Bagalkot Lok Sabha constituency;17ರಲ್ಲಿ 16 ಬಾರಿ ಇಲ್ಲಿ ಗೆದ್ದಿದ್ದು ಲಿಂಗಾಯತ ನಾಯಕರು

ಲಿಂಗಾಯತರು, ಅಹಿಂದ ಮತದಾರರೇ ನಿರ್ಣಾಯಕ: ವೀರೇಂದ್ರ ಪಾಟೀಲರನ್ನು ಲೋಕಸಭೆಗೆ,

Team Udayavani, Mar 12, 2024, 7:00 AM IST

Bagalkot Lok Sabha constituency; 17ರಲ್ಲಿ 16 ಬಾರಿ ಇಲ್ಲಿ ಗೆದ್ದಿದ್ದು ಲಿಂಗಾಯತ ನಾಯಕರು

ಬಾಗಲಕೋಟೆ: ಎಂಟು ವಿಧಾನಸಭೆ ಮತಕ್ಷೇತ್ರ ಹೊಂದಿರುವ ಬಾಗಲಕೋಟೆ ಲೋಕಸಭೆ ಕ್ಷೇತ್ರಕ್ಕೆ ತನ್ನದೇ ಆದ ವಿಶಿಷ್ಟ ಇತಿಹಾಸವಿದೆ. ಹಲವು ನಾಯಕರಿಗೆ ರಾಜಕೀಯ ಪುನರ್‌ ಜನ್ಮ ನೀಡಿದ ಖ್ಯಾತಿ ಈ ಜಿಲ್ಲೆಗಿದೆ.

ಸ್ವತಂತ್ರ ಭಾರತದ ಬಳಿಕ ದೇಶದಲ್ಲಿ 1951ರಿಂದ ಸಾರ್ವತ್ರಿಕ ಚುನಾವಣೆ ಆರಂಭಗೊಂಡಿತು. ಆ ವರ್ಷದ ಕೊನೆಗೆ ನಡೆದ ಚುನಾವಣೆಯಲ್ಲಿ ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದವರು ರಾಮಣ್ಣ ಬಿದರಿ. ಬಳಿಕ ನಡೆದ 1957ರ ಚುನಾವಣೆಯಲ್ಲೂ ಕಾಂಗ್ರೆಸ್‌ನಿಂದ 2ನೇ ಬಾರಿ ಅವರು ಗೆದ್ದಿದ್ದರು. ಇಲ್ಲಿಯವರೆಗೆ ಒಟ್ಟು 17 ಲೋಕಸಭೆ ಚುನಾವಣೆ ನಡೆದಿವೆ. 1962ರ ವರೆಗೆ ಬಾಗಲಕೋಟೆ ಕ್ಷೇತ್ರ ವಿಜಯಪುರ ದಕ್ಷಿಣ ಲೋಕಸಭೆ ಕ್ಷೇತ್ರವಾಗಿತ್ತು. 1967ರ ಚುನಾವಣೆಯಲ್ಲಿ ಬಾಗಲಕೋಟೆ ಪ್ರತ್ಯೇಕ ಲೋಕಸಭೆ ಕ್ಷೇತ್ರವಾಗಿದ್ದು, ಆಗ ಕಾಂಗ್ರೆಸ್‌ನ ಎಸ್‌.ಬಿ. ಪಾಟೀಲ ಗೆದ್ದಿದ್ದರು. 1962, 1967, 1971 ಹಾಗೂ 1977 ಸೇರಿ ಒಟ್ಟು ನಾಲ್ಕು ಬಾರಿ ಸತತ ಗೆದ್ದ ದಾಖಲೆ ಎಸ್‌.ಬಿ. ಪಾಟೀಲರಿಗಿದೆ. 2004ದಿಂದ ಈವರೆಗೆ ಬಿಜೆಪಿಯ ಪಿ.ಸಿ.ಗದ್ದಿಗೌಡರ ಇಲ್ಲಿಂದ ಸತತವಾಗಿ ಗೆಲ್ಲುತ್ತ ಬಂದಿದ್ದಾರೆ. ಇವರನ್ನು ಬಿಟ್ಟರೆ ಈ ಕ್ಷೇತ್ರದಿಂದ ಎರಡಕ್ಕಿಂತ ಹೆಚ್ಚು ಬಾರಿ ಯಾರೂ ಗೆದ್ದಿಲ್ಲ.

