ರಂಗು ರಂಗಿನ ಬೆಳಕಿನಲ್ಲಿ ಹೆಜ್ಜೆ ಹಾಕಿ ಮನಸೂರೆಗೊಂಡ ಪುಟಾಣಿ ಮಾಡೆಲ್ಸ್
Team Udayavani, Dec 6, 2021, 5:33 PM IST
ಬೆಂಗಳೂರು : ಯಶ್ ಇಂಟರ್ ನ್ಯಾಷನಲ್ ಫ್ಯಾಷನ್ ವೀಕ್ ನಲ್ಲಿ ಮಿಸ್ಟರ್, ಮಿಸ್, ಮಿಸೆಸ್ ಮಾಡೆಲ್ ಗಳ ನಡುವೆ ಪುಟಾಣಿ ಮಾಡೆಲ್ಸ್ ಮುದ್ದಾದ ರ್ಯಾಂಪ್ ವಾಕ್ ನಿಂದ ನೆರೆದಿದ್ದವರ ಕಣ್ಮನ ತಣಿಸಿದರು.
ನಗರದ ದಿ ಸಂಭ್ರಮ್ ರೂಕ್ ರೆಸಾರ್ಟ್ನಲ್ಲಿ ನಡೆದ ಮಿಸ್ಟರ್, ಮಿಸ್, ಮಿಸೆಸ್, ಲಿಟಲ್ ಪ್ರಿನ್ಸ್, ಪ್ರಿನ್ಸೆಸ್ ಇಂಟರ್ನ್ಯಾಷನಲ್ -2021 ಫೈನಲ್ ಆವೃತ್ತಿಯಲ್ಲಿ ಕಂಡುಬಂದ ದೃಶ್ಯವಿದು.
ಬಣ್ಣ ಬಣ್ಣದ ದೀಪಗಳಿಂದ ಅಲಂಕೃತಗೊಂಡಿದ್ದ ವೇದಿಕೆಯಲ್ಲಿ ಸಂಗೀತದ ಅಲೆಗೆ ತಕ್ಕಂತೆ ಎಲ್ಲಾ ಮಾಡೆಲ್ ಗಳು ಹೆಜ್ಜೆ ಹಾಕುವ ದೃಶ್ಯ ಜನರನ್ನು ಮಂತ್ರಮುಗ್ಧಗೊಳಿಸಿತು. ವೈವಿಧ್ಯಮಯ ವಸ್ತ್ರಗಳಲ್ಲಿ ಮುದ್ದು ಮುದ್ದಾಗಿ ಹೆಜ್ಜೆ ಇಡುತ್ತಾ ವೇದಿಗೆ ಬಂದ ಮಕ್ಕಳು ಸಂಗೀತದ ನಾದಕ್ಕೆ ತಕ್ಕಂತೆ ಬಳುಕುವ ಹೆಜ್ಜೆ ಹಾಕಿದರು.
ಮದುವೆಯಾದ ಮೇಲೆ ಫ್ಯಾಷನ್ ಲೋಕ ನಮಗಲ್ಲ ಎಂದು ತಿಳಿದ ಎಷ್ಟೋ ಹೆಣ್ಣುಮಕ್ಕಳಿಗೆ ಆತ್ಮವಿಶ್ವಾಸ ತುಂಬುವ ರೂಪದಲ್ಲಿ ವೇದಿಕೆ ಮೇಲೆ ಬಂದ ಮಹಿಳೆಯರು ಪ್ರೇಕ್ಷಕರ ಸಿಳ್ಳೆ, ಚಪ್ಪಾಳೆ ಗಿಟ್ಟಿಸಿಕೊಂಡರು. ದೆಹಲಿ, ಅಸ್ಸಾಂ, ಬಿಹಾರ, ತಮಿಳುನಾಡು, ಆಂಧ್ರಪ್ರದೇಶ.. ಹೀಗೆ ವಿವಿಧ ರಾಜ್ಯಗಳ ಸುಮಾರು 75ಕ್ಕೂ ಹೆಚ್ಚು ಸ್ಪರ್ಧಿಗಳು ರ್ಯಾಂಪ್ ವಾಕ್ ಮಾಡಿದರು.
