ಡಿಕೆಶಿ, ರಮೇಶ್, ಲಕ್ಷ್ಮೀ ವೈಯಕ್ತಿಕ ನಿಂದನೆ ಬಿಡಲಿ: ಬಾಲಚಂದ್ರ ಜಾರಕಿಹೊಳಿ ಮನವಿ
Team Udayavani, Jan 31, 2023, 8:57 PM IST
ಬೆಳಗಾವಿ: ಮೂರೂ ಕುಟುಂಬಗಳು ರಾಜಕೀಯವಾಗಿ ಬೆಳೆದಿವೆ. ಚುನಾವಣೆ ಸಮೀಪಿಸುತ್ತಿರುವುದರಿಂದ ರಮೇಶ ಜಾರಕಿಹೊಳಿ, ಡಿ.ಕೆ. ಶಿವಕುಮಾರ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರು ವೈಯಕ್ತಿಕ ದ್ವೇಷ, ನಿಂದನೆ ಮಾಡುವುದು ಬೇಡ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕೈಮುಗಿದು ಮನವಿ ಮಾಡಿದರು.
ಗೋಕಾಕ ತಾಲೂಕಿನ ಖಂಡ್ರಟ್ಟಿ ಗ್ರಾಮದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಮೀಪಿಸುತ್ತಿದ್ದಂತೆ ವೈಯಕ್ತಿಕ ಟೀಕೆ ಟಿಪ್ಪಣಿ ಮಾಡುವುದು ಬೇಡ. ರಾಜಕೀಯವಾಗಿ ಎಲ್ಲರೂ ಬೆಳೆದಿದ್ದೀರಿ, ಬಹಿರಂಗ ಹೇಳಿಕೆ ನೀಡುವುದು ಬೇಡ. ಮೂರೂ ಕುಟುಂಬಗಳು ರಾಜಕೀಯವಾಗಿ ಬೆಳೆದಿವೆ, ಸಾರ್ವಜನಿಕವಾಗಿ ಕಿತ್ತಾಟ ಬೇಡ ಎಂದು ಮನವಿ ಮಾಡಿದರು.
ರಮೇಶ ಜಾರಕಿಹೊಳಿ ಅವರಿಗೆ ಅನ್ಯಾಯ ಆಗಿರುವುದು ನಿಜ, ಅದಕ್ಕೆ ಹೋರಾಟ ಮಾಡಲಿ. ಸಾರ್ವಜನಿಕವಾಗಿ ಟೀಕೆ ಟಿಪ್ಪಣಿ ಮಾಡುವುದು ಬೇಡ ಎಂದು ಬಾಲಚಂದ್ರ ಮನವಿ ಮಾಡಿದರು.
ಇದನ್ನೂ ಓದಿ: ಬೆಳಗಾವಿಯಲ್ಲಿದೆ ಸಿಡಿ ಫ್ಯಾಕ್ಟರಿ: ಲಖನ್ ಜಾರಕಿಹೊಳಿ ಕಿಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಜಮೀನು,ಚಿನ್ನ,ಟ್ರ್ಯಾಕ್ಟರ್, ವಾಹನ.. ತಂಗಿ ಮದುವೆಗೆ 8ಕೋಟಿ ರೂ. ವರದಕ್ಷಿಣೆ ನೀಡಿದ ಸಹೋದರರು
ಬಳ್ಳಾರಿ ಪಾಲಿಕೆ ಮೇಯರ್ ಆಗಿ ಕಾಂಗ್ರೆಸ್ ನ ತ್ರಿವೇಣಿ ಆಯ್ಕೆ,ಜಾನಕಿ ಉಪಮೇಯರ್
ಅಳಿಯನೇ ಪಕ್ಷದ ಅಭ್ಯರ್ಥಿಯಾಗಿರುವಾಗ ಭಿನ್ನಮತದ ಮಾತೆಲ್ಲಿ: ಕಾಗೋಡು ಪ್ರಶ್ನೆ
ಕಿಷ್ಕಿಂಧಾ ಅಂಜನಾದ್ರಿ ಹುಂಡಿ ಎಣಿಕೆ: 10.65 ಲಕ್ಷ ರೂ.ಸಂಗ್ರಹ
ಆಮೆ ಮತ್ತು ಮೊಲದ ಓಟ : ಅತೀ ಉತ್ಸಾಹವೇ ಈತನಿಗೆ ಮುಳುವಾಯ್ತು!!