ಮತ್ತೆ ಮುನ್ನೆಲೆಗೆ ಬಂದ ‘ಆಪರೇಷನ್‌ ಕಮಲ’ ಚರ್ಚೆ


Team Udayavani, Jun 21, 2019, 5:19 AM IST

BJP-545

ಬೆಂಗಳೂರು: ಲೋಕಸಭಾ ಚುನಾವಣೆ ಫ‌ಲಿತಾಂಶ ಪ್ರಕಟವಾಗಿ ತಿಂಗಳು ಕಳೆಯುವ ಮುನ್ನವೇ ಮತ್ತೆ ಬಿಜೆಪಿ ‘ಆಪರೇಷನ್‌ ಕಮಲ’ ಪ್ರಯತ್ನ ನಡೆಸುತ್ತಿದೆ ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ.

ಸಂಸತ್‌ ಮಳೆಗಾಲದ ಅಧಿವೇಶನ ಮುಗಿಯತ್ತಿದ್ದಂತೆ ಅವಕಾಶ ಸಿಕ್ಕರೆ ಸರ್ಕಾರ ರಚನೆಗೆ ಪ್ರಯತ್ನ ನಡೆಸುವಂತೆ ವರಿಷ್ಠರಿಂದ ಸೂಚನೆ ಸಿಕ್ಕಿದೆ ಎನ್ನಲಾಗಿದೆ. ಹಾಗಾಗಿ ಆಡಳಿತ ಪಕ್ಷಗಳ ಅತೃಪ್ತ ಶಾಸಕರಿಗೆ ಗಾಳ ಹಾಕಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ತಮ್ಮ ಶಾಸಕರಿಗೆ 10 ಕೋಟಿ ರೂ. ಆಫ‌ರ್‌ ನೀಡುವ ಮೂಲಕ ‘ಆಪರೇಷನ್‌ ಕಮಲ’ ಮುಂದುವರಿದಿದೆ ಎಂಬುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಇತ್ತೀಚೆಗೆ ಹೇಳಿಕೆ ನೀಡಿರುವುದು, ಆಡಳಿತ ಪಕ್ಷಗಳ ನಾಯಕರು, ಮುಖಂಡರು ತಮ್ಮ ಪಕ್ಷದವರ ವಿರುದ್ಧವೇ ಆರೋಪ ಮಾಡುತ್ತಿರುವುದು ‘ಆಪರೇಷನ್‌ ಕಮಲ’ದ ಪ್ರಯತ್ನಕ್ಕೆ ಇನ್ನಷ್ಟು ಪುಷ್ಠಿ ನೀಡುವಂತಿವೆ.

ಲೋಕಸಭಾ ಚುನಾವಣೆ ಫ‌ಲಿತಾಂಶ ಪ್ರಕಟವಾಗಿ ತಿಂಗಳು ಕಳೆಯುವ ಮೊದಲೇ ಸೂಕ್ತ ಅವಕಾಶ ದೊರೆತರೆ ಸರ್ಕಾರ ರಚಿಸುವಂತೆ ಬಿಜೆಪಿ ವರಿಷ್ಠರು ರಾಜ್ಯ ಬಿಜೆಪಿ ನಾಯಕರಿಗೆ ಸೂಚಿಸಿದ್ದಾರೆ ಎಂಬ ಮಾತು ದಟ್ಟವಾಗಿದೆ. ಇದಕ್ಕೆ ಪೂರಕವಾಗಿ ಬಿಜೆಪಿಯ ಕೆಲ ನಾಯಕರು ಅತೃಪ್ತ ಶಾಸಕರ ಸಂಪರ್ಕದಲ್ಲಿರುವ ಮೂಲಕ ಸೆಳೆಯುವ ಪ್ರಯತ್ನ ಮುಂದುವರಿಸಿದ್ದಾರೆ ಎನ್ನಲಾಗಿದೆ.

ಜು. 5ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದ್ದು, ಸಂಸತ್‌ ಮಳೆಗಾಲದ ಅಧಿವೇಶನ ಮುಗಿಯುತ್ತಿದ್ದಂತೆ ರಾಜ್ಯ ಬಿಜೆಪಿಯಲ್ಲಿ ಚಟುವಟಿಕೆ ಬಿರುಸುಗೊಳ್ಳಲಿದೆ. ಈ ಚಟುವಟಿಕೆಗಳಲ್ಲಿ ಬಿಜೆಪಿ ವರಿಷ್ಠರು ನೇರವಾಗಿ ಭಾಗಿಯಾಗುವ ಸಾಧ್ಯತೆ ಕಡಿಮೆ. ಆದರೆ ಸರ್ಕಾರ ರಚನೆಗೆ ಪ್ರಯತ್ನ ನಡೆಸಿದರೆ ಯಾವುದೇ ಕಾರಣಕ್ಕೂ ವಿಫ‌ಲವಾಗಬಾರದು ಎಂಬ ಖಡಕ್‌ ಸಂದೇಶ ನೀಡಿದ್ದಾರೆ ಎಂಬ ಮಾತೂ ಇದೆ. ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಜೆ.ಪಿ.ನಡ್ಡಾ ನೇಮಕಗೊಂಡ ಬಳಿಕ ಸಂಘಟನೆ ಹಾಗೂ ಪಕ್ಷ ಬಲವರ್ಧನೆಗೆ ಒತ್ತು ನೀಡಲಾರಂಭಿಸಿದ್ದು, ಅದರ ಭಾಗವಾಗಿಯೇ ಮುಂದಿನ ಕೆಲ ಬೆಳವಣಿಗೆಗಳಾಗಲಿವೆ ಎಂದು ಮೂಲಗಳು ಹೇಳಿವೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕೆಲ ಕಾಂಗ್ರೆಸ್‌, ಜೆಡಿಎಸ್‌ ನಾಯಕರು, ಶಾಸಕರು ಬಿಜೆಪಿ ಗೆಲುವಿಗೆ ನೆರವಾಗಿದ್ದು, ಅವರ ಪೈಕಿ ಸಾರ್ವಜನಿಕವಾಗಿ ವರ್ಚಸ್ಸು ಹೊಂದಿರುವವರನ್ನು ಸೆಳೆಯುವ ಪ್ರಯತ್ನ ನಡೆದರೂ ಆಶ್ಚರ್ಯವಿಲ್ಲ. ಸೂಕ್ತ ಸಂದರ್ಭದ ನಿರೀಕ್ಷೆಯಲ್ಲಿ ಬಿಜೆಪಿ ನಾಯಕರು ಲೆಕ್ಕಾಚಾರ ನಡೆಸಿದ್ದಾರೆ ಎಂಬ ಮಾತು ಪಕ್ಷದಲ್ಲಿ ಕೇಳಿಬಂದಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.