ಕೊರೋನಾದಿಂದ ಮಂಕಾಗಿದಿದ್ದ ಫ್ಯಾಷನ್ ಲೋಕ ಮತ್ತೆ ಝಗಮಗಿಸಲು ಶುರುವಾಗಿದೆ. ಓಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವ ಆತಂಕದ ಮಧ್ಯೆಯೇ ಎಲ್ಲ ಸುರಕ್ಷತೆಗಳನ್ನು ಕೈಕೊಂಡು ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ. ಇಲ್ಲಿ ಬರುತ್ತಿರುವ ಎಲ್ಲಾ ಮಕ್ಕಳ ಪೋಷಕರು ಲಸಿಕೆ ಪಡೆದಿರುವ ಬಗ್ಗೆ ಖಾತ್ರಿ ಪಡಿಸಿಕೊಂಡಿದ್ದೇವೆ ಎನ್ನುತ್ತಾರೆ ಕಾರ್ಯಕ್ರಮ ಆಯೋಜಕರಾದ ಯಶ್.
ಇದನ್ನೂ ಓದಿ : ಒಮಿಕ್ರಾನ್ ಸೋಂಕಿತರ ಸಂಪರ್ಕಿತರಿಗೆ ಸೋಂಕು ಕಂಡುಬಂದಿಲ್ಲ; ಸಚಿವ ಡಾ.ಕೆ.ಸುಧಾಕರ್
ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟಿ ಹಾಗೂ ರೂಪದರ್ಶಿ ಶುಭ ರಕ್ಷಾ, ‘ಎಲ್ಲಾ ವರ್ಗದವರೂ ಭಾಗವಹಿಸುವಂತಹ ಅವಕಾಶ ಈ ಶೋ ನಲ್ಲಿ ನೀಡಲಾಗಿದೆ. ಮದುವೆಯಾದವರೂ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಈ ವೇದಿಕೆ ಸಹಾಯವಾಗಲಿದೆ. ಸಾಕಷ್ಟು ಜನರ ಬದುಕಿಗೆ ಭರವಸೆಯನ್ನು ಮೂಡಿಸಲಿದೆ’ ಎಂದು ಹೇಳಿದರು.
ವಿಜೇತರಾದವರಿಗೆ ಆಯೋಜಕ ಯಶ್ ಹಾಗೂ ಅತಿಥಿಗಳು ಕ್ರೌನ್ ತೊಡಿಸಿದರು. ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿ ಸಂತೋಷ್ ರೆಡ್ಡಿ, ಸೀಮಾ ಇದ್ದರು.
ವಿಜೇತರು
ಮಿಸ್ಟರ್ ಎಂಡ್ ಮಿಸ್ ಇಂಟರ್ನ್ಯಾಷನಲ್ ಕಿರೀಟ ಜೇಮ್ಸ್ ಪೌಲ್ ಹಾಗೂ ಎಸ್. ರೇಖಾ ಅವರಿಗೆ ಒಲಿದರೆ, ಮಿಸೆಸ್ ಇಂಟರ್ನ್ಯಾಷನಲ್ ಕಿರೀಟ ನೇಹಾ ಪಾಲಾಗಿದೆ. ಇನ್ನು ಲಿಟಲ್ ಪ್ರಿನ್ಸ್ ಎಂಡ್ ಪ್ರಿನ್ಸೆಸ್ ಇಂಟರ್ನ್ಯಾಷನಲ್ ವಿಭಾಗದಲ್ಲಿ 3 ರಿಂದ 6 ವರ್ಷದ ಮಕ್ಕಳ ವರ್ಗದಲ್ಲಿ ಜತಿನ್ ತೇಜ್ ಹಾಗೂ ಪ್ರಾಧ್ಯಾನ್ಯಗೆ ಕಿರೀಟ ಲಭಿಸಿದರೆ, 7 ರಿಂದ 12 ವರ್ಷದ ವರ್ಗದಲ್ಲಿ ಮೋಕ್ಷ್ ಹಾಗೂ ಮೋನಿಷಾ ಮುಡಿಗೇರಿದೆ ಕಿರೀಟ. ಮಿಸ್ ಟೀನ್ ಇಂಟರ್ನ್ಯಾಷನಲ್ ಕಿರೀಟ ಧಾತ್ರಿ ಅವರಿಗೆ ಒಲಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