ಉಗ್ರ ಹೋರಾಟಕ್ಕೆ ಸಿದ್ಧಗೊಂಡ ಬೇಡ ಜಂಗಮ ಮಠಾಧೀಶರು, ಸಂಘಟನೆಗಳು


Team Udayavani, Jul 2, 2022, 7:11 PM IST

vidhana-soudha

ಬೆಂಗಳೂರು: ಬೇಡ ಜಂಗಮ ಸಂಘಟನೆಗಳ ಒಕ್ಕೂಟದ ಅಧ್ಯಕ್ಷರಾದ ಬಿಡಿ ಹಿರೇಮಠ ಅವರ ವಿರುದ್ಧ 20 ಶಾಸಕರು ದೂರನ್ನು ಕೊಟ್ಟಿದ್ದರ ಹಿನ್ನೆಲೆಯಲ್ಲಿ ಸಿಡಿದೆದ್ದಿದ್ದ ರಾಜ್ಯದಲ್ಲಿನ ಬೇಡ ಜಂಗಮರು, ನ್ಯಾಯಯುತ ಬೇಡಿಕೆಗಳಿಗಾಗಿ ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ ಜೂನ್ 30ರಂದು ಉಗ್ರ ಪ್ರತಿಭಟನೆ ಹಮ್ಮಿಕೊಂಡಿದ್ದರು.

ಇವರ ಹೋರಾಟವನ್ನು ಹತ್ತಿಕ್ಕಲು ರಾಜ್ಯ ಸರ್ಕಾರವು ಬೆಂಗಳೂರಿಗೆ ಆಗಮಿಸುತ್ತಿದ್ದ ಬಸ್ ಟ್ರಕ್ ಮತ್ತಿತರ ವಾಹನಗಳನ್ನು ವಿವಿಧ ಚೆಕ್ ಪೋಸ್ಟ್ ಗಳಲ್ಲಿ ತಡೆಯಲು ಪೊಲೀಸರಿಗೆ ಮೌಖಿಕ ನಿರ್ದೇಶನ ನೀಡಿತ್ತು. ಇದರಿಂದ ರೊಚ್ಚಿಗೆದ್ದ ಬೇಡ ಜಂಗಮರು ಆಯಾ ಸ್ಥಳದಲ್ಲಿಯೇ ಚೆಕ್ ಪೋಸ್ಟ್ ಗಳಲ್ಲಿ ರಸ್ತೆ ತಡೆ ಮಾಡಿ ಉಗ್ರ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದರು.

ಪ್ರತಿಭಟನಾ ಸ್ಥಳವಾದ ಫ್ರೀಡಂ ಪಾರ್ಕಿ ಗೆ ಮನವಿ ಸ್ವೀಕರಿಸಲು ಜೂನ್ 30ರಂದು ಆಗಮಿಸಿದ್ದ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಕೋಟಾ ಶ್ರೀನಿವಾಸ್ ಪೂಜಾರಿಯವರು ಉಪವಾಸ ಕುಳಿತಿದ್ದ ಮಠಾಧೀಶರನ್ನು ಉದ್ದೇಶಿಸಿ ಮಾತನಾಡಿ, ಚೆಕ್ ಪೋಸ್ಟ್ ಗಳಲ್ಲಿ ವಾಹನಗಳನ್ನು ತಡೆದಿರುವುದು ಸರಕಾರದ ಗಮನಕ್ಕೆ ಬಂದಿದ್ದು ಕ್ಷಮೆಯನ್ನು ಯಾಚಿಸಿದ್ದರು ಮತ್ತು ಬೇಡಗಂಗಮರಿಗೆ ಮಾತ್ರವಲ್ಲದೆ ಪರಿಶಿಷ್ಟ ಜಾತಿಯಲ್ಲಿನ ಎಲ್ಲ ಸಮುದಾಯದವರಿಗೆ ಅನ್ವಯವಾಗುವಂತಹ ಸಾಮಾನ್ಯ ಸುತ್ತೋಲೆ ಆದೇಶವನ್ನು ಜುಲೈ 1ರ ಸಂಜೆ ಒಳಗಾಗಿ ಹೊರಡಿಸುವುದಾಗಿ ಸರ್ಕಾರದ ಪರವಾಗಿ ವಾಗ್ದಾನ ಮಾಡಿದ್ದರು.

ಈ ಬಗ್ಗೆ ವಿಶ್ವಾಸ ಹೊಂದಿದ್ದ ಬೇಡ ಜಂಗಮರು ಆದೇಶ ಕೈ ಸೇರುವವರೆಗೂ ಹೋರಾಟವನ್ನು ಮುಂದುವರಿಸಿದ್ದರು. ಜುಲೈ 2ರ ಸಂಜೆವರೆಗೂ ಯಾವುದೇ ಸುತ್ತೋಲೆ, ಆದೇಶವು ಸರಕಾರದಿಂದ ಬಿಡುಗಡೆಯಾಗದಿದ್ದ ಕಾರಣ, ಮಾತು ತಪ್ಪಿದ ಸರಕಾರದ ವಿರುದ್ಧ ಹೋರಾಟವನ್ನು ತೀವ್ರಗೊಳಿಸಲು ಹಲವು ಮಠಾಧೀಶರು, ಒಕ್ಕೂಟದ ಅಧ್ಯಕ್ಷರು ಮತ್ತು ಬೇಡಜಂಗಮ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಸದಸ್ಯರು ಇಂದು ತುರ್ತು ಸಭೆಯನ್ನು ನಡೆಸಿ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ತೀವ್ರಗೊಳಿಸಲು ತೀರ್ಮಾನಿಸಿದ್ದಾರೆ.

ಸಭೆಯಲ್ಲಿ ಮಠಾಧೀಶರುಗಳಾದ ಚಳಗೇರಿ ವೀರಸಂಗಮೇಶ್ವರ ಶಿವಾಚಾರ್ಯ ಸ್ವಾಮೀಜಿ, ಕಲ್ಯಾಣ ಮಹಾಸ್ವಾಮಿಗಳು ಮತ್ತು ಒಕ್ಕೂಟದ ಅಧ್ಯಕ್ಷರಾದ ಬಿಡಿ ಹಿರೇಮಠ, ಜಿಎಂ ವಿಶ್ವನಾಥ ಸ್ವಾಮಿ, ಡಾ. ಎಂಪಿ ದಾರಕೇಶ್ವರಯ್ಯ, ವೀರಣ್ಣ ಹಿರೇಮಠ, ಎಂ ಮುದ್ದಯ್ಯ, ಸುಜಾತ ಮಠದ, ಹೇಮಲತಾ, ಪಂಕಜಾಕ್ಷಿ ಮುಂತಾದವರು ಹಾಜರಿದ್ದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.