ಹೆಗಡೆ ಕೈ ಬಿಟ್ರಾ- ವೀರೇಂದ್ರ ಗೆಲ್ಲಿಸಿದರು
ಜಿಲ್ಲೆಯ ಮತದಾರರು ಮಾಜಿ ಮುಖ್ಯಮಂತ್ರಿಗಳಾದ ರಾಮಕೃಷ್ಣ ಹೆಗಡೆ ಅವರನ್ನು ಸೋಲಿಸಿ ಯುವ ಹೋರಾಟಗಾರರಾಗಿದ್ದ ದಿ| ಸಿದ್ದು ನ್ಯಾಮಗೌಡರನ್ನು ಗೆಲ್ಲಿಸಿದ್ದರು. ವೀರೇಂದ್ರ ಪಾಟೀಲರನ್ನು ಲೋಕಸಭೆಗೆ, ಹಾಲಿ ಸಿಎಂ ಸಿದ್ದರಾಮಯ್ಯ ಅವರನ್ನು ಬಾದಾಮಿ ವಿಧಾನಸಭೆ ಕ್ಷೇತ್ರದಿಂದ ಗೆಲ್ಲಿಸಿ ಅವರಿಗೆ ರಾಜಕೀಯ ಪುನರ್‌ ಜನ್ಮ ನೀಡಿದವರು ಈ ಜಿಲ್ಲೆಯ ಮತದಾರರು.

1991ರ ವರೆಗೆ ಸತತವಾಗಿ ಕಾಂಗ್ರೆಸ್‌ ಪಕ್ಷವೇ ಇಲ್ಲಿಂದ ಗೆದ್ದಿತ್ತು. ಮೊದಲ ಬಾರಿಗೆ ಕಾಂಗ್ರೆಸ್‌ ಭದ್ರಕೋಟೆ ಛಿದ್ರಗೊಳಿಸಿ ಅಹಿಂದ ಅಲೆಯಲ್ಲಿ ಗೆದ್ದವರು, ಬಾಗಲಕೋಟೆಯ ಹಾಲಿ ಶಾಸಕ ಎಚ್‌.ವೈ. ಮೇಟಿ. ಜನತಾ ದಳ ಸರಕಾರದಲ್ಲಿ ಅರಣ್ಯ ಸಚಿವರಾಗಿದ್ದಾಗಲೇ ಲೋಕಸಭೆಗೆ ಗೆದ್ದಿದ್ದರು. ಆ ಬಳಿಕ ಲೋಕಶಕ್ತಿ ಪಕ್ಷದ ಅಜಯಕುಮಾರ ಸರನಾಯಕ (ಬಿಜೆಪಿ-ಲೋಕಶಕ್ತಿ ಹೊಂದಾಣಿಕೆ), 1998ರಲ್ಲಿ ಗೆದ್ದಿದ್ದರು. ಒಟ್ಟು ಈವರೆಗೆ ನಡೆದ 17 ಚುನಾವಣೆಯಲ್ಲಿ 11 ಬಾರಿ ಕಾಂಗ್ರೆಸ್‌, ತಲಾ ಒಂದು ಬಾರಿ ಜನತಾ ದಳ ಮತ್ತು ಲೋಕಶಕ್ತಿ ಗೆದ್ದಿದ್ದರೆ, ಸತತ ನಾಲ್ಕು ಬಾರಿ ಬಿಜೆಪಿ ಗೆಲ್ಲುತ್ತ ಬಂದಿದೆ. ಕ್ಷೇತ್ರದಲ್ಲಿ ಅತಿ ಹೆಚ್ಚು ಬಾರಿ ಗೆದ್ದಿರುವುದು ಕಾಂಗ್ರೆಸ್‌. ರಾಮಣ್ಣ ಬಿದರಿಯಿಂದ ಹಿಡಿದು ಪ್ರಸ್ತುತ ಪಿ.ಸಿ. ಗದ್ದಿಗೌಡರವರೆಗೂ ಲಿಂಗಾಯತ ನಾಯಕರು ಇಲ್ಲಿ ಆಧಿಪತ್ಯ ಸಾಧಿಸಿದ್ದಾರೆ.

