ಮಹಿಳೆಯರಿಗೆ ಆಯುಷ್ಮತಿ ಕ್ಲಿನಿಕ್‌: ಕರಾವಳಿಯಲ್ಲಿ 5 ಕಡೆ ಆರಂಭಿಸಲು ಸಿದ್ಧತೆ


Team Udayavani, Feb 6, 2023, 7:10 AM IST

ಮಹಿಳೆಯರಿಗೆ ಆಯುಷ್ಮತಿ ಕ್ಲಿನಿಕ್‌: ಕರಾವಳಿಯಲ್ಲಿ 5 ಕಡೆ ಆರಂಭಿಸಲು ಸಿದ್ಧತೆ

ಮಂಗಳೂರು: ಮಹಿಳೆಯರಿಗೆ ಪ್ರತ್ಯೇಕವಾದ, ಗುಣಮಟ್ಟದ ವೈದ್ಯಕೀಯ ಚಿಕಿತ್ಸೆ ಲಭಿಸಬೇಕೆಂಬ ಉದ್ದೇಶ ದಿಂದ ಆರೋಗ್ಯ ಇಲಾಖೆಯು ವಿವಿಧ ಜಿಲ್ಲೆಗಳಲ್ಲಿ ಸುಮಾರು 250 “ಆಯುಷ್ಮತಿ ಮಹಿಳಾ ಕ್ಲಿನಿಕ್‌’ ಗಳನ್ನು ಶೀಘ್ರ ಆರಂಭಿಸಲು ಉದ್ದೇಶಿಸಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂಥ ಒಟ್ಟು ಐದು ಕ್ಲಿನಿಕ್‌ಗಳು ಸ್ಥಾಪನೆ ಗೊಳ್ಳಲಿವೆ. ಇವುಗಳನ್ನು ಈಗಾಗಲೇ ಇರುವ ನಗರ ಆರೋಗ್ಯ ಕೇಂದ್ರಗಳಲ್ಲೇ ತೆರೆಯಲು ಆರೋಗ್ಯ ಇಲಾಖೆ ಉದ್ದೇಶಿಸಿದೆ. ಮಂಗಳೂರಿನ ಬಂದರು, ಪಡೀಲ್‌, ಸುರತ್ಕಲ್‌ ಮತ್ತು ಬಿಜೈಯಲ್ಲಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯುಷ್ಮತಿ ಕ್ಲಿನಿಕ್‌ಗಳು ಆರಂಭವಾಗಲಿವೆ.

ಉಡುಪಿ ಜಿಲ್ಲೆಯಲ್ಲಿ ಉಡುಪಿಯನಗರ ಪ್ರಾ. ಆ. ಕೇಂದ್ರದಲ್ಲಿ ಪ್ರಾರಂಭಿಸಲು ಸಿದ್ಧತೆ ನಡೆಸಲಾಗಿದೆ. ಹೆಸರು ಅಂತಿಮ ಪಡಿಸಿ ಸರಕಾರದಿಂದ ಅಧಿಕೃತ ಘೋಷಣೆಯಾದ ಬಳಿಕ ಉದ್ಘಾಟನೆ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಡಾಣ ನಾಗಭೂಷಣ ಉಡುಪ ತಿಳಿಸಿದ್ದಾರೆ.

ವೈದ್ಯರ ನೇಮಕಾತಿಗೆ ಸಂಬಂಧಿಸಿ ಮೆಡಿಕಲ್‌ ಕಾಲೇಜುಗಳ ಸಹಯೋಗ ಪಡೆದುಕೊಳ್ಳುವಂತೆ ತಿಳಿಸಲಾಗಿದೆ ಎನ್ನುತ್ತಾರೆ ಅಧಿಕಾರಿಗಳು.

ಯೋಜನೆಯ ಉದ್ದೇಶ
ಮಹಿಳೆಯರು ಕೆಲಸದ ಒತ್ತಡದ ನಡುವೆ ತಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಾರೆ. ಪರಿಣಾಮವಾಗಿ ರೋಗಗಳಿಗೆ ಚಿಕಿತ್ಸೆ ವಿಳಂಬವಾಗುತ್ತದೆ. ಇದರ ಬದಲಾಗಿ ಆರಂಭದಲ್ಲೇ ಅವರ ಸಮಸ್ಯೆ ಗುರುತಿಸಿ ಸೂಕ್ತ ಚಿಕಿತ್ಸೆ ಒದಗಿಸಲು “ಆಯುಷ್ಮತಿ ಕ್ಲಿನಿಕ್‌’ಗಳನ್ನು ಆರಂಭಿಸಲಾಗುತ್ತಿದೆ.

