ಎಲ್ಲ ಒಕ್ಕೂಟಗಳಲ್ಲೂ ಹಾಲು ಖರೀದಿ : ಬಾಲಚಂದ್ರ ಜಾರಕಿಹೊಳಿ ಸೂಚನೆ
Team Udayavani, Apr 2, 2020, 7:49 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ರಾಜ್ಯದ ಹಾಲು ಉತ್ಪಾದಕರಿಂದ ಎಲ್ಲ 14 ಒಕ್ಕೂಟಗಳ ವ್ಯಾಪ್ತಿಯಲ್ಲಿ ದಿನಕ್ಕೆ ಎರಡು ಬಾರಿ ತಪ್ಪದೆ ಗುಣಮಟ್ಟದ ಹಾಲು ಖರೀದಿಸಬೇಕು ಎಂದು ಕರ್ನಾಟಕ ಹಾಲು ಒಕ್ಕೂಟದ (ಕೆಎಂಎಫ್) ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸೂಚಿಸಿದ್ದಾರೆ.
ಕೋವಿಡ್-19 ತುರ್ತು ಪರಿಸ್ಥಿತಿ ಹಿನ್ನೆಲೆಯಲ್ಲಿ ಕೆಎಂಎಫ್ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ನಡೆದ ಚರ್ಚೆಯಲ್ಲಿ ಈ ಸೂಚನೆ ನೀಡಿ, ಕೋವಿಡ್-19 ವೈರಸ್ ಹಾವಳಿಯಿಂದ ಉಂಟಾದ ಕ್ಲಿಷ್ಟಕರ ಸಂದರ್ಭದಲ್ಲಿ ಪಶು ಆಹಾರಕ್ಕೆ ತೊಂದರೆ ಆಗಬಾರದು. ಈ ಹಿನ್ನೆಲೆಯಲ್ಲಿ ಎಪ್ರಿಲ್ ಅಂತ್ಯದವರೆಗೂ ಪ್ರತಿ ಟನ್ ಪಶು ಆಹಾರಕ್ಕೆ 500 ರೂ. ರಿಯಾಯಿತಿ ನೀಡಬೇಕು ಎಂದರು.
ಲಾಕ್ಡೌನ್ ಅವಧಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಯಂ ಸಿಬಂದಿಗೆ ನಿತ್ಯ ಒಂದು ದಿನದ ಹೆಚ್ಚುವರಿ ವೇತನ ನೀಡಲು ಅಥವಾ ಪರಿಹಾರ ರಜೆಗೂ ಅವಕಾಶ, ಗುತ್ತಿಗೆ ನೌಕರರು ಪ್ರತಿ ದಿನ 500 ರೂ. ಹೆಚ್ಚುವರಿಯಾಗಿ ಹಾಗೂ ಹಾಲು ಮತ್ತದರ ಉತ್ಪನ್ನಗಳ ಸಾಗಣೆ ಮಾಡುವ ವಾಹನ ಚಾಲನಾ ಸಿಬಂದಿಗೆ ಪ್ರೋತ್ಸಾಹಧನ ರೂಪದಲ್ಲಿ ನೀಡುವುದು, ಈ ಪ್ರೋತ್ಸಾಹಧನವನ್ನು ಸಿದ್ಧ ಪಶು ಆಹಾರ ಮತ್ತು ಕಚ್ಚಾ ಆಹಾರ ಪೂರೈಸುವ ವಾಹನ ಚಾಲಕರು, ಹಾಲು ಮತ್ತದರ ಉತ್ಪನ್ನಗಳನ್ನು ಸಾಗಿಸುವ ಚಾಲನಾ ಸಿಬಂದಿಗೂ ನೀಡಲು ತೀರ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State government: ರಾಜ್ಯ ಸರಕಾರಕ್ಕೆ ಎನ್ಸಿಬಿ ನೋಟಿಸ್?
Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