ಬಲಾಬಲ ಎಷ್ಟು?
ಕ್ಷೇತ್ರ ವ್ಯಾಪ್ತಿಯಲ್ಲಿ ಗದಗ ಜಿಲ್ಲೆಯ ನರಗುಂದ ಸಹಿತ ಒಟ್ಟು 8 ವಿಧಾನಸಭೆ ಮತಕ್ಷೇತ್ರಗಳಿವೆ. ಐದು ಕ್ಷೇತ್ರಗಳಲ್ಲಿ ಸದ್ಯ ಕಾಂಗ್ರೆಸ್‌ ಶಾಸಕರಿದ್ದರೆ, ಎರಡರಲ್ಲಿ ಬಿಜೆಪಿ ಶಾಸಕರಿದ್ದಾರೆ. ಕಳೆದ ಲೋಕಸಭೆ ಚುನಾವಣೆಗೆ ಹೋಲಿಸಿದರೆ ಆಗ 8 ವಿಧಾನಸಭೆ ಕ್ಷೇತ್ರಗಳಲ್ಲಿ ಆರರಲ್ಲಿ ಬಿಜೆಪಿ, ಎರಡರಲ್ಲಿ (ಜಮಖಂಡಿ ಮತ್ತು ಬಾದಾಮಿ) ಕಾಂಗ್ರೆಸ್‌ ಶಾಸಕರಿದ್ದರು.

ಲಿಂಗಾಯತ, ಮುಸ್ಲಿಂ ಹಾಗೂ ದಲಿತ ಮತದಾರರು ಹೆಚ್ಚಿದ್ದಾರೆ. ಹೀಗಾಗಿಯೇ ಕುರುಬ ಸಮಾಜದ ಎಚ್‌. ವೈ. ಮೇಟಿ ಒಮ್ಮೆ ಗೆದ್ದಿದ್ದು ಬಿಟ್ಟರೆ ಈವರೆಗೆ ಇಲ್ಲಿಂದ ಗೆದ್ದವರು ಲಿಂಗಾಯತ ನಾಯಕರೇ. ಅದೇ ಕಾರಣಕ್ಕೆ, ಎಲ್ಲ ರಾಜಕೀಯ ಪಕ್ಷಗಳು ಲಿಂಗಾಯತ ನಾಯಕರಿಗೆ ಟಿಕೆಟ್‌ ನೀಡುತ್ತಲೇ ಬಂದಿವೆ. ವಿಧಾನಸಭೆ ಚುನಾವಣೆಗಳು, ಉಪಜಾತಿಗಳ ಲೆಕ್ಕಾಚಾರದಲ್ಲಿ ನಡೆದರೆ, ಲೋಕಸಭೆ ಚುನಾವಣೆ ಲಿಂಗಾಯತ ವರ್ಸಸ್‌ ಅಹಿಂದ ಲೆಕ್ಕಾಚಾರದಲ್ಲಿ ನಡೆದಿವೆ. ಹಾಲಿ ಸಂಸದ ಪಿ.ಸಿ.ಗದ್ದಿಗೌಡರ ಇಲ್ಲಿ ಪ್ರಬಲವಾಗಿರುವ ಗಾಣಿಗ ಸಮಾಜಕ್ಕೆ ಸೇರಿದವರು.

– ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.