ಜೀವನದಲ್ಲಿ ಜಿಗುಪ್ಸೆ : ನೇಣು ಬಿಗಿದುಕೊಂಡು ವ್ಯಾಪಾರಿ ಆತ್ಮಹತ್ಯೆ
Team Udayavani, Sep 24, 2021, 6:40 PM IST
ಬನಹಟ್ಟಿ : ಮನೆಯಲ್ಲಿನ ಬೆಡ್ರೂಮಿನಲ್ಲಿದ್ದ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದುಕೊಂಡು ಕಿರಾಣಿ ವ್ಯಾಪಾರಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬನಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬನಹಟ್ಟಿಯ ಉಮದಿ ಲೇನ್ದಲ್ಲಿರುವ ಹೆಸರಾಂತ ಕಿರಾಣಿ ಸಗಟು ವ್ಯಾಪಾರಿ ಶ್ರೀಶೈಲ ಸಿದ್ರಾಯಪ್ಪ ಸಜ್ಜನ(48) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈತ ಗುರುವಾರ (ಸೆ.23) ದಂದು ಮಧ್ಯಾಹ್ನ ೧ ಗಂಟೆ ಸುಮಾರಿಗೆ ಮನೆಯಲ್ಲಿನ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದುಕೊಂಡಿದ್ದಾನೆ, ಘಟನೆ ನಡೆದ ಕೂಡಲೇ ಆತನನ್ನು ರಾಮಪೂರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ದಾಖಲಿಸಿದ್ದಾರೆ ಆದರೆ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ (ಸೆ.24) ದಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಮೃತಪಟ್ಟಿರುವದಾಗಿ ಪೊಲೀಸ್ ವರದಿಯಿಂದ ತಿಳಿದು ಬಂದಿದೆ.
ಈತನ ಕಿರಾಣಿ ಅಂಗಡಿಯು ಕಳೆದೊಂದು ವರ್ಷದಿಂದ ವ್ಯಾಪಾರ ಸರಿಯಾಗಿ ನಡೆಯದ ಕಾರಣ ಮಾನಸಿಕವಾಗಿ ಬಳಲಿ ಜೀವನದಲ್ಲಿ ಜಿಗುಪ್ಸೆಗೊಂಡು ತನ್ನ ಮನೆಯ ಮೂರನೇಯ ಮಹಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಮೃತನ ಪತ್ನಿ ಸರೋಜಿನಿ ಸಜ್ಜನ ದೂರಿನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ :ಬೆಳಗಾವಿ : ಗದ್ದೆಯಲ್ಲಿ ಹೆಣ್ಣು ಮಗು ಬಿಸಾಕಿದ ಪಾಪಿಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು