ಹಿಂದುಳಿದ ಜಿಲ್ಲೆಗಳೇ ಲಸಿಕೆಯಲ್ಲಿ ಮುಂದು! ಉತ್ತರ ಕರ್ನಾಟಕದಲ್ಲಿ ಗುರಿ ಸಾಧನೆ ಹೆಚ್ಚು

ಕರಾವಳಿಯಲ್ಲಿ ಹಿನ್ನಡೆ

Team Udayavani, Jun 8, 2021, 7:00 AM IST

ಹಿಂದುಳಿದ ಜಿಲ್ಲೆಗಳೇ ಲಸಿಕೆಯಲ್ಲಿ ಮುಂದು! ಉತ್ತರ ಕರ್ನಾಟಕದಲ್ಲಿ ಗುರಿ ಸಾಧನೆ ಹೆಚ್ಚು

ಬೆಂಗಳೂರು : ರಾಜ್ಯದಲ್ಲಿ “ಹಿಂದುಳಿದ ಪ್ರದೇಶಗಳು’ ಎಂದು ಗುರುತಿಸಲ್ಪಡುವ ಭಾಗಗಳೇ ಕೊರೊನಾ ಲಸಿಕೆ ಅಭಿಯಾನದಲ್ಲಿ ಮುಂಚೂಣಿಯಲ್ಲಿವೆ. ಉತ್ತರ ಕರ್ನಾಟಕ ಭಾಗದ ಬಹುತೇಕ ಎಲ್ಲ ಜಿಲ್ಲೆಗಳು ಜನಸಂಖ್ಯಾವಾರು ಲಸಿಕೆ ಹಂಚಿಕೆ ಗುರಿ ಸಾಧನೆಯಲ್ಲಿ ಮುಂದಿದ್ದರೆ, ದಕ್ಷಿಣ ಕರ್ನಾಟಕದ ಜಿಲ್ಲೆಗಳು ಹಿಂದುಳಿದಿವೆ.

ಮೇಲ್ನೋಟಕ್ಕೆ ಬೆಂಗಳೂರು, ಮೈಸೂರು, ತುಮಕೂರಲ್ಲಿ ಲಸಿಕೆ ಪಡೆದ ಜನರ ಸಂಖ್ಯೆ ಹೆಚ್ಚಿರಬಹುದು. ಆದರೆ ಜಿಲ್ಲೆಗಳಲ್ಲಿ ಲಸಿಕೆ ಪಡೆಯಲು ಅರ್ಹರಾದ 18 ವರ್ಷ ಮೇಲ್ಪಟ್ಟವರ ಜನಸಂಖ್ಯೆಯಲ್ಲಿ ಶೇಕಡಾ ಎಷ್ಟು ಮಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ ಎಂಬುದರ ಆಧಾರದಲ್ಲಿ ಆ ಜಿಲ್ಲೆಯ ಗುರಿ ಸಾಧನೆಯನ್ನು ಪರಿಗಣಿಸಲಾಗುತ್ತದೆ. ಉದಾಹರಣೆಗೆ, ಹಾವೇರಿಯ ಜಿಲ್ಲೆಯಲ್ಲಿ ಲಸಿಕೆಗೆ ಅರ್ಹ 20 ಲಕ್ಷ ಜನರಲ್ಲಿ ಸದ್ಯ 1.7 ಲಕ್ಷ ಮಂದಿ ಲಸಿಕೆ ಪಡೆದಿದ್ದಾರೆ. ಆ ಜಿಲ್ಲೆಯ ಗುರಿಸಾಧನೆ ಶೇ. 8.3ರಷ್ಟಿದೆ.
ರಾಜ್ಯ ಕೊರೊನಾ ವಾರ್‌ ರೂಂ ಮಾಹಿತಿ ಪ್ರಕಾರ, ಉತ್ತರ ಕರ್ನಾಟಕದ 12 ಜಿಲ್ಲೆಗಳಲ್ಲಿ ಸರಾಸರಿ ಲಸಿಕೆ ಗುರಿ ಸಾಧನೆ ಶೇ. 6ರಷ್ಟಿದೆ. ಆದರೆ ದಕ್ಷಿಣ ಕರ್ನಾಟಕದ 15 ಜಿಲ್ಲೆಗಳಲ್ಲಿ ಸರಾಸರಿ ಶೇ. 3.5ರಷ್ಟಿದೆ. ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಇದು ಶೇ. 3.8ರಷ್ಟಿದೆ.

