ಕದ್ರಿ ಪಾರ್ಕ್: ಬಾಲ ಮಂಗಳ ಎಕ್ಸ್ಪ್ರೆಸ್ ರೈಲಿಗೆ ಸಿಗುತ್ತಿಲ್ಲ ನಿರೀಕ್ಷಿತ ಸ್ಪಂದನೆ
Team Udayavani, Jan 15, 2022, 12:46 PM IST
ಕದ್ರಿ: ಸುಮಾರು ಒಂದು ವರ್ಷದ ಬಳಿಕ ಎರಡು ತಿಂಗಳ ಹಿಂದೆ ಓಡಾಟ ಆರಂಭಿಸಿದ್ದ ಕದ್ರಿ ಪಾರ್ಕ್ನ ಬಾಲಮಂಗಳ ಎಕ್ಸ್ಪ್ರೆಸ್ ಪುಟಾಣಿ ರೈಲಿಗೆ ಸಾರ್ವಜನಿಕರಿಂದ ನಿರೀಕ್ಷಿತ ಸ್ಪಂದನೆ ಸಿಗುತ್ತಿಲ್ಲ.
ಕದ್ರಿ ಪಾರ್ಕ್ಗೆ ಸಾಮಾನ್ಯವಾಗಿ ಶನಿವಾರ ಮತ್ತು ರವಿವಾರದಂದು ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತ್ತಾರೆ. ಆದರೆ, ಸದ್ಯ ವಾರಾಂತ್ಯ ಕರ್ಫ್ಯೂ ವಿಧಿಸಿದ ಪರಿಣಾಮ ಪಾರ್ಕ್ಗಳು ಸಾರ್ವಜನಿಕರ ಭೇಟಿಗೆ ತೆರೆದಿಲ್ಲ. ಇನ್ನು, ಸೋಮವಾರದಿಂದ ಶುಕ್ರವಾರದವರೆಗೆ ಪಾರ್ಕ್ಗೆ ಭೇಟಿ ನೀಡುವವರ ಸಂಖ್ಯೆಯೂ ಕಡಿಮೆ ಇದೆ. ಇದೇ ಕಾರಣಕ್ಕೆ ಪುಟಾಣಿ ರೈಲಿಗೆ ಕಡಿಮೆ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದಾರೆ. ಇದರಿಂದ ನಷ್ಟ ಉಂಟಾಗುತ್ತಿದೆ.
ಬಾಲಮಂಗಳ ಎಕ್ಸ್ಪ್ರೆಸ್ ಪುಟಾಣಿ ರೈಲು ಮತ್ತಷ್ಟು ಆಕರ್ಷಿಸಲು ಸದ್ಯದಲ್ಲೇ ಹೊಸ ಎಂಜಿನ್ ಸೇರ್ಪಡೆಗೊಳ್ಳುವ ಸಾಧ್ಯತೆ ಇದೆ. ಮಳೆಗಾಲ ಸಹಿತ ಕೆಲವೊಂದು ದಿನ ಪುಟಾಣಿ ರೈಲಿನಲ್ಲಿ ತಾಂತ್ರಿಕ ದೋಷ ಕಂಡುಬರುತ್ತಿತ್ತು. ಸದ್ಯ ಗೇರ್ಲೆಸ್ ಇಂಜಿನ್ ಇದ್ದು, ಇದರಿಂದಾಗಿ ರೈಲಿನ ಇಂಜಿನ್ ಸಾಮರ್ಥ್ಯ ಕಡಿಮೆ ಇತ್ತು. ರೈಲಿನ ಹಳಿಯ ಕೆಲವೊಂದು ಕಡೆ ವೇಗ ಕಡಿಮೆ ಇರುತ್ತಿತ್ತು. ಇದರಿಂದ ರೈಲು ಅರ್ಧದಲ್ಲಿಯೇ ನಿಲ್ಲುತ್ತಿತ್ತು. ಇದೇ ಕಾರಣಕ್ಕೆ ಮುಂದಿನ ದಿನಗಳಲ್ಲಿ ಗೇರ್ ವ್ಯವಸ್ಥೆ ಹೊಂದಿರುವ ಇಂಜಿನ್ ಬೇಕೆಂದು ಬೇಡಿಕೆ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಹೊಸ ಇಂಜಿನ್ ಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ರಾಜ್ಯ ಸರಕಾರಕ್ಕೆ ಪತ್ರ ಬರೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್
Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ
Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