹಾಗೂ ಪ್ರಾಕೃತ ಭಾಷೆಗೆ ಸಾಕಷ್ಟು ಸಾಮ್ಯವಿದೆ. ಈ ಎರಡೂ ಭಾಷೆ ಬಲ್ಲವರು ವಿದ್ವಾಂಸರಾಗಲು ಸಾಧ್ಯ ಎಂದರು.
ಹಿಂದೂ ಧರ್ಮದ ಪ್ರಮುಖ ಗ್ರಂಥಗಳಾದ ವೇದ, ಪುರಾಣ, ಉಪನಿಷತ್,ಷಡ್ದರ್ಶನಗಳ ಬಗ್ಗೆ ಬರೆಯುವ ಯೋಜನೆಯನ್ನು ಹಾಕಿಕೊಂಡಿದ್ದೇನೆ. ಎಲ್ಲ ಕಾರ್ಯಕ್ಕೂ ಆಸಕ್ತಿ ಮತ್ತು ಪರಿಶ್ರಮ ಅವಶ್ಯ. ಆಗ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದರು.
ನಿವೃತ್ತ ಪ್ರಾಧ್ಯಾಪಕಿ ಡಾ| ಮಾಲತಿ ಕೆ. ಮೂರ್ತಿ “ತುಳುನಾಡಿನ ಇತಿಹಾಸದ ಸಾಮಾಜಿಕ ಹಾಗೂ ಆರ್ಥಿಕ ಆಯಾಮಗಳು’ ಎಂಬ ವಿಷಯದ ಮೇಲೆ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಡಾ| ದೇವಿದಾಸ್ ಎಸ್. ನಾಯ್ಕ ತ್ತೈಮಾಸಿಕ ಪತ್ರಿಕೆ “ತುಳುವ’ ಬಿಡುಗಡೆ ಮಾಡಿದರು.
ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಸಂಸ್ಥೆಯ ಆಡಳಿತಾಧಿ ಕಾರಿ ಡಾ| ಬಿ. ಜಗದೀಶ್ ಶೆಟ್ಟಿ ಸ್ವಾಗತಿಸಿ ಪ್ರಶಸ್ತಿ ಸಮಿತಿಯ ಡಾ| ಇಂದಿರಾ ಹೆಗ್ಡೆ ಪ್ರಸ್ತಾವನೆಗೈದರು. ವಿದ್ಯಾರ್ಥಿನಿ ನವ್ಯಾಶ್ರೀ ಶೆಟ್ಟಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಅಪಘಾತ
MUST WATCH
ಹೊಸ ಸೇರ್ಪಡೆ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