ತಮಿಳುನಾಡು ಮೀನುಗಾರರಿಂದ ಆಕ್ರಮಣ

ರಿಬ್ಬನ್‌ ಫಿಶ್‌ ಮೀನುಗಾರಿಕೆಗೆ ತಡೆ; ಕಡಲಿನಲ್ಲಿ ಅಂತಾರಾಜ್ಯ ಸಂಘರ್ಷಕ್ಕೆ ನಾಂದಿ ?

Team Udayavani, Feb 11, 2023, 7:33 AM IST

ತಮಿಳುನಾಡು ಮೀನುಗಾರರಿಂದ ಆಕ್ರಮಣ

ಮಂಗಳೂರು: ರಾಜ್ಯದ ಮೀನುಗಾರರ ಮೇಲೆ ತಮಿಳುನಾಡು ಮೀನುಗಾರರು ಆಳಸಮುದ್ರದಲ್ಲಿ ಆಕ್ರಮಣ ನಡೆಸಿದ್ದು ಸಂಘರ್ಷ, ಅಂತಾರಾಜ್ಯ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.

ಆಳಸಮುದ್ರಕ್ಕೆ ಸ್ಮಾಲ್‌ ರಿಬ್ಬನ್‌ ಫಿಶ್‌ (ಪಾಂಬೋಲ್‌ ಮೀನು) ಹಿಡಿಯಲು ತೆರಳಿದ್ದ ಮಂಗಳೂರು ಮತ್ತು ಉಡುಪಿ ಭಾಗದ ಸುಮಾರು 300 ಬೋಟ್‌ಗಳಿಗೆ ಬುಧವಾರ ಸಮುದ್ರ ಮಧ್ಯದಲ್ಲೇ ತಡೆಯೊಡ್ಡಲಾಗಿದೆ.

ಬೋಟ್‌ಗಳನ್ನು ಹಿಂಬಾಲಿಸಿಕೊಂಡು ಬಂದು ಸುತ್ತುವರಿದು ನಿರಂತರವಾಗಿ ಕಲ್ಲು ಮತ್ತಿತರ ಸಾಮಗ್ರಿಗಳನ್ನು ಎಸೆದು ದಾಳಿ ನಡೆಸಲಾಗಿದ್ದು, 10ಕ್ಕೂ ಅಧಿಕ ಬೋಟ್‌ಗಳಿಗೆ ಹಾನಿಯಾಗಿದೆ. ಕೆಲವು ಬೋಟ್‌ಗಳು ದಾಳಿಯಿಂದ ತಪ್ಪಿಸಿಕೊಂಡು ಮಂಗಳೂರಿನತ್ತ ಪ್ರಯಾಣ ಬೆಳೆಸಿವೆ.

ನಡೆದದ್ದೇನು?
ಪ್ರತೀ ವರ್ಷದಂತೆ ಈ ವರ್ಷವೂ ಸುಮಾರು ಮೂರು ತಿಂಗಳುಗಳಿಂದ ಮಂಗಳೂರಿನ ಸುಮಾರು 200 ಮತ್ತು ಮಲ್ಪೆ, ಉಡುಪಿ ಭಾಗದ ಸುಮಾರು 100 ಬೋಟ್‌ಗಳು ಆಳಸಮುದ್ರಕ್ಕೆ ತೆರಳಿ ಮೀನುಗಾರಿಕೆ ನಡೆಸುತ್ತಿದ್ದು, ಕಳೆದ ಬುಧವಾರ ತಮಿಳುನಾಡು ಮೀನುಗಾರರು ದಾಳಿ ಆರಂಭಿಸಿದ್ದಾರೆ. ಸಂಜೆ ವೇಳೆಗೆ ಬೋಟ್‌ಗಳನ್ನು ಸುತ್ತುವರೆದು ಕಲ್ಲು, ರೀಪುಗಳನ್ನು ಎಸೆದು ಹಾನಿ ಮಾಡಲಾಗಿದೆ. ಬೋಟ್‌ನಲ್ಲಿದ್ದ ಪರಿಕರಗಳನ್ನು ನೀರಿಗೆ ಎಸೆಯಲಾಗಿದೆ. ಇದರಿಂದಾಗಿ 1,500ಕ್ಕೂ ಅಧಿಕ ಮಂದಿ ಮೀನುಗಾರರು ತಮ್ಮ ಮೀನುಗಾರಿಕೆ ಮೊಟಕುಗೊಳಿಸಿ ಬರಿಗೈಯಲ್ಲಿ ವಾಪಸಾಗುತ್ತಿರುವುದು ಮಾತ್ರವಲ್ಲದೆ ಒಂದೊಂದು ಬೋಟ್‌ಗಳಿಗೆ ಕನಿಷ್ಠ 10 ಲ.ರೂ. ಹಾನಿ ಉಂಟಾಗಿದೆ.