ಸೋಂಕು ಹೆಚ್ಚಳವೇ ಹಿನ್ನಡೆಗೆ ಕಾರಣ
ಸೋಂಕಿಗೆ ಒಳಗಾದವರಿಗೆ 3 ತಿಂಗಳ ಬಳಿಕ ಲಸಿಕೆ ಎಂಬ ನಿಯಮವಿದ್ದು, ಹಲವರು ಲಸಿಕೆಯಿಂದ ದೂರ ಉಳಿದಿದ್ದಾರೆ. ಸೋಂಕು ಹೆಚ್ಚಿರುವಾಗ ಜನದಟ್ಟಣೆ, ಸರತಿಯ ಸಹವಾಸವೇ ಬೇಡ ಎಂದೂ ಹಿಂದೇಟು ಹಾಕುತ್ತಿದ್ದಾರೆ. ಈ ಎಲ್ಲ ಕಾರಣಗಳಿಂದ ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಗುರಿಸಾಧನೆಗೆ ಹಿನ್ನಡೆಯಾಗಿದೆ. ಈ ಜಿಲ್ಲೆಗಳಲ್ಲಿ ಜನಸಂಖ್ಯೆ ಹೆಚ್ಚಿದ್ದು, ಹಂಚಿಕೆ ವ್ಯತ್ಯಯವಾಗಿರುವ ಸಾಧ್ಯತೆಗಳೂ ಇವೆ.

ಉತ್ತರ ಕರ್ನಾಟಕ ಯಾಕೆ ಮುಂದು?
– ಸೋಂಕು ಮತ್ತು ಲಸಿಕೆ ಕುರಿತು ಹೆಚ್ಚಿನ ಜನರಲ್ಲಿ ಹೆಚ್ಚಿನ ಜಾಗೃತಿ.
– ಸೋಂಕಿನ ತೀವ್ರತೆ ಕಡಿಮೆ ಇರುವ ಕಾರಣ ಭೀತಿಯಿಲ್ಲದೆ ಲಸಿಕೆ ಪಡೆಯುತ್ತಿರುವುದು.
– ವಿಶೇಷ ಅಭಿಯಾನಗಳನ್ನು ಕೈಗೊಳ್ಳುತ್ತಿರುವುದು.
– ಜನಸಂಖ್ಯೆ ಕಡಿಮೆ ಹಿನ್ನೆಲೆಯಲ್ಲಿ ವ್ಯವಸ್ಥಿತ ನಿರ್ವಹಣೆ.

ಕರಾವಳಿಯಲ್ಲೂ ಹಿನ್ನಡೆ
ಕರಾವಳಿ ಜಿಲ್ಲೆಗಳಲ್ಲಿಯೂ ಲಸಿಕೆ ಅಭಿಯಾನಕ್ಕೆ ಹಿನ್ನಡೆಯಾಗಿದೆ. ಗುರಿಸಾಧನೆಯಲ್ಲಿ ಬೆಂಗಳೂರು ನಗರ ಜಿಲ್ಲೆ ಬಿಟ್ಟರೆ ಉಡುಪಿ ಎರಡನೇ ಸ್ಥಾನದಲ್ಲಿದೆ. ಲಸಿಕೆಗೆ ಗುರುತಿಸಿರುವ ಜನಸಂಖ್ಯೆ ಪೈಕಿ ಉಡುಪಿಯಲ್ಲಿ ಶೇ. 3.2, ಉತ್ತರ ಕನ್ನಡದಲ್ಲಿ ಶೇ. 4.3, ದಕ್ಷಿಣ ಕನ್ನಡ ಶೇ. 4.1ರಷ್ಟು ಮಂದಿ ಮಾತ್ರ ಲಸಿಕೆ ಪಡೆದಿದ್ದಾರೆ.

– ಜಯಪ್ರಕಾಶ್ ಬಿರಾದರ್

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.