ಕೋವಿಡ್ ಗೆ ಆಯುರ್ವೇದವೇ ಮದ್ದು : ಡಾ| ಶಿವಮೂರ್ತಿ ಮುರುಘಾ ಶರಣ


Team Udayavani, Aug 13, 2020, 1:57 PM IST

muruga

ಹೊಳಲ್ಕೆರೆ: ಕೋವಿಡ್‌-19 ವೈರಸ್‌ನಂತಹ ಹಲವಾರು ಸೋಂಕುಗಳನ್ನು ಭಾರತೀಯ ಪರಂಪರಾಗತ ಪದ್ಧತಿಯಾದ ಆಯುರ್ವೇದ ಚಿಕಿತ್ಸೆಯಿಂದ ಶಮನ ಮಾಡಲು ಅವಕಾಶವಿದೆ ಎಂದು ಚಿತ್ರದುರ್ಗ ಮುರುಘಾ ಮಠದ ಡಾ| ಶಿವಮೂರ್ತಿ ಮುರುಘಾ ಶರಣರು ಹೇಳಿದರು.

ತಾಲೂಕಿನ ಮಲ್ಲಾಡಿಹಳ್ಳಿಯ ಶ್ರೀ ರಾಘವೇಂದ್ರ ಆಯುರ್ವೇದ ಕಾಲೇಜಿನ ವತಿಯಿಂದ ವೈರಸ್‌ ಡಿಸೀಜಸ್‌ ಮತ್ತು ಆಯುರ್ವೇದ ಮೇಲ್ವಿಚಾರಣೆ ಕುರಿತು ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಕಾರ್ಯಾಗಾರದ ಸಾನ್ನಿಧ್ಯ ವಹಿಸಿ ಶರಣರು ಮಾತನಾಡಿದರು.
ಆಯುರ್ವೇದ ಚಿಕಿತ್ಸೆ ಮೂಲಕ ಎಂತಹ ಕಾಯಿಲೆಗಳನ್ನು ಬೇಕಾದರೂ ನಿಯಂತ್ರಿಸಬಹುದು ಎಂಬುದನ್ನು ತಿರುಕ ನಾಮಾಂಕಿತ ಶ್ರೀ ರಾಘವೇಂದ್ರ ಸ್ವಾಮೀಜಿಯವರು ಈಗಾಗಲೇ ನಿರೂಪಿಸಿದ್ದಾರೆ. ಹಾಗಾಗಿ ಮಲ್ಲಾಡಿಹಳ್ಳಿಯಲ್ಲಿ ಆಯುರ್ವೇದ ಕಾಲೇಜು ಸ್ಥಾಪಿಸುವ ಮೂಲಕ ಜಗತ್ತಿಗೆ ಆಯುರ್ವೇದದ ಮಹತ್ವವನ್ನು ತೋರಿಸಿಕೊಟ್ಟಿದ್ದಾರೆ ಎಂದು ಬಣ್ಣಿಸಿದರು.

ಉಡುಪಿಯ ಶ್ರೀ ಧರ್ಮಸ್ಥಳ ಆಯುರ್ವೇದ ಕಾಲೇಜಿನ ನಿವೃತ್ತ ಅಧಿಧೀಕ್ಷಕ ಡಾ| ಮುರಳೀಧರ ಶರ್ಮ ಮಾತನಾಡಿ, ವೈರಲ್‌ ಡಿಸೀಜಸ್‌ಗಳನ್ನು ಎದುರಿಸಬೇಕಾದರೆ ನಾವು ಸೇವಿಸುವ ಆಹಾರ ಪದ್ಧತಿಯನ್ನು ನಾವು ಅರಿತಾಗ ಮಾತ್ರ ಸಾಧ್ಯ. ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳಬೇಕೆಂದರು.

ರಾಜ್ಯ ಮತ್ತು ದೇಶದ ಸುಮಾರು 2500ಕ್ಕೂ ಹೆಚ್ಚಿನ ಆಯುರ್ವೇದ ವೈದ್ಯಕೀಯ ವಿದ್ಯಾರ್ಥಿಗಳು ಆನ್‌ಲೈನ್‌ ಸಮಾವೇಶದಲ್ಲಿ
ಪಾಲ್ಗೊಂಡಿದ್ದರು. ಉತ್ತರಪ್ರದೇಶದ ವಾರಣಾಸಿ ಆಯುರ್ವೇದ ಕಾಲೇಜಿನ ಮುಖ್ಯಸ್ಥ ಡಾ| ಪಿ.ಎಸ್‌.ಬ್ಯಾಡಗಿ, ಅನಾಥಸೇವಾಶ್ರಮದ ಮೇಲ್ವಿಚಾರಕ ಡಾ| ಎಚ್‌.ಎಸ್‌. ಸಿದ್ರಾಮಸ್ವಾಮಿ, ಅ ಧೀಕ್ಷಕ ಡಾ| ಪವನ್‌ಕುಮಾರ್‌ ಕಂಬಾಳಿ ಮಠ್,
ಉಪಪ್ರಾಚಾರ್ಯ ಡಾ| ಕೆ.ವಿ.ರಾಜಶೇಖರ್‌, ಉಪನ್ಯಾಸಕರುಗಳಾದ ಡಾ| ನಿರಂಜನ ಪ್ರಭು, ಡಾ| ಉಷಾದೇವಕಿ, ಡಾ| ಜೋಸೆಫ್‌, ಡಾ| ರಾಧಿಕಾ, ಪ್ರಾಚಾರ್ಯ ಡಾ| ಎಸ್‌. ನಾಗರಾಜ್‌, ಡಾ| ರಾಮಚಂದ್ರ ಆಯುರ್ವೇದ ಕಾಲೇಜಿನ ಸಿಬ್ಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.