ಕೈಹಿಡಿದಿದ್ದ ರಿಬ್ಬನ್‌ ಫಿಶ್‌
ಕಡಲಲ್ಲಿ ಮೀನಿನ ಕ್ಷಾಮ ಉಂಟಾಗಿ ಆಳ ಸಮುದ್ರ ಮೀನುಗಾರರು ತೊಂದರೆಯಲ್ಲಿದ್ದಾಗ ಅವರಿಗೆ ರಿಬ್ಬನ್‌ ಫಿಶ್‌ ನೆರವಾಗಿತ್ತು. ಅದರಿಂದ ಆದಾಯ ಗಳಿಸುತ್ತಿದ್ದರು. ಸಣ್ಣ ರಿಬ್ಬನ್‌ ಫಿಶ್‌ಗಳನ್ನು ಫಿಶ್‌ಮೀಲ್‌ಗ‌ಳಿಗೆ ನೀಡಲಾಗುತ್ತದೆ. ಆದರೆ ಈಗ ತಮಿಳುನಾಡು ಮೀನುಗಾರ ಆಕ್ರಮಣದಿಂದಾಗಿ ಸಾವಿರಾರು ಮಂದಿ ಮೀನುಗಾರರ ಬದುಕಿಗೆ ಪೆಟ್ಟು ಬಿದ್ದಿದೆ ಎಂದು ರಾಜ್ಯದ ಮೀನುಗಾರರು ಅಲವತ್ತುಕೊಂಡಿದ್ದಾರೆ.

ಮೀನುಗಾರರ ನಡುವೆ ಸಂಘರ್ಷದ ಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ತಮಿಳುನಾಡು ಮೀನುಗಾರರ ಆಕ್ರಮಣವೇ ಕಾರಣ ಎಂದು ಮೀನುಗಾರರು ದೂರಿದ್ದಾರೆ.

ತೀರದಿಂದ 12 ನಾಟಿಕಲ್‌ ಮೈಲಿನ ಅನಂತರ (ಆಳಸಮುದ್ರ) ಯಾರು ಕೂಡ ಮೀನುಗಾರಿಕೆ ನಡೆಸಬಹುದು. ಅದು ಯಾವುದೇ ರಾಜ್ಯಕ್ಕೆ ಸೇರಿದ ವ್ಯಾಪ್ತಿ ಅಲ್ಲ. ಹಾಗಾಗಿ ನಮ್ಮ ಮೀನುಗಾರರು ಅತಿಕ್ರಮಣ ನಡೆಸುವ ಪ್ರಶ್ನೆಯೇ ಬರುವುದಿಲ್ಲ. ಆದರೆ ತ.ನಾಡು ಮೀನುಗಾರರು ಅಪ್ರಚೋದಿತವಾಗಿ ಆಕ್ರಮಣ ನಡೆಸಿದ್ದಾರೆ. ನಮ್ಮ ರಾಜ್ಯ ವ್ಯಾಪ್ತಿಯಲ್ಲಿ ಅವರು ಮೀನುಗಾರಿಕೆ ನಡೆಸುತ್ತಾರೆ. ಆದರೆ ನಾವು ಅವರಿಗೆ ತೊಂದರೆ ನೀಡು ತ್ತಿಲ್ಲ. ಜಿಲ್ಲಾಧಿಕಾರಿ, ಸರಕಾರ ಕೂಡಲೇ ಮಧ್ಯಪ್ರವೇಶಿಸಿ ನ್ಯಾಯ ದೊರಕಿಸಿ ಕೊಡಬೇಕು.
-ಮೋಹನ್‌ ಬೆಂಗ್ರೆ, ಮೀನುಗಾರರ ಸಂಘದ ಪ್ರಮುಖರು

ರಾಜ್ಯದ ಮೀನುಗಾರರ ಮೇಲೆ ತಮಿಳುನಾಡು ಮೀನುಗಾರರು ದಾಳಿ ನಡೆಸುತ್ತಿರುವ ಆರೋಪಗಳು ಕೇಳಿಬಂದಿದ್ದು, ಬುಧವಾರ ನಡೆದಿರುವ ಆಕ್ರಮಣದ ವೀಡಿಯೋಗಳು ಲಭ್ಯವಾಗಿವೆ. ಇದು ಅಂತಾರಾಜ್ಯ ವಿಚಾರವಾಗಿರುವುದರಿಂದ ಸರಕಾರ ಮಟ್ಟದಲ್ಲಿ ಕ್ರಮ ತೆಗೆದುಕೊಳ್ಳಬೇಕಾಗಿದೆ. ನಮ್ಮ ರಾಜ್ಯ ವ್ಯಾಪ್ತಿಯಲ್ಲಿ ತಮಿಳುನಾಡಿನವರು ಅನಧಿಕೃತವಾಗಿ ಮೀನುಗಾರಿಕೆ ನಡೆಸಿದರೆ ಕ್ರಮ ಕೈಗೊಳ್ಳುತ್ತೇವೆ.
-ಹರೀಶ್‌ ಕುಮಾರ್‌, ಉಪನಿರ್ದೇಶಕರು, ಮೀನುಗಾರಿಕಾ ಇಲಾಖೆ, ದ.ಕ.

– ಸಂತೋಷ್‌ ಬೊಳ್ಳೆಟ್ಟು

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.