ಎಲ್ಲ ವೈದ್ಯಕೀಯ ಸೇವೆ
ಇದು ಮಹಿಳೆಯರಿಗೆ ಮೀಸಲಾದ ಕ್ಲಿನಿಕ್‌. ನುರಿತ ಸ್ತ್ರೀರೋಗ ತಜ್ಞರು ಮಹಿಳೆಯರ ಆರೋಗ್ಯಕ್ಕೆ ಸಂಬಂಧಿಸಿ ತಪಾಸಣೆ, ಚಿಕಿತ್ಸೆ ಹಾಗೂ ಆರೋಗ್ಯ ಸಲಹೆ ನೀಡಲಿದ್ದಾರೆ. ಎಲ್ಲ ವಯೋಮಾನದ ಮಹಿಳೆಯರಿಗೆ ಆರೋಗ್ಯ ಸೇವೆ ದೊರೆಯಲಿದೆ. ಮಹಿಳೆಯರಲ್ಲಿ ಹೆಚ್ಚಾಗಿ ಕಂಡುಬರುವ ಮುಟ್ಟಿನ ಸಮಸ್ಯೆ, ಮಧುಮೇಹ, ರಕ್ತದೊತ್ತಡ, ಬೊಜ್ಜು, ಸಂಧಿವಾತ ಮೊದಲಾದ ಸಮಸ್ಯೆಗಳಿಗೆ ಚಿಕಿತ್ಸೆಯೊಂದಿಗೆ ಎಲ್ಲ ವೈದ್ಯಕೀಯ ಸೇವೆಗಳು ಲಭಿಸಲಿವೆ.

ಗರ್ಭಿಣಿಯರಿಗೆ ಹೆರಿಗೆಯ ವರೆಗಿನ ಚಿಕಿತ್ಸೆ, ಬಾಣಂತಿಯರ ಆರೋಗ್ಯ ತಪಾಸಣೆ ಮತ್ತು ನವಜಾತ ಶಿಶುವಿನ ಸಮಗ್ರ ಆರೈಕೆಯ ಸಲಹೆಯೂ “ಆಯುಷ್ಮತಿ ಕ್ಲಿನಿಕ್‌’ಗಳಲ್ಲಿ ಸಿಗಲಿದೆ. ಇದರಿಂದ ಹೆರಿಗೆ ಸಂದರ್ಭದಲ್ಲಿ ತಾಯಿ ಶಿಶುವಿನ ಮರಣ ಪ್ರಮಾಣವನ್ನು ಮತ್ತಷ್ಟು ತಗ್ಗಿಸಬಹುದಾಗಿದೆ. ಗರ್ಭಿಣಿಯರ ನಿಯಮಿತ ಆರೋಗ್ಯ ತಪಾಸಣೆ, ಪೌಷ್ಟಿಕ ಆಹಾರ ಸೇವನೆ ಮತ್ತು ವೈಯಕ್ತಿಕ ಸ್ವತ್ಛತೆ ಕುರಿತು ಸಲಹೆ, ಉಚಿತ ಔಷಧಗಳೂ ದೊರೆಯಲಿದೆ.

ಮಂಗಳೂರಿನಲ್ಲಿ ಒಟ್ಟು ನಾಲ್ಕು ಮಹಿಳಾ ಕ್ಲಿನಿಕ್‌ಗಳು ಆರಂಭವಾಗಲಿವೆ. ಇದು ಮಹಿಳೆಯರಿಗೆ ಮೀಸಲಾಗಿರುವ ಕ್ಲಿನಿಕ್‌. ಸರಕಾರದ ಸೂಚನೆಯಂತೆ ನಗರದಲ್ಲಿರುವ ವಿವಿಧ ಮೆಡಿಕಲ್‌ ಕಾಲೇಜು ಆಸ್ಪತ್ರೆಗಳ ಸಹಯೋಗದಲ್ಲಿ ತಜ್ಞ ವೈದ್ಯರ ಸಹಕಾರದಲ್ಲಿ ಕ್ಲಿನಿಕ್‌ ನಡೆಸಲು ಉದ್ದೇಶಿಸಲಾಗಿದೆ.
– ಡಾ| ರಾಜೇಶ್‌, ದ.ಕ. ಜಿಲ್ಲಾ ಆರೋಗ್ಯಾಧಿಕಾರಿ (ಪ್ರಭಾರ)

-ಭರತ್‌ ಶೆಟ್ಟಿಗಾರ್‌

ಟಾಪ್ ನ್ಯೂಸ್

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